ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಕೆ.ವಿ.ಕಾವ್ಯಾರಾಣಿ ಮಾತನಾಡಿ,‘ನಲ್ಲಿ ಸಂಪರ್ಕ ನೀಡಲು ಗುತ್ತಿಗೆದಾರರು ಬಳಸುವ ಪೈಪ್ಗಳು ಹಾಗೂ ಇತರೆ ಸಾಮಗ್ರಿಗಳ ಗುಣಮಟ್ಟದ ಕುರಿತು ಪ್ರತಿಯೊಬ್ಬರೂ ಎಚ್ಚರ ವಹಿಸಬೇಕು, ಪಿಡಿಒಗಳು, ಗ್ರಾ.ಪಂ. ಅಧ್ಯಕ್ಷರು, ಉಪಾಧ್ಯಕ್ಷರ ಸಮನ್ವಯತೆಯೊಂದಿಗೆ ಗ್ರಾಮೀಣ ಕುಡಿವ ನೀರು ಮತ್ತು ನೈರ್ಮಲ್ಯ ಇಲಾಖೆ ಅಧಿಕಾರಿಗಳು ಕೆಲಸ ಮಾಡಬೇಕು ಎಂದರು.
ಎಂಜಿನಿಯರ್ ಧನರಾಜ, ತಾ.ಪಂ. ಯೋಜನಾ ನಿರ್ದೇಶಕ ಕೆ.ರಾಜಶೇಖರ, ಸಹಾಯಕ ನಿರ್ದೇಶಕ ವೀರಣ್ಣ ನಕ್ರಳ್ಳಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಅಧ್ಯಕ್ಷರು, ಉಪಾಧ್ಯಕ್ಷರು ಇದ್ದರು.