ಗಂಗಾವತಿ ಸಮೀಪದ ಹಂಪಿ, ಆನೆಗೊಂದಿ, ಅಂಜನಾದ್ರಿ ಬೆಟ್ಟ ಸೇರಿದಂತೆ ಪ್ರವಾಸೋದ್ಯಮ ಸ್ಥಳಗಳನ್ನು ವೀಕ್ಷಣೆ ಮಾಡಲು ಬಂದಿದ್ದ ಆ ವ್ಯಕ್ತಿ ವಿಜಯನಗರ ಜಿಲ್ಲೆ ಮೂಲಕ ಕೊಪ್ಪಳ ಜಿಲ್ಲೆ ಪ್ರವೇಶಿಸಿದ್ದರು. ಕಮಲಾಪುರದ ಸರ್ಕಾರಿ ಆಸ್ಪತ್ರೆಯಲ್ಲಿ ಆ್ಯಂಟಿಜನ್ ರ್ಯಾಪಿಡ್ ಪರೀಕ್ಷೆಗೆ ಒಳಗಾದಾಗ ಸೋಂಕು ಇರುವುದು ಖಚಿತವಾಗಿದೆ. ಆ ವ್ಯಕ್ತಿ ಜೊತೆ ಆವರ ಗೆಳೆತಿಯೂ ಬಂದಿದ್ದು, ವರದಿ ನೆಗೆಟಿವ್ ಬಂದಿದೆ ಎಂದು ಆನೆಗೊಂದಿ ಆಸ್ಪತ್ರೆ ಸಿಬ್ಬಂದಿಯೊಬ್ಬರು ಹೇಳಿದರು.