<p><strong>ಕೊಪ್ಪಳ: </strong>ಗಂಗಾವತಿ ತಾಲ್ಲೂಕಿನ ಚಿಕ್ಕಜಂತಕಲ್ ಗ್ರಾಮದ ಸಮೀಪದ ತುಂಗಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಯುವಕನೊಬ್ಬ ಮರಳು ಗುಂಡಿಯಲ್ಲಿ ಸಿಲುಕಿ ಮೃತಪಟ್ಟಘಟನೆ ಭಾನುವಾರ ನಡೆದಿದ್ದು, ಸೋಮವಾರ ದೇಹ ಪತ್ತೆಯಾಗಿದೆ.</p>.<p>ಗ್ರಾಮದ ನದಿಯ ಸೇತುವೆಯ ಕೆಳಗಿನಿಂದ ಈಜಲು ತೆರಳಿದ್ದಾಗ ಈ ದುರ್ಘಟನೆ ನಡೆದಿದೆ. ಮೃತ ಯುವಕನನ್ನು ಗಂಗಾವತಿಯ 7ನೇ ವಾರ್ಡಿನ ಮೆಹಿಬೂಬ್ ನಗರದ ನಿವಾಸಿ ರಾಜಾಸಾಬ್ (25) ಎಂದು ಗುರುತಿಸಲಾಗಿದೆ.</p>.<p>ಇಬ್ಬರು ಸ್ನೇಹಿತರ ಜೊತೆ ಸ್ನಾನಕ್ಕೆ ಹೋಗಿದ್ದ. ಇನ್ನೊಬ್ಬ ಯುವಕ ಪ್ರಾಣಾಪಾಯದಿಂದ ಪಾರಾಗಿದ್ದು, ಪ್ರಯಾಸದಿಂದ ಈಜಿ ದಡ ಸೇರಿದ್ದಾರೆ. ಮಗನನ್ನು ಕಳೆದುಕೊಂಡ ತಾಯಿ ಮತ್ತು ಅವರ ಸಹೋದರಿಯರ ಆಂಕ್ರದನ ಮುಗಿಲು ಮುಟ್ಟಿತ್ತು.</p>.<p><strong>ಗ್ರಾಮಸ್ಥರ ಆಕ್ರೋಶ: </strong>ಇಲ್ಲಿ ಅಕ್ರಮವಾಗಿ ಮರಳು ದಂಧೆ ನಡೆಯುತ್ತಿದ್ದು, ಬೇಕಾಬಿಟ್ಟಿಯಾಗಿ ಗುಂಡಿಗಳನ್ನು ತೋಡಿ ಬಿಡುವುದರಿಂದ ಪ್ರತಿವರ್ಷ ಹತ್ತಾರು ಜನರು ಬಲಿಯಾಗುತ್ತಿದ್ದಾರೆ. ಈ ಕುರಿತು ಸಂಬಂಧಿಸಿದವರ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಆಕ್ರೋಶ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಪ್ಪಳ: </strong>ಗಂಗಾವತಿ ತಾಲ್ಲೂಕಿನ ಚಿಕ್ಕಜಂತಕಲ್ ಗ್ರಾಮದ ಸಮೀಪದ ತುಂಗಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಯುವಕನೊಬ್ಬ ಮರಳು ಗುಂಡಿಯಲ್ಲಿ ಸಿಲುಕಿ ಮೃತಪಟ್ಟಘಟನೆ ಭಾನುವಾರ ನಡೆದಿದ್ದು, ಸೋಮವಾರ ದೇಹ ಪತ್ತೆಯಾಗಿದೆ.</p>.<p>ಗ್ರಾಮದ ನದಿಯ ಸೇತುವೆಯ ಕೆಳಗಿನಿಂದ ಈಜಲು ತೆರಳಿದ್ದಾಗ ಈ ದುರ್ಘಟನೆ ನಡೆದಿದೆ. ಮೃತ ಯುವಕನನ್ನು ಗಂಗಾವತಿಯ 7ನೇ ವಾರ್ಡಿನ ಮೆಹಿಬೂಬ್ ನಗರದ ನಿವಾಸಿ ರಾಜಾಸಾಬ್ (25) ಎಂದು ಗುರುತಿಸಲಾಗಿದೆ.</p>.<p>ಇಬ್ಬರು ಸ್ನೇಹಿತರ ಜೊತೆ ಸ್ನಾನಕ್ಕೆ ಹೋಗಿದ್ದ. ಇನ್ನೊಬ್ಬ ಯುವಕ ಪ್ರಾಣಾಪಾಯದಿಂದ ಪಾರಾಗಿದ್ದು, ಪ್ರಯಾಸದಿಂದ ಈಜಿ ದಡ ಸೇರಿದ್ದಾರೆ. ಮಗನನ್ನು ಕಳೆದುಕೊಂಡ ತಾಯಿ ಮತ್ತು ಅವರ ಸಹೋದರಿಯರ ಆಂಕ್ರದನ ಮುಗಿಲು ಮುಟ್ಟಿತ್ತು.</p>.<p><strong>ಗ್ರಾಮಸ್ಥರ ಆಕ್ರೋಶ: </strong>ಇಲ್ಲಿ ಅಕ್ರಮವಾಗಿ ಮರಳು ದಂಧೆ ನಡೆಯುತ್ತಿದ್ದು, ಬೇಕಾಬಿಟ್ಟಿಯಾಗಿ ಗುಂಡಿಗಳನ್ನು ತೋಡಿ ಬಿಡುವುದರಿಂದ ಪ್ರತಿವರ್ಷ ಹತ್ತಾರು ಜನರು ಬಲಿಯಾಗುತ್ತಿದ್ದಾರೆ. ಈ ಕುರಿತು ಸಂಬಂಧಿಸಿದವರ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಆಕ್ರೋಶ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>