ವಿಜಯಪುರ ಜಿಲ್ಲೆಯಿಂದ ಅಯೋಧ್ಯೆ ರಾಮಮಂದಿರ ಉದ್ಘಾಟನೆ ವೇಳೆಗೆ ತೆರಳಲು ಸೈಕಲ್ ಜಾಥಾ ನಡೆಸಿರುವ ಯುವಕ ಸುರೇಶ ಕೊಪ್ಪಳ ಜಿಲ್ಲೆಯ ರಸ್ತೆ ಮಾರ್ಗವಾಗಿ ಅಂಜನಾದ್ರಿಗೆ ಬಂದಿದ್ದು, ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಆತ್ಮೀಯವಾಗಿ ಸ್ವಾಗತಿಸಿದರು. ನಂತರ ಸನ್ಮಾನ ಮಾಡಿ, ಮುಂದಿನ ಮಾರ್ಗಕ್ಕೆ ಪಯಣ ಬೆಳಸಲು ಅನುವು ಮಾಡಿಕೊಟ್ಟರು.