ಪಿಎಸ್ಐ ನೇಮಕಾತಿ ಅಕ್ರಮದ ಕುರಿತು ಪ್ರತಿಕ್ರಿಯಿಸಿದ ಅವರು,‘ಸಿಎಂ ಈಗಾಗಲೇ ಸೂಕ್ತ ತನಿಖೆ ಮಾಡಿ ಶಿಕ್ಷಿಸುವುದಾಗಿ ಹೇಳಿದ್ದಾರೆ. ಪ್ರಿಯಾಂಕ್ ಖರ್ಗೆ ಅವರು ಸ್ವತಃ ತಾವೇ ತಮ್ಮ ಬಳಿ ದಾಖಲೆ ಇದೆ ಎಂದಿದ್ದರು. ಅಲ್ಲದೆ ಮಾಧ್ಯಮಗಳ ಮುಂದೆ ಬಂದು ಹೇಳಿದ್ದರು. ದಾಖಲೆಗಳಿದ್ದರೆ ತನಿಖಾಧಿಕಾರಿಗಳಿಗೆ ನೀಡಲು ಇವರಿಗೇನು ಕಷ್ಟ ಮಾಧ್ಯಮಗಳ ಮುಂದೆ ಹೇಳಿ ಕೇವಲ ಪೇಪರ್ ಸಿಂಹ ಆಗಬಾರದು’ ಎಂದು ಟೀಕಿಸಿದರು. ತನಿಖಾಧಿಕಾರಿಗಳಿಗೆ ಮಾಹಿತಿ ನೀಡುವುದನ್ನು ಬಿಟ್ಟು ಬೇಜವಾಬ್ದಾರಿಯಿಂದ ವರ್ತಿಸುತ್ತಿದ್ದಾರೆ. ಪ್ರಿಯಾಂಕ್ ಖರ್ಗೆ ಅವರು ಪ್ರಬುದ್ಧವಾಗಿ ನಡೆದುಕೊಳ್ಳಬೇಕು ಎಂದು ಹೇಳಿದರು.