<p><strong>ಕುಷ್ಟಗಿ: </strong>ನಿಯಮ ಉಲ್ಲಂಘಿಸಿ ನಿವೇಶನ ದಾಖಲೆ (ಫಾರ್ಮ್ ನಂ 3) ಗಳನ್ನು ನೀಡುವ ಮೂಲಕ ಇಲ್ಲಿಯ ಪುರಸಭೆಯಲ್ಲಿ ಈ ಹಿಂದೆ ಅಧಿಕಾರದಲ್ಲಿದ್ದ ಅಧಿಕಾರಿಗಳು ಮತ್ತು ಸಿಬ್ಬಂದಿ ಅಕ್ರಮದಲ್ಲಿ ಭಾಗಿಯಾಗಿರುವುದರ ಸಮಗ್ರ ತನಿಖೆ ನಡೆಸಿ ಕ್ರಮ ಕೈಗೊಳ್ಳಲು ಜಿಲ್ಲಾಡಳಿತ ಮುಂದಾಗಿದೆ.</p>.<p>ಪುರಸಭೆಯ ವ್ಯಾಪ್ತಿಯಲ್ಲಿರುವ ಬಹಳಷ್ಟು ಬಡಾವಣೆಗಳು ಅಭಿವೃದ್ಧಿಗೊಂಡಿಲ್ಲ. ಅಲ್ಲಿ ಮೂಲಸೌಲಭ್ಯಗಳೂ ಇಲ್ಲ. ಆದರೂ ಮನೆಗಳು ನಿರ್ಮಾಣಗೊಂಡಿವೆ. ಕಳೆದ ಕೆಲ ವರ್ಷಗಳಿಂದ ಈ ವಿಷಯದಲ್ಲಿ ಮುಖ್ಯಾಧಿಕಾರಿಗಳು ಹಾಗೂ ಸಂಬಂಧಿಸಿದ ಶಾಖೆಯ ಸಿಬ್ಬಂದಿ ನಿಯಮಬಾಹಿರವಾಗಿ ಉತಾರಗಳನ್ನು ನೀಡುವ ಮೂಲಕ ಬಡಾವಣೆಗಳ ಮಾಲೀಕರಿಗೆ ನೆರವಾಗಿರುವುದು ಸ್ಪಷ್ಟವಾಗಿದೆ. ಬಡಾವಣೆ ಮಾಲೀಕರುಗಳು, ಚುನಾಯಿತ ಪ್ರತಿನಿಧಿಗಳೊಂದಿಗೆ ಶಾಮೀಲಾಗಿ ಅಕ್ರಮ ನಡೆಸುವ ಮೂಲಕ ಪುರಸಭೆಯನ್ನು ಭ್ರಷ್ಟಾಚಾರದ ಕೂಪವನ್ನಾಗಿಸಿದ್ದಾರೆ.</p>.<p>ಹಾಗಾಗಿ ಈ ಅಕ್ರಮಕ್ಕೆ ಕಡಿವಾಣ ಹಾಕಲು ಮುಂದಿನ ದಿನಗಳಲ್ಲಿ ಇಂಥಹ ತಪ್ಪುಗಳು ಮರುಕಳಿಸಬಾರದು. ಈ ಹಿಂದೆ ಯಾರ ಅವಧಿಯಲ್ಲಿ ಏನೇನು ಅವ್ಯವಹಾರಗಳು ನಡೆದಿವೆ. ನಿಯಮಗಳನ್ನು ಪಾಲಿಸಲಾಗಿದೆ ಇಲ್ಲವೆ ಎಂಬುದನ್ನು ಪತ್ತೆಹಚ್ಚಿ ಸಂಬಂಧಿಸಿದ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಹೊಣೆಗಾರರನ್ನಾಗಿಸಿ ಕ್ರಮ ಕೈಗೊಳ್ಳಲು ಜಿಲ್ಲಾಡಳಿತ ಉದ್ದೇಶಿಸಿದೆ.</p>.<p>ಇದರಿಂದ ಪುರಸಭೆಗೆ ಆಗಿರುವ ನಷ್ಟವನ್ನು ಸಂಬಂಧಿಸಿದ ಅಧಿಕಾರಿಗಳಿಂದ ವಸೂಲಿ ಮಾಡುವ ಚಿಂತನೆ ಇದೆ. ಈ ಕಾರಣಕ್ಕೆ 2015 ರಿಂದ ಇಲ್ಲಿಯವರೆಗೆ ಈ ರೀತಿ ಅಕ್ರಮವಾಗಿ ಉತಾರ ಇತರೆ ದಾಖಲೆ ನೀಡಿಕೆಗೆ ಸಂಬಂಧಿಸಿದಂತೆ ಹಾಲಿ ಮುಖ್ಯಾಧಿಕಾರಿ ಮಂಜುನಾಥ ತಳವಾರ ಅವರಿಗೆ ಜಿಲ್ಲಾ ಅಭಿವೃದ್ಧಿ ಕೋಶದ ಅಧಿಕಾರಿಗಳು ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<p>ಗುರುವಾರ ಪಟ್ಟಣದ ವಿವಿಧ ಬಡಾವಣೆಗಳಿಗೆ ಭೇಟಿ ನೀಡಿದ ಮುಖ್ಯಾಧಿಕಾರಿ ತಳವಾರ, ಅಲ್ಲಿನ ಪರಿಸ್ಥಿತಿಯನ್ನು ಗಮನಿಸಿದರು. ಇದಕ್ಕೆ ಸಂಬಂಧಿಸಿದ ಕಡತಗಳ ಪರಿಶೀಲನೆ ನಡೆಸಿ ಮಾಹಿತಿ ಕಲೆಹಾಕುತ್ತಿದ್ದಾರೆ ಎಂದು ಸಿಬ್ಬಂದಿ ಹೇಳಿದರು.</p>.<p>ವಸತಿ ವಿನ್ಯಾಸ ನಿಯಮಗಳ ಅನುಸಾರ ಹೊಸ ಬಡಾವಣೆಗಳ ನಿರ್ಮಾಣದ ಸಂದರ್ಭದಲ್ಲಿ ರಸ್ತೆ, ಚರಂಡಿ, ಕುಡಿಯುವ ನೀರು, ವಿದ್ಯುತ್ ಸಂಪರ್ಕ, ಉದ್ಯಾನ ಮತ್ತಿತರ ಅಗತ್ಯ ಮೂಲ ಸೌಲಭ್ಯಗಳನ್ನು ಅವುಗಳ ಮಾಲಿಕರೇ ಕಲ್ಪಿಸುವುದು ಕಡ್ಡಾಯ. ಆದರೆ ಪಟ್ಟಣದ ಬಹುತೇಕ ಬಡಾವಣೆಗಳಲ್ಲಿ ಈ ಯಾವ ಅಭಿವೃದ್ಧಿಯೂ ಕಂಡುಬಂದಿಲ್ಲ.</p>.<p>ಕೆಲ ವರ್ಷಗಳ ನಂತರ ಈ ಎಲ್ಲ ಕೆಲಸವನ್ನು ಪುರಸಭೆಯೇ ನಿರ್ವಹಿಸಬೇಕಾದರೆ ಒಂದೊಂದು ಬಡಾವಣೆಗೆ ಕನಿಷ್ಟ ತಲಾ ₹ 35 ರಿಂದ ₹ 45 ಲಕ್ಷ ಹಣ ಬೇಕಾಗುತ್ತದೆ. ಅಧಿಕಾರಿಗಳು ಮಾಡಿದ ತಪ್ಪಿನಿಂದಾಗಿ ಪುರಸಭೆಗೆ ಬಹಳಷ್ಟು ನಷ್ಟವಾಗಿದೆ. ಈ ವಿಷಯದ ಅರಿವು ಇದ್ದರೂ ಹಿಂದಿನ ಅವಧಿಯಲ್ಲಿ ನಿಯಮ ಉಲ್ಲಂಘಿಸಿ ಉತಾರಗಳನ್ನು ನೀಡಲಾಗಿದೆ ಎಂದು ಮುಖ್ಯಾಧಿಕಾರಿ ಮಂಜುನಾಥ ತಳವಾರ ಅವರು ಹೇಳಿದ್ದರೆ.</p>.<p>ಈ ಅಕ್ರಮಗಳಿಗೆ ಸಂಬಂಧಿಸಿದಂತೆ 'ಪ್ರಜಾವಾಣಿ'ಯಲ್ಲಿ ಪ್ರಕಟವಾದ ಸರಣಿ ವರದಿಗಳಿಗೆ ತಕ್ಷಣ ಸ್ಪಂದಿಸಿ ಕ್ರಮಕ್ಕೆ ಮುಂದಾದ ಜಿಲ್ಲಾಧಿಕಾರಿ ವಿಕಾಸ ಕಿಶೋರ ಸುರಳ್ಕರ್ ನಂತರ ಈ ಹಿಂದಿನ ಮುಖ್ಯಾಧಿಕಾರಿ ಉಮೇಶ ಹಿರೇಮಠ ಅವರನ್ನು ಕಡ್ಡಾಯ ರಜೆ ಮೇಲೆ ಕಳುಹಿಸಿ ಸಮಗ್ರ ತನಿಖೆಗೆ ಸೂಚಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಷ್ಟಗಿ: </strong>ನಿಯಮ ಉಲ್ಲಂಘಿಸಿ ನಿವೇಶನ ದಾಖಲೆ (ಫಾರ್ಮ್ ನಂ 3) ಗಳನ್ನು ನೀಡುವ ಮೂಲಕ ಇಲ್ಲಿಯ ಪುರಸಭೆಯಲ್ಲಿ ಈ ಹಿಂದೆ ಅಧಿಕಾರದಲ್ಲಿದ್ದ ಅಧಿಕಾರಿಗಳು ಮತ್ತು ಸಿಬ್ಬಂದಿ ಅಕ್ರಮದಲ್ಲಿ ಭಾಗಿಯಾಗಿರುವುದರ ಸಮಗ್ರ ತನಿಖೆ ನಡೆಸಿ ಕ್ರಮ ಕೈಗೊಳ್ಳಲು ಜಿಲ್ಲಾಡಳಿತ ಮುಂದಾಗಿದೆ.</p>.<p>ಪುರಸಭೆಯ ವ್ಯಾಪ್ತಿಯಲ್ಲಿರುವ ಬಹಳಷ್ಟು ಬಡಾವಣೆಗಳು ಅಭಿವೃದ್ಧಿಗೊಂಡಿಲ್ಲ. ಅಲ್ಲಿ ಮೂಲಸೌಲಭ್ಯಗಳೂ ಇಲ್ಲ. ಆದರೂ ಮನೆಗಳು ನಿರ್ಮಾಣಗೊಂಡಿವೆ. ಕಳೆದ ಕೆಲ ವರ್ಷಗಳಿಂದ ಈ ವಿಷಯದಲ್ಲಿ ಮುಖ್ಯಾಧಿಕಾರಿಗಳು ಹಾಗೂ ಸಂಬಂಧಿಸಿದ ಶಾಖೆಯ ಸಿಬ್ಬಂದಿ ನಿಯಮಬಾಹಿರವಾಗಿ ಉತಾರಗಳನ್ನು ನೀಡುವ ಮೂಲಕ ಬಡಾವಣೆಗಳ ಮಾಲೀಕರಿಗೆ ನೆರವಾಗಿರುವುದು ಸ್ಪಷ್ಟವಾಗಿದೆ. ಬಡಾವಣೆ ಮಾಲೀಕರುಗಳು, ಚುನಾಯಿತ ಪ್ರತಿನಿಧಿಗಳೊಂದಿಗೆ ಶಾಮೀಲಾಗಿ ಅಕ್ರಮ ನಡೆಸುವ ಮೂಲಕ ಪುರಸಭೆಯನ್ನು ಭ್ರಷ್ಟಾಚಾರದ ಕೂಪವನ್ನಾಗಿಸಿದ್ದಾರೆ.</p>.<p>ಹಾಗಾಗಿ ಈ ಅಕ್ರಮಕ್ಕೆ ಕಡಿವಾಣ ಹಾಕಲು ಮುಂದಿನ ದಿನಗಳಲ್ಲಿ ಇಂಥಹ ತಪ್ಪುಗಳು ಮರುಕಳಿಸಬಾರದು. ಈ ಹಿಂದೆ ಯಾರ ಅವಧಿಯಲ್ಲಿ ಏನೇನು ಅವ್ಯವಹಾರಗಳು ನಡೆದಿವೆ. ನಿಯಮಗಳನ್ನು ಪಾಲಿಸಲಾಗಿದೆ ಇಲ್ಲವೆ ಎಂಬುದನ್ನು ಪತ್ತೆಹಚ್ಚಿ ಸಂಬಂಧಿಸಿದ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಹೊಣೆಗಾರರನ್ನಾಗಿಸಿ ಕ್ರಮ ಕೈಗೊಳ್ಳಲು ಜಿಲ್ಲಾಡಳಿತ ಉದ್ದೇಶಿಸಿದೆ.</p>.<p>ಇದರಿಂದ ಪುರಸಭೆಗೆ ಆಗಿರುವ ನಷ್ಟವನ್ನು ಸಂಬಂಧಿಸಿದ ಅಧಿಕಾರಿಗಳಿಂದ ವಸೂಲಿ ಮಾಡುವ ಚಿಂತನೆ ಇದೆ. ಈ ಕಾರಣಕ್ಕೆ 2015 ರಿಂದ ಇಲ್ಲಿಯವರೆಗೆ ಈ ರೀತಿ ಅಕ್ರಮವಾಗಿ ಉತಾರ ಇತರೆ ದಾಖಲೆ ನೀಡಿಕೆಗೆ ಸಂಬಂಧಿಸಿದಂತೆ ಹಾಲಿ ಮುಖ್ಯಾಧಿಕಾರಿ ಮಂಜುನಾಥ ತಳವಾರ ಅವರಿಗೆ ಜಿಲ್ಲಾ ಅಭಿವೃದ್ಧಿ ಕೋಶದ ಅಧಿಕಾರಿಗಳು ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<p>ಗುರುವಾರ ಪಟ್ಟಣದ ವಿವಿಧ ಬಡಾವಣೆಗಳಿಗೆ ಭೇಟಿ ನೀಡಿದ ಮುಖ್ಯಾಧಿಕಾರಿ ತಳವಾರ, ಅಲ್ಲಿನ ಪರಿಸ್ಥಿತಿಯನ್ನು ಗಮನಿಸಿದರು. ಇದಕ್ಕೆ ಸಂಬಂಧಿಸಿದ ಕಡತಗಳ ಪರಿಶೀಲನೆ ನಡೆಸಿ ಮಾಹಿತಿ ಕಲೆಹಾಕುತ್ತಿದ್ದಾರೆ ಎಂದು ಸಿಬ್ಬಂದಿ ಹೇಳಿದರು.</p>.<p>ವಸತಿ ವಿನ್ಯಾಸ ನಿಯಮಗಳ ಅನುಸಾರ ಹೊಸ ಬಡಾವಣೆಗಳ ನಿರ್ಮಾಣದ ಸಂದರ್ಭದಲ್ಲಿ ರಸ್ತೆ, ಚರಂಡಿ, ಕುಡಿಯುವ ನೀರು, ವಿದ್ಯುತ್ ಸಂಪರ್ಕ, ಉದ್ಯಾನ ಮತ್ತಿತರ ಅಗತ್ಯ ಮೂಲ ಸೌಲಭ್ಯಗಳನ್ನು ಅವುಗಳ ಮಾಲಿಕರೇ ಕಲ್ಪಿಸುವುದು ಕಡ್ಡಾಯ. ಆದರೆ ಪಟ್ಟಣದ ಬಹುತೇಕ ಬಡಾವಣೆಗಳಲ್ಲಿ ಈ ಯಾವ ಅಭಿವೃದ್ಧಿಯೂ ಕಂಡುಬಂದಿಲ್ಲ.</p>.<p>ಕೆಲ ವರ್ಷಗಳ ನಂತರ ಈ ಎಲ್ಲ ಕೆಲಸವನ್ನು ಪುರಸಭೆಯೇ ನಿರ್ವಹಿಸಬೇಕಾದರೆ ಒಂದೊಂದು ಬಡಾವಣೆಗೆ ಕನಿಷ್ಟ ತಲಾ ₹ 35 ರಿಂದ ₹ 45 ಲಕ್ಷ ಹಣ ಬೇಕಾಗುತ್ತದೆ. ಅಧಿಕಾರಿಗಳು ಮಾಡಿದ ತಪ್ಪಿನಿಂದಾಗಿ ಪುರಸಭೆಗೆ ಬಹಳಷ್ಟು ನಷ್ಟವಾಗಿದೆ. ಈ ವಿಷಯದ ಅರಿವು ಇದ್ದರೂ ಹಿಂದಿನ ಅವಧಿಯಲ್ಲಿ ನಿಯಮ ಉಲ್ಲಂಘಿಸಿ ಉತಾರಗಳನ್ನು ನೀಡಲಾಗಿದೆ ಎಂದು ಮುಖ್ಯಾಧಿಕಾರಿ ಮಂಜುನಾಥ ತಳವಾರ ಅವರು ಹೇಳಿದ್ದರೆ.</p>.<p>ಈ ಅಕ್ರಮಗಳಿಗೆ ಸಂಬಂಧಿಸಿದಂತೆ 'ಪ್ರಜಾವಾಣಿ'ಯಲ್ಲಿ ಪ್ರಕಟವಾದ ಸರಣಿ ವರದಿಗಳಿಗೆ ತಕ್ಷಣ ಸ್ಪಂದಿಸಿ ಕ್ರಮಕ್ಕೆ ಮುಂದಾದ ಜಿಲ್ಲಾಧಿಕಾರಿ ವಿಕಾಸ ಕಿಶೋರ ಸುರಳ್ಕರ್ ನಂತರ ಈ ಹಿಂದಿನ ಮುಖ್ಯಾಧಿಕಾರಿ ಉಮೇಶ ಹಿರೇಮಠ ಅವರನ್ನು ಕಡ್ಡಾಯ ರಜೆ ಮೇಲೆ ಕಳುಹಿಸಿ ಸಮಗ್ರ ತನಿಖೆಗೆ ಸೂಚಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>