ಪುರಸಭೆ ಸಿಬ್ಬಂದಿ ಯಾರ ಮಾತೂ ಕೇಳುವ ಸ್ಥಿತಿಯಲ್ಲಿಲ್ಲ. ಇಷ್ಟಾದರೂ ಜಿಲ್ಲಾ ಅಭಿವೃದ್ಧಿಕೋಶದ ಅಧಿಕಾರಿ ಸಿಬ್ಬಂದಿ ಒಬ್ಬರೂ ಇಲ್ಲಿಗೆ ಭೇಟಿ ನೀಡದೆ ನಿರ್ಲಕ್ಷ್ಯ ವಹಿಸಿದ್ದಾರೆ.
– ಕೃಷ್ಣಮೂರ್ತಿ ಟೆಂಗುಂಟಿ, ಕನ್ನಡಪರ ಸಂಘಟನೆ ಅಧ್ಯಕ್ಷ
ಕಾಯಂ ಮುಖ್ಯಾಧಿಕಾರಿ ಇಲ್ಲದ ಕಾರಣ ಕೆಲಸಕಾರ್ಯಗಳಿಗೆ ವ್ಯತ್ಯಯವಾಗಿದೆ. ಜನರ ಸಮಸ್ಯೆಗೆ ಸ್ಪಂದಿಸುವಂತೆ ಸಿಬ್ಬಂದಿಗೆ ಸೂಚಿಸಿದ್ದೇನೆ. ಅಲ್ಲದೆ ಕಾಯಂ ಮುಖ್ಯಾಧಿಕಾರಿ ಬರುವ ಸಾಧ್ಯತೆ ಇದ್ದು ಸಮಸ್ಯೆಗೆ ಪರಿಹಾರ ದೊರೆಯಲಿದೆ.