ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

₹ 2 ಸಾವಿರ ಲಂಚ ಪಡೆಯುವ ವೇಳೆ ಎಸಿಬಿ ದಾಳಿ: ಅಧಿಕಾರಿ ಬಲೆಗೆ

Last Updated 30 ಏಪ್ರಿಲ್ 2019, 14:37 IST
ಅಕ್ಷರ ಗಾತ್ರ

ಕೊಪ್ಪಳ: ಜಿಲ್ಲಾ ಸರ್ವೇಕ್ಷಣಾಧಿಕಾರಿ ಹಾಗೂ ಜಿಲ್ಲಾ ಆಹಾರ ಸಂರಕ್ಷಣಾಧಿಕಾರಿ ಡಾ.ಎಂ.ಎಂ.ಕಟ್ಟಿಮನಿ ₹ 2 ಸಾವಿರ ಲಂಚ ಪಡೆಯುವವೇಳೆ ಎಸಿಬಿ ಬಲೆಗೆ ಬಿದ್ದಿದ್ದಾರೆ.

ಕೂಕನಪಳ್ಳಿಯ ಬಸಪ್ಪ ಗುಳದಳ್ಳಿ ಎಂಬುವರು ಕ್ಯಾಟರಿಂಗ್ ವ್ಯಾಪಾರಕ್ಕಾಗಿ ಪರವಾನಗಿ ಬಯಸಿ ಅರ್ಜಿ ಸಲ್ಲಿಸಿದ್ದರು. ಆದರೆ ಕಟ್ಟಿಮನಿ ಅವರು ಕೆಲಸ ಮಾಡಿಕೊಡಲು ₹ 2 ಸಾವಿರಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.

ಬಸಪ್ಪ ಅವರು ಹಣ ನೀಡುವ ಮುಂದೆ ದಾಳಿ ನಡೆಸಿದ ಎಸಿಬಿ ಅಧಿಕಾರಿ ರುದ್ರೇಶ ಉಜ್ಜನಕೊಪ್ಪ ದಾಳಿ ನಡೆಸಿ ಅಧಿಕಾರಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಈ ಕುರಿತು ಎಸಿಬಿ ಠಾಣೆಯಲ್ಲಿ ದೂರು ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT