‘ರಾಹುಲ್ ಗಾಂಧಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.ಮಲ್ಲಿಕಾರ್ಜುನಖರ್ಗೆ, ಡಿ.ಕೆ. ಶಿವಕುಮಾರ್, ಎ.ಸಿ. ವೇಣುಗೋಪಾಲ್, ಕೆ.ಎಚ್. ಮುನಿಯಪ್ಪ ಸೇರಿದಂತೆ ಪಕ್ಷದ ಎಲ್ಲಾ ಹಿರಿಯ ನಾಯಕರು ಪಾಲ್ಗೊಳ್ಳುವರು. ರಾಹುಲ್ ಗಾಂಧಿ ಬರುವುದರಿಂದ ಮುಜುಗರ ಆಗಬಾರದು ಎನ್ನುವ ಕಾರಣಕ್ಕೆ ಬಿಜೆಪಿ ನಾಯಕರನ್ನು ವೇದಿಕೆಗೆ ಆಹ್ವಾನಿಸಿಲ್ಲ. ಐದು ಲಕ್ಷಕ್ಕಿಂತಲೂ ಹೆಚ್ಚು ಜನ ಭಾಗವಹಿಸುವ ನಿರೀಕ್ಷೆಯಿದ್ದು, ಕೊಪ್ಪಳ ಜಿಲ್ಲೆಯಿಂದ 30 ಸಾವಿರ ಜನ ಬರಲಿದ್ದಾರೆ’ ಎಂದು ಹೇಳಿದರು.