ಗಂಗಾವತಿ ತಾಲ್ಲೂಕಿನ ಅಂಜನಾದ್ರಿಯಲ್ಲಿ ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿ, ‘ಈ ಯೋಜನೆ ಆರಂಭಿಸಿದಾಗ ರಾಜ್ಯದಲ್ಲಿ ನಿತ್ಯ 84 ಲಕ್ಷ ಪ್ರಯಾಣಿಕರು ಬಸ್ಗಳಲ್ಲಿ ಸಂಚರಿಸುತ್ತಿದ್ದರು. ಇದರಲ್ಲಿ ಶೇ 50ರಷ್ಟು ಮಹಿಳೆಯರು ಎನ್ನುವ ಸರಾಸರಿ ಲೆಕ್ಕಾಚಾರದಲ್ಲಿ ಈ ಆರ್ಥಿಕ ವರ್ಷದ ಅಂತ್ಯಕ್ಕೆ ₹2,800 ಕೋಟಿ ಮೀಸಲಿಟ್ಟಿದ್ದೆವು. ಈಗ ನಿತ್ಯ ಓಡಾಡುವವರ ಪ್ರಯಾಣಿಕರ ಸಂಖ್ಯೆ ₹1.10 ಕೋಟಿಗೆ ಏರಿಕೆಯಾಗಿದೆ’ ಎಂದು ತಿಳಿಸಿದರು.