<p><strong>ಗಂಗಾವತಿ: </strong>ಪತ್ರಕರ್ತ ಅರ್ನಬ್ ಗೋಸ್ವಾಮಿ ಬಂಧನ ಖಂಡಿಸಿ ಎಬಿವಿಪಿ ಕಾರ್ಯಕರ್ತರು ಶನಿವಾರ ತಹಶೀಲ್ ಕಚೇರಿ ಎದುರು ಪ್ರತಿಭಟನೆ ನಡೆಸಿ ತಹಶೀಲ್ದಾರ್ ಎಂ.ರೇಣುಕಾ ಅವರಿಗೆ ಮನವಿ ಸಲ್ಲಿಸಿದರು.</p>.<p>ಎಬಿವಿಪಿ ರಾಜ್ಯ ಕಾರ್ಯಕಾರಣಿ ಸದಸ್ಯ ಸರ್ವಜ್ಞಮೂರ್ತಿ ಮಾತನಾಡಿ,‘2018 ರ ಆತ್ಮಹತ್ಯೆ ಪ್ರಕರಣ ಅಂತ್ಯ ಕಂಡಿತ್ತು. ಸೇಡು ತೀರಿಸಿಕೊಳ್ಳುವ ಉದ್ದೇಶಕ್ಕಾಗಿ ಆ ಪ್ರಕರಣದ ಮರು ತನಿಖೆ ಆರಂಭಿಸಿದೆ. ಮಹಾರಾಷ್ಟ್ರ ಸರ್ಕಾರ ತನ್ನ ಪ್ರಜಾಪ್ರಭುತ್ವ ವಿರೋಧಿ ಮುಖವಾಡ ಬಯಲು ಮಾಡಿಕೊಂಡಿದೆ’ ಎಂದರು.</p>.<p>ಅರ್ನಬ್ ಗೋಸ್ವಾಮಿ ಬಂಧನದ ವೇಳೆ ಪೊಲೀಸರು ನಡೆದುಕೊಂಡ ರೀತಿ ತುರ್ತು ಪರಿಸ್ಥಿಯ ದಿನಗಳನ್ನು ನೆನಪಿಸುತ್ತದೆ. ತಕ್ಷಣ ಅರ್ನಬ್ ಅವರನ್ನು ಬಿಡುಗಡೆ ಮಾಡಬೇಕು ಎಂದು ಹೇಳಿದರು.</p>.<p>ಎಬಿವಿಪಿ ಕಾರ್ಯಕರ್ತರಾದ ಲಕ್ಷ್ಮೀ ಬೋಸ್ಲೆ, ಶ್ರೀನಿವಾಸ, ಮಹಾರಾಜ ಹಾಗೂ ಉಮೇಶ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗಂಗಾವತಿ: </strong>ಪತ್ರಕರ್ತ ಅರ್ನಬ್ ಗೋಸ್ವಾಮಿ ಬಂಧನ ಖಂಡಿಸಿ ಎಬಿವಿಪಿ ಕಾರ್ಯಕರ್ತರು ಶನಿವಾರ ತಹಶೀಲ್ ಕಚೇರಿ ಎದುರು ಪ್ರತಿಭಟನೆ ನಡೆಸಿ ತಹಶೀಲ್ದಾರ್ ಎಂ.ರೇಣುಕಾ ಅವರಿಗೆ ಮನವಿ ಸಲ್ಲಿಸಿದರು.</p>.<p>ಎಬಿವಿಪಿ ರಾಜ್ಯ ಕಾರ್ಯಕಾರಣಿ ಸದಸ್ಯ ಸರ್ವಜ್ಞಮೂರ್ತಿ ಮಾತನಾಡಿ,‘2018 ರ ಆತ್ಮಹತ್ಯೆ ಪ್ರಕರಣ ಅಂತ್ಯ ಕಂಡಿತ್ತು. ಸೇಡು ತೀರಿಸಿಕೊಳ್ಳುವ ಉದ್ದೇಶಕ್ಕಾಗಿ ಆ ಪ್ರಕರಣದ ಮರು ತನಿಖೆ ಆರಂಭಿಸಿದೆ. ಮಹಾರಾಷ್ಟ್ರ ಸರ್ಕಾರ ತನ್ನ ಪ್ರಜಾಪ್ರಭುತ್ವ ವಿರೋಧಿ ಮುಖವಾಡ ಬಯಲು ಮಾಡಿಕೊಂಡಿದೆ’ ಎಂದರು.</p>.<p>ಅರ್ನಬ್ ಗೋಸ್ವಾಮಿ ಬಂಧನದ ವೇಳೆ ಪೊಲೀಸರು ನಡೆದುಕೊಂಡ ರೀತಿ ತುರ್ತು ಪರಿಸ್ಥಿಯ ದಿನಗಳನ್ನು ನೆನಪಿಸುತ್ತದೆ. ತಕ್ಷಣ ಅರ್ನಬ್ ಅವರನ್ನು ಬಿಡುಗಡೆ ಮಾಡಬೇಕು ಎಂದು ಹೇಳಿದರು.</p>.<p>ಎಬಿವಿಪಿ ಕಾರ್ಯಕರ್ತರಾದ ಲಕ್ಷ್ಮೀ ಬೋಸ್ಲೆ, ಶ್ರೀನಿವಾಸ, ಮಹಾರಾಜ ಹಾಗೂ ಉಮೇಶ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>