ಸೆಪ್ಟೆಂಬರ್ ತಿಂಗಳಲ್ಲಿ ಕಲಾಲಬಂಡಿಯಿಂದ ಸಚಿವರ ಮನೆ ಅಥವಾ ಕಚೇರಿವರೆಗೆ ಪಾದಯಾತ್ರೆಯ ಮೂಲಕ ತೆರಳಿ ಮುತ್ತಿಗೆಹಾಕಿ ಪ್ರತಿಭಟಿಸುವ ಮೂಲಕ ಸರ್ಕಾರಕ್ಕೆ ಬಿಸಿ ತಲುಪಿಸಬೇಕಿದೆ. ಹಾಗಾಗಿ ಪಕ್ಷಾತೀತವಾಗಿ ನಡೆಯಲಿರುವ ಈ ಪಾದಯಾತ್ರೆಯಲ್ಲಿ ಜಿಲ್ಲೆಯ ನೀರಾವರಿ ಹೋರಾಟಗಾರರು, ಸಾರ್ವಜನಿಕರು, ಪ್ರಜ್ಞಾವಂತರು, ಮಠಾಧೀಶರು, ಸಂಘ ಸಂಸ್ಥೆಗಳು ಹಾಗೂ ರೈತರು ಭಾಗವಹಿಸಿ ಯಶಸ್ವಿಗೊಳಿಸಲು ಮನವಿ ಮಾಡುವುದಾಗಿ ತಿಳಿಸಿದರು.