<p><strong>ಗಂಗಾವತಿ:</strong> ತಾಲ್ಲೂಕಿನ ಹಿರೇಬೆಣಕಲ್ ಗ್ರಾಮದಲ್ಲಿ ಶಾಸನ ಸಹಿತದ ವಿಶಿಷ್ಟ ವೀರಗಲ್ಲನ್ನು ಹಿರೇಬೆಣಕಲ್ ಅನ್ವೇಷಣಾ ತಂಡದ ಸದಸ್ಯರು ಪತ್ತೆ ಹಚ್ಚಿದ ಘಟನೆ ಈಚೆಗೆ ಬೆಳಕಿಗೆ ಬಂದಿದೆ.</p>.<p>ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಇತಿಹಾಸ ಸಂಶೋಧಕ ಶರಣಬಸಪ್ಪ ಕೋಲ್ಕಾರ, ‘ವೀರಗಲ್ಲು ಸಾಂಸ್ಕೃತಿಕವಾಗಿ ತುಂಬ ಮಹತ್ವ ಹೊಂದಿದೆ. ವೀರಗಲ್ಲು ಬಿಳಿ ಗ್ರಾನೈಟ್ ಶಿಲೆಯಲ್ಲಿ ರಚಿತವಾಗಿದ್ದು, ಇದು 3 ಹಂತಗಳನ್ನೊಳಗೊಂಡಿದೆ. ಮೊದಲ ಹಂತದಲ್ಲಿ (ಭೂಲೋಕ) ವೀರನೊಬ್ಬ ಬಲಗೈಯಲ್ಲಿ ಚೂರಿ ಹಿಡಿದು ಹೋರಾಟದ ಭಂಗಿಮದಲ್ಲಿದ್ದಾನೆ. ತಲೆ ಮೇಲೆ ವಿಶಿಷ್ಟ ರೀತಿಯ ಪೇಟಾ ಇದೆ.</p>.<p>ಇನ್ನೂ 2ನೇ ಹಂತದಲ್ಲಿ (ಅಂತರಿಕ್ಷ ಲೋಕ) ಹೋರಾಟದಲ್ಲಿ ಹುತಾತ್ಮನಾದ ವೀರನನ್ನು ಅಪ್ಸರೆಯರು ಸ್ವರ್ಗಲೋಕಕ್ಕೆ ಕರೆದೊಯ್ಯುತ್ತಿರುವ ದೃಶ್ಯವಿದೆ. 3ನೇ ಹಂತದಲ್ಲಿ (ಸ್ವರ್ಗ ಲೋಕ) ವೀರನಿಗೆ ಸ್ವರ್ಗಪ್ರಾಪ್ತಿಯಾದ ಸಂಕೇತವಾಗಿ ಆತ ಇಬ್ಬರು ಚಾಮರಧಾರಿಯ ಸೇವೆ ಪಡೆಯುತ್ತ ಸ್ವರ್ಗ ಸುಖ ಅನುಭವಿಸುತ್ತಿರುವ ದೃಶ್ಯವಿದೆ’ ಎಂದು ತಿಳಿಸಿದರು.</p>.<p>ಕೆಳ ಹಂತದಲ್ಲಿ ವೀರನ ಪಕ್ಕದಲ್ಲಿ ಶಾಸನ ಬರಹವಿದ್ದು, ವೀರನ ಶೌರ್ಯ, ಸಾಹಸ ತಿಳಿಸುತ್ತದೆ. ಶ್ರೀಹರಿಯು ಹಿರಣ್ಯಾಕ್ಷನನ್ನು ಸಂಹರಿಸಿ ಭೂದೇವಿ ರಕ್ಷಿಸಿದಂತೆ ಚಂದ ಎಂಬ ಭಟನು ಭೂಮಿ (ಗ್ರಾಮವನ್ನು) ರಕ್ಷಿಸಿದನೆಂಬ ಅರ್ಥ ಬರುವಂತಿದೆ ಎಂದು ತಿಳಿಸಿದರು.</p>.<p>‘7 ಪ್ರಕಾರದ ವೀರಗಲ್ಲುಗಳಲ್ಲಿ ಗ್ರಾಮದ ಮೇಲೆ ದಾಳಿಯಾದಾಗ ವೀರನೊಬ್ಬ ಶತ್ರುಗಳ ವಿರುದ್ಧ ಹೋರಾಡಿ ಗ್ರಾಮ ರಕ್ಷಿಸಿ ತಾನು ಮಡಿಯಲು ಆತನ ಸ್ಮರಣಾರ್ಥ ಹಾಕಿಸಿದ ವೀರಗಲ್ಲು ಇದಾಗಿದೆ’ ಎಂದರು.</p>.<p>ಶಿಲ್ಪ ಮತ್ತು ಅಕ್ಷರಗಳ ಶೈಲಿಯಿದ್ದು, 9ನೇ ಶತಮಾನದ್ದಾಗಿದ್ದು, ಗಂಗಾವತಿ ಪ್ರದೇಶದಲ್ಲಿ ಅತಿ ಪ್ರಾಚೀನದ ಶಾಸನೋಕ್ತ ವೀರಗಲ್ಲು ಇದಾಗಿದೆ ಎಂದರು.</p>.<p>ಇನ್ನೂ ಬೆಂಗಳೂರಿನ ಲಿಪಿತಜ್ಞ ಜಿ.ಕೆ ದೇವರಾಜಸ್ವಾಮಿ ಅವರು ಶಾಸನ ಬರಹದ ಇನ್ನಷ್ಟು ಸ್ಪಷ್ಟ ಓದಿನಿಂದ ಅದು ಕರ್ನಾಟಕದ ವೀರ ಪರಂಪರೆಯಲ್ಲಿ ವಿಶಿಷ್ಟ ಸ್ಥಾನ ಪಡೆಯಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ.</p>.<p>ಹಿರೇಬೆಣಕಲ್ ಅನ್ವೇಷಣಾ ತಂಡದ ಮಂಜುನಾಥ ದೊಡ್ಡಮನಿ, ವೀರೇಶ ಅಂಗಡಿ, ಚಂದ್ರಶೇಖರ ಕುಂಬಾರ, ಹರನಾಯಕ, ಹುಸೇನಬಾಷ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗಂಗಾವತಿ:</strong> ತಾಲ್ಲೂಕಿನ ಹಿರೇಬೆಣಕಲ್ ಗ್ರಾಮದಲ್ಲಿ ಶಾಸನ ಸಹಿತದ ವಿಶಿಷ್ಟ ವೀರಗಲ್ಲನ್ನು ಹಿರೇಬೆಣಕಲ್ ಅನ್ವೇಷಣಾ ತಂಡದ ಸದಸ್ಯರು ಪತ್ತೆ ಹಚ್ಚಿದ ಘಟನೆ ಈಚೆಗೆ ಬೆಳಕಿಗೆ ಬಂದಿದೆ.</p>.<p>ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಇತಿಹಾಸ ಸಂಶೋಧಕ ಶರಣಬಸಪ್ಪ ಕೋಲ್ಕಾರ, ‘ವೀರಗಲ್ಲು ಸಾಂಸ್ಕೃತಿಕವಾಗಿ ತುಂಬ ಮಹತ್ವ ಹೊಂದಿದೆ. ವೀರಗಲ್ಲು ಬಿಳಿ ಗ್ರಾನೈಟ್ ಶಿಲೆಯಲ್ಲಿ ರಚಿತವಾಗಿದ್ದು, ಇದು 3 ಹಂತಗಳನ್ನೊಳಗೊಂಡಿದೆ. ಮೊದಲ ಹಂತದಲ್ಲಿ (ಭೂಲೋಕ) ವೀರನೊಬ್ಬ ಬಲಗೈಯಲ್ಲಿ ಚೂರಿ ಹಿಡಿದು ಹೋರಾಟದ ಭಂಗಿಮದಲ್ಲಿದ್ದಾನೆ. ತಲೆ ಮೇಲೆ ವಿಶಿಷ್ಟ ರೀತಿಯ ಪೇಟಾ ಇದೆ.</p>.<p>ಇನ್ನೂ 2ನೇ ಹಂತದಲ್ಲಿ (ಅಂತರಿಕ್ಷ ಲೋಕ) ಹೋರಾಟದಲ್ಲಿ ಹುತಾತ್ಮನಾದ ವೀರನನ್ನು ಅಪ್ಸರೆಯರು ಸ್ವರ್ಗಲೋಕಕ್ಕೆ ಕರೆದೊಯ್ಯುತ್ತಿರುವ ದೃಶ್ಯವಿದೆ. 3ನೇ ಹಂತದಲ್ಲಿ (ಸ್ವರ್ಗ ಲೋಕ) ವೀರನಿಗೆ ಸ್ವರ್ಗಪ್ರಾಪ್ತಿಯಾದ ಸಂಕೇತವಾಗಿ ಆತ ಇಬ್ಬರು ಚಾಮರಧಾರಿಯ ಸೇವೆ ಪಡೆಯುತ್ತ ಸ್ವರ್ಗ ಸುಖ ಅನುಭವಿಸುತ್ತಿರುವ ದೃಶ್ಯವಿದೆ’ ಎಂದು ತಿಳಿಸಿದರು.</p>.<p>ಕೆಳ ಹಂತದಲ್ಲಿ ವೀರನ ಪಕ್ಕದಲ್ಲಿ ಶಾಸನ ಬರಹವಿದ್ದು, ವೀರನ ಶೌರ್ಯ, ಸಾಹಸ ತಿಳಿಸುತ್ತದೆ. ಶ್ರೀಹರಿಯು ಹಿರಣ್ಯಾಕ್ಷನನ್ನು ಸಂಹರಿಸಿ ಭೂದೇವಿ ರಕ್ಷಿಸಿದಂತೆ ಚಂದ ಎಂಬ ಭಟನು ಭೂಮಿ (ಗ್ರಾಮವನ್ನು) ರಕ್ಷಿಸಿದನೆಂಬ ಅರ್ಥ ಬರುವಂತಿದೆ ಎಂದು ತಿಳಿಸಿದರು.</p>.<p>‘7 ಪ್ರಕಾರದ ವೀರಗಲ್ಲುಗಳಲ್ಲಿ ಗ್ರಾಮದ ಮೇಲೆ ದಾಳಿಯಾದಾಗ ವೀರನೊಬ್ಬ ಶತ್ರುಗಳ ವಿರುದ್ಧ ಹೋರಾಡಿ ಗ್ರಾಮ ರಕ್ಷಿಸಿ ತಾನು ಮಡಿಯಲು ಆತನ ಸ್ಮರಣಾರ್ಥ ಹಾಕಿಸಿದ ವೀರಗಲ್ಲು ಇದಾಗಿದೆ’ ಎಂದರು.</p>.<p>ಶಿಲ್ಪ ಮತ್ತು ಅಕ್ಷರಗಳ ಶೈಲಿಯಿದ್ದು, 9ನೇ ಶತಮಾನದ್ದಾಗಿದ್ದು, ಗಂಗಾವತಿ ಪ್ರದೇಶದಲ್ಲಿ ಅತಿ ಪ್ರಾಚೀನದ ಶಾಸನೋಕ್ತ ವೀರಗಲ್ಲು ಇದಾಗಿದೆ ಎಂದರು.</p>.<p>ಇನ್ನೂ ಬೆಂಗಳೂರಿನ ಲಿಪಿತಜ್ಞ ಜಿ.ಕೆ ದೇವರಾಜಸ್ವಾಮಿ ಅವರು ಶಾಸನ ಬರಹದ ಇನ್ನಷ್ಟು ಸ್ಪಷ್ಟ ಓದಿನಿಂದ ಅದು ಕರ್ನಾಟಕದ ವೀರ ಪರಂಪರೆಯಲ್ಲಿ ವಿಶಿಷ್ಟ ಸ್ಥಾನ ಪಡೆಯಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ.</p>.<p>ಹಿರೇಬೆಣಕಲ್ ಅನ್ವೇಷಣಾ ತಂಡದ ಮಂಜುನಾಥ ದೊಡ್ಡಮನಿ, ವೀರೇಶ ಅಂಗಡಿ, ಚಂದ್ರಶೇಖರ ಕುಂಬಾರ, ಹರನಾಯಕ, ಹುಸೇನಬಾಷ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>