<p><strong>ಗಂಗಾವತಿ: </strong>ತುಂಗಭದ್ರಾ ಜಲಾಶಯದಿಂದ ಪಾವಗಡಕ್ಕೆ ಒಯ್ಯುವ ಮೂಲಕ ರಾಜ್ಯ ಸರ್ಕಾರ ತುಂಗಭದ್ರಾ ಅಚ್ಚುಕಟ್ಟು ಪ್ರದೇಶದ ರೈತರಿಗೆ ವಂಚನೆ ಮಾಡುತ್ತಿದೆ ಎಂದು ಬಿಜೆಪಿ ರೈತ ಮೋರ್ಚಾದ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಜೆ.ಎಚ್.ಎಂ. ತಿಪ್ಪೆರುದ್ರಸ್ವಾಮಿ ಆರೋಪಿಸಿದರು.</p>.<p>ತುಂಗಭದ್ರಾ ಅಚ್ಚುಕಟ್ಟು ಪ್ರದೇಶದ ರೈತರ ಹಿತರಕ್ಷಣೆಗಾಗಿ ಹಮ್ಮಿಕೊಳ್ಳಬೇಕಿರುವ ಹೋರಾಟದ ಬಗ್ಗೆ ರೈತರೊಂದಿಗೆ ಭಾನುವಾರ ಚರ್ಚಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.</p>.<p>ತುಂಗಭದ್ರಾ ಜಲಾಶಯದಲ್ಲಿ ನೀರಿನ ಸಂಗ್ರಹ ಸಾಮರ್ಥ್ಯ ಹೆಚ್ಚಿಸಲು ಕ್ರಮ ಕೈಗೊಳ್ಳುವ ಬದಲಿಗೆ ಸರ್ಕಾರ, ನೀರಿನ ಕೊರತೆಯ ಮಧ್ಯೆಯೂ ತುಂಗಭದ್ರಾ ಜಲಾಶಯದಿಂದ ಪಾವಗಡಕ್ಕೆ ಕುಡಿಯುವ ನೀರು ನೀಡುವ ಯೋಜನೆಗೆ ಕೈಹಾಕಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಸದ್ಯ ಜಲಾಶಯದಲ್ಲಿ ಲಭ್ಯ ಇರುವ ನೀರಿನಲ್ಲಿ ಮಾರ್ಚ್ ಮಧ್ಯಭಾಗದವರೆಗೂ ಎರಡನೇ ಬೆಳೆಗೆ ನೀರು ಹರಿಸಲು ಸಾಧ್ಯ. ಆದರೆ, ಅಧಿಕಾರಿಗಳು ಫೆ.28ರವರೆಗೆ ಮಾತ್ರ ನೀರು ಕೊಡಲು ಸಾಧ್ಯ ಎಂದು ಹೇಳುತ್ತಿದ್ದಾರೆ ಎಂದರು.</p>.<p>ಬಳ್ಳಾರಿ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಯ ಜಿಲ್ಲಾ ಉಸ್ತುವಾರಿ ಸಚಿವರು ಈ ಬಗ್ಗೆ ಕೂಡಲೆ ಗಮನ ಹರಿಸಿ ಎರಡನೇ ಬೆಳೆಗೆ ನೀರು ಹರಿಸಲು ಸಾಧ್ಯವಾಗುತ್ತದೆಯೋ, ಇಲ್ಲವೋ ಎಂಬುವುದರ ಬಗ್ಗೆ ಅಧಿಕೃತ ಘೋಷಣೆ ಮಾಡಬೇಕು ಎಂದು ಒತ್ತಾಯಿಸಿದರು.</p>.<p>ಜಲಾಶಯದ ಹೂಳು ಎತ್ತಲು ಸಾಧ್ಯವಾಗದಿದ್ದಲ್ಲಿ ಪರ್ಯಾಯವಾಗಿ ಸಮನಾಂತರ ಜಲಾಶಯ ಯೋಜನೆ ರೂಪಿಸುವಂತೆ ಸಾಕಷ್ಟು ಬಾರಿ ಸರ್ಕಾರಕ್ಕೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ ಎಂದು ಆರೋಪಿಸಿದರು.</p>.<p>ಬಿಜೆಪಿ ಹಿರಿಯ ಮುಖಂಡರಾದ ಎಚ್.ಎಂ. ಸಿದ್ದರಾಮಯ್ಯ ಸ್ವಾಮಿ, ಟಿವಿಎಸ್ ಸತ್ಯನಾರಾಯಣ ಬಾಪಿರೆಡ್ಡಿ ಕ್ಯಾಂಪ್ ಕೆಎಂಎಫ್ ಒಕ್ಕೂಟದ ಮಾಜಿ ಅಧ್ಯಕ್ಷ ಎಂ. ಸತ್ಯನಾರಾಯಣ, ರೈತ ಮುಖಂಡ ಮಲ್ಲಿಕಾರ್ಜುನಗೌಡ ಪೊಲೀಸ್ ಪಾಟೀಲ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗಂಗಾವತಿ: </strong>ತುಂಗಭದ್ರಾ ಜಲಾಶಯದಿಂದ ಪಾವಗಡಕ್ಕೆ ಒಯ್ಯುವ ಮೂಲಕ ರಾಜ್ಯ ಸರ್ಕಾರ ತುಂಗಭದ್ರಾ ಅಚ್ಚುಕಟ್ಟು ಪ್ರದೇಶದ ರೈತರಿಗೆ ವಂಚನೆ ಮಾಡುತ್ತಿದೆ ಎಂದು ಬಿಜೆಪಿ ರೈತ ಮೋರ್ಚಾದ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಜೆ.ಎಚ್.ಎಂ. ತಿಪ್ಪೆರುದ್ರಸ್ವಾಮಿ ಆರೋಪಿಸಿದರು.</p>.<p>ತುಂಗಭದ್ರಾ ಅಚ್ಚುಕಟ್ಟು ಪ್ರದೇಶದ ರೈತರ ಹಿತರಕ್ಷಣೆಗಾಗಿ ಹಮ್ಮಿಕೊಳ್ಳಬೇಕಿರುವ ಹೋರಾಟದ ಬಗ್ಗೆ ರೈತರೊಂದಿಗೆ ಭಾನುವಾರ ಚರ್ಚಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.</p>.<p>ತುಂಗಭದ್ರಾ ಜಲಾಶಯದಲ್ಲಿ ನೀರಿನ ಸಂಗ್ರಹ ಸಾಮರ್ಥ್ಯ ಹೆಚ್ಚಿಸಲು ಕ್ರಮ ಕೈಗೊಳ್ಳುವ ಬದಲಿಗೆ ಸರ್ಕಾರ, ನೀರಿನ ಕೊರತೆಯ ಮಧ್ಯೆಯೂ ತುಂಗಭದ್ರಾ ಜಲಾಶಯದಿಂದ ಪಾವಗಡಕ್ಕೆ ಕುಡಿಯುವ ನೀರು ನೀಡುವ ಯೋಜನೆಗೆ ಕೈಹಾಕಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಸದ್ಯ ಜಲಾಶಯದಲ್ಲಿ ಲಭ್ಯ ಇರುವ ನೀರಿನಲ್ಲಿ ಮಾರ್ಚ್ ಮಧ್ಯಭಾಗದವರೆಗೂ ಎರಡನೇ ಬೆಳೆಗೆ ನೀರು ಹರಿಸಲು ಸಾಧ್ಯ. ಆದರೆ, ಅಧಿಕಾರಿಗಳು ಫೆ.28ರವರೆಗೆ ಮಾತ್ರ ನೀರು ಕೊಡಲು ಸಾಧ್ಯ ಎಂದು ಹೇಳುತ್ತಿದ್ದಾರೆ ಎಂದರು.</p>.<p>ಬಳ್ಳಾರಿ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಯ ಜಿಲ್ಲಾ ಉಸ್ತುವಾರಿ ಸಚಿವರು ಈ ಬಗ್ಗೆ ಕೂಡಲೆ ಗಮನ ಹರಿಸಿ ಎರಡನೇ ಬೆಳೆಗೆ ನೀರು ಹರಿಸಲು ಸಾಧ್ಯವಾಗುತ್ತದೆಯೋ, ಇಲ್ಲವೋ ಎಂಬುವುದರ ಬಗ್ಗೆ ಅಧಿಕೃತ ಘೋಷಣೆ ಮಾಡಬೇಕು ಎಂದು ಒತ್ತಾಯಿಸಿದರು.</p>.<p>ಜಲಾಶಯದ ಹೂಳು ಎತ್ತಲು ಸಾಧ್ಯವಾಗದಿದ್ದಲ್ಲಿ ಪರ್ಯಾಯವಾಗಿ ಸಮನಾಂತರ ಜಲಾಶಯ ಯೋಜನೆ ರೂಪಿಸುವಂತೆ ಸಾಕಷ್ಟು ಬಾರಿ ಸರ್ಕಾರಕ್ಕೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ ಎಂದು ಆರೋಪಿಸಿದರು.</p>.<p>ಬಿಜೆಪಿ ಹಿರಿಯ ಮುಖಂಡರಾದ ಎಚ್.ಎಂ. ಸಿದ್ದರಾಮಯ್ಯ ಸ್ವಾಮಿ, ಟಿವಿಎಸ್ ಸತ್ಯನಾರಾಯಣ ಬಾಪಿರೆಡ್ಡಿ ಕ್ಯಾಂಪ್ ಕೆಎಂಎಫ್ ಒಕ್ಕೂಟದ ಮಾಜಿ ಅಧ್ಯಕ್ಷ ಎಂ. ಸತ್ಯನಾರಾಯಣ, ರೈತ ಮುಖಂಡ ಮಲ್ಲಿಕಾರ್ಜುನಗೌಡ ಪೊಲೀಸ್ ಪಾಟೀಲ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>