<p><strong>ಕೊಪ್ಪಳ:</strong> ನಗರದ ಆರ್.ಟಿ.ಒ ಕಚೇರಿ ಮೇಲೆ ಎಸಿಬಿ (ಭ್ರಷ್ಟಾಚಾರ ನಿಗ್ರಹ ದಳ) ಅಧಿಕಾರಿಗಳು ಮಂಗಳವಾರ ದಾಳಿನಡೆಸಿದರು.</p>.<p>ನ್ಯಾಯಾಧೀಶರಿಂದ ಶೋಧನಾ ವಾರೆಂಟ್ ಪಡೆದು, ಮಂಗಳವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ದಿಢೀರ್ ದಾಳಿ ನಡೆಸಿದ ಅಧಿಕಾರಿಗಳು ಕಚೇರಿ ಸಿಬ್ಬಂದಿಗಳ ವಿಚಾರಣೆ ನಡೆಸಿದರು. ಆರ್.ಟಿ.ಒ ಕಚೇರಿಯಲ್ಲಿ ಕೆಲ ಶಂಕಿತ ಏಜೆಂಟರು ದೊರಕಿದ್ದು, ಅವರನ್ನು ಸಹ ವಿಚಾರಣೆನಡೆಸಿದ್ದಾರೆ.</p>.<p>ಕೊಪ್ಪಳ ಎಸಿಬಿಯ ಡಿವೈಎಸ್ಪಿ ಆರ್.ಎಸ್.ಉಜ್ಜನಕೊಪ್ಪ, ಬಳ್ಳಾರಿ ಎಸಿಬಿ ಡಿವೈಎಸ್ಪಿ ಚಂದ್ರಕಾಂತ ಪೂಜಾರ ನೇತೃತ್ವದಲ್ಲಿ ದಾಳಿನಡೆದಿದೆ. ಸಂಜೆವರೆಗೂ ತಪಾಸಣೆ ನಡೆದಿದ್ದು, ಸಮಂಜಸ ಕಾರಣ ನೀಡದ ಕಾರಣ 7 ಜನ ಖಾಸಗಿ ಏಜೆಂಟ್ಗಳು ಹಾಗೂ 4 ಜನ ಡ್ರೈವಿಂಗ್ ಸ್ಕೂಲ್ ಏಜೆಂಟ್ಗಳಿಂದ ₹ 1,69, 668 ನಗದು ವಶಪಡಿಸಿಕೊಳ್ಳಲಾಗಿದೆ ಎಂದು ಎಸಿಬಿ ಅಧಿಕಾರಿಗಳು ಮಾಹಿತಿ ನೀಡಿದರು.</p>.<p>ಎಸಿಬಿ ಇನ್ಸ್ಪೆಕ್ಟರ್ಗಳಾದ ಎಸ್.ಎಸ್.ಬೀಳಗಿ, ಗುರುರಾಜ್ ಮೈಲಾರ್, ಕೆ.ಪಿ.ರವಿಕುಮಾರ್, ಪಿ.ಎಸ್.ಹಿರೇಮಠ ಕಾರ್ಯಾಚರಣೆಯಲ್ಲಿಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಪ್ಪಳ:</strong> ನಗರದ ಆರ್.ಟಿ.ಒ ಕಚೇರಿ ಮೇಲೆ ಎಸಿಬಿ (ಭ್ರಷ್ಟಾಚಾರ ನಿಗ್ರಹ ದಳ) ಅಧಿಕಾರಿಗಳು ಮಂಗಳವಾರ ದಾಳಿನಡೆಸಿದರು.</p>.<p>ನ್ಯಾಯಾಧೀಶರಿಂದ ಶೋಧನಾ ವಾರೆಂಟ್ ಪಡೆದು, ಮಂಗಳವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ದಿಢೀರ್ ದಾಳಿ ನಡೆಸಿದ ಅಧಿಕಾರಿಗಳು ಕಚೇರಿ ಸಿಬ್ಬಂದಿಗಳ ವಿಚಾರಣೆ ನಡೆಸಿದರು. ಆರ್.ಟಿ.ಒ ಕಚೇರಿಯಲ್ಲಿ ಕೆಲ ಶಂಕಿತ ಏಜೆಂಟರು ದೊರಕಿದ್ದು, ಅವರನ್ನು ಸಹ ವಿಚಾರಣೆನಡೆಸಿದ್ದಾರೆ.</p>.<p>ಕೊಪ್ಪಳ ಎಸಿಬಿಯ ಡಿವೈಎಸ್ಪಿ ಆರ್.ಎಸ್.ಉಜ್ಜನಕೊಪ್ಪ, ಬಳ್ಳಾರಿ ಎಸಿಬಿ ಡಿವೈಎಸ್ಪಿ ಚಂದ್ರಕಾಂತ ಪೂಜಾರ ನೇತೃತ್ವದಲ್ಲಿ ದಾಳಿನಡೆದಿದೆ. ಸಂಜೆವರೆಗೂ ತಪಾಸಣೆ ನಡೆದಿದ್ದು, ಸಮಂಜಸ ಕಾರಣ ನೀಡದ ಕಾರಣ 7 ಜನ ಖಾಸಗಿ ಏಜೆಂಟ್ಗಳು ಹಾಗೂ 4 ಜನ ಡ್ರೈವಿಂಗ್ ಸ್ಕೂಲ್ ಏಜೆಂಟ್ಗಳಿಂದ ₹ 1,69, 668 ನಗದು ವಶಪಡಿಸಿಕೊಳ್ಳಲಾಗಿದೆ ಎಂದು ಎಸಿಬಿ ಅಧಿಕಾರಿಗಳು ಮಾಹಿತಿ ನೀಡಿದರು.</p>.<p>ಎಸಿಬಿ ಇನ್ಸ್ಪೆಕ್ಟರ್ಗಳಾದ ಎಸ್.ಎಸ್.ಬೀಳಗಿ, ಗುರುರಾಜ್ ಮೈಲಾರ್, ಕೆ.ಪಿ.ರವಿಕುಮಾರ್, ಪಿ.ಎಸ್.ಹಿರೇಮಠ ಕಾರ್ಯಾಚರಣೆಯಲ್ಲಿಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>