ಇಲ್ಲಿನ ಕನಕಗಿರಿ ರಸ್ತೆಯಲ್ಲಿರುವ ರೆಡ್ಡಿ ಮನೆಗೆ ಅವರ ಅಭಿಮಾನಿ ಯಮನೂರಪ್ಪ ಪುಂಡಗೌಡ ಎನ್ನುವವರು ವಾಹನದಲ್ಲಿ ಕುರಿಗಳನ್ನು ತುಂಬಿಕೊಂಡು ಬಂದಿದ್ದರು. ವಿರೂಪಾಪುರ ತಾಂಡಾದಲ್ಲಿ ಆಯೋಜನೆಯಾಗಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ರೆಡ್ಡಿ ತೆರಳಿದ್ದರು. ಆ ಕಾರ್ಯಕ್ರಮದಲ್ಲಿ ರೆಡ್ಡಿಯನ್ನು ಭೇಟಿಯಾಗಲು ಯಮನೂರಪ್ಪ ತೆರಳುವಾಗ ತಾಲ್ಲೂಕು ಚುನಾವಣಾಧಿಕಾರಿಗಳು ಹಾಗೂ ಪೊಲೀಸರು ತಡೆದು ವಾಪಸ್ ಕಳುಹಿಸಿದರು.