ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಅರ್ನಬ್‌ ಗೋಸ್ವಾಮಿ ಬಿಡುಗಡೆ ಮಾಡಿ’

Last Updated 7 ನವೆಂಬರ್ 2020, 11:52 IST
ಅಕ್ಷರ ಗಾತ್ರ

ಗಂಗಾವತಿ: ಪತ್ರಕರ್ತ ಅರ್ನಬ್‌ ಗೋಸ್ವಾಮಿ ಬಂಧನ ಖಂಡಿಸಿ ಎಬಿವಿಪಿ ಕಾರ್ಯಕರ್ತರು ಶನಿವಾರ ತಹಶೀಲ್‌ ಕಚೇರಿ ಎದುರು ಪ್ರತಿಭಟನೆ ನಡೆಸಿ ತಹಶೀಲ್ದಾರ್‌ ಎಂ.ರೇಣುಕಾ ಅವರಿಗೆ ಮನವಿ ಸಲ್ಲಿಸಿದರು.

ಎಬಿವಿಪಿ ರಾಜ್ಯ ಕಾರ್ಯಕಾರಣಿ ಸದಸ್ಯ ಸರ್ವಜ್ಞಮೂರ್ತಿ ಮಾತನಾಡಿ,‘2018 ರ ಆತ್ಮಹತ್ಯೆ ಪ್ರಕರಣ ಅಂತ್ಯ ಕಂಡಿತ್ತು. ಸೇಡು ತೀರಿಸಿಕೊಳ್ಳುವ ಉದ್ದೇಶಕ್ಕಾಗಿ ಆ ಪ್ರಕರಣದ ಮರು ತನಿಖೆ ಆರಂಭಿಸಿದೆ. ಮಹಾರಾಷ್ಟ್ರ ಸರ್ಕಾರ ತನ್ನ ಪ್ರಜಾಪ್ರಭುತ್ವ ವಿರೋಧಿ ಮುಖವಾಡ ಬಯಲು ಮಾಡಿಕೊಂಡಿದೆ’ ಎಂದರು.

ಅರ್ನಬ್‌ ಗೋಸ್ವಾಮಿ ಬಂಧನದ ವೇಳೆ ಪೊಲೀಸರು ನಡೆದುಕೊಂಡ ರೀತಿ ತುರ್ತು ಪರಿಸ್ಥಿಯ ದಿನಗಳನ್ನು ನೆನಪಿಸುತ್ತದೆ. ತಕ್ಷಣ ಅರ್ನಬ್ ಅವರನ್ನು ಬಿಡುಗಡೆ ಮಾಡಬೇಕು ಎಂದು ಹೇಳಿದರು.

ಎಬಿವಿಪಿ ಕಾರ್ಯಕರ್ತರಾದ ಲಕ್ಷ್ಮೀ ಬೋಸ್ಲೆ, ಶ್ರೀನಿವಾಸ, ಮಹಾರಾಜ ಹಾಗೂ ಉಮೇಶ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT