ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಪ್ಪಳ | ‘ಆಧುನಿಕ ತಂತ್ರಜ್ಞಾನ ಅಳವಡಿಸಿಕೊಳ್ಳಿ’

ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹಾಂತೇಶಗೌಡ ಪಾಟೀಲ ಸಲಹೆ
Last Updated 11 ಜನವರಿ 2022, 6:30 IST
ಅಕ್ಷರ ಗಾತ್ರ

ಅಳವಂಡಿ: ‘ಮಕ್ಕಳು ಆಧುನಿಕ ತಂತ್ರಜ್ಞಾನ ಅಳವಡಿಸಿಕೊಂಡು ಶಿಕ್ಷಣ ಪಡೆಯಬೇಕು. ಎಲ್ಲ ಸರ್ಕಾರಿ ಶಾಲೆಗಳಲ್ಲೂ ಸ್ಮಾರ್ಟ್‌ಕ್ಲಾಸ್‌ ವ್ಯವಸ್ಥೆ ಮಾಡಬೇಕು. ಆ ಮೂಲಕ ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆಯುವಂತಾಗಬೇಕು’ ಎಂದು ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹಾಂತೇಶಗೌಡ ಪಾಟೀಲ ಹೇಳಿದರು.

ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಮತ್ತು ಸಾಂಸ್ಕೃತಿಕ ಸಂಘದ ಸಹಯೋಗದಲ್ಲಿ ಮೈನಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಸ್ಮಾರ್ಟ್‌ಕ್ಲಾಸ್‌ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿ,‘ಮಕ್ಕಳು ಸಹ ಚೆನ್ನಾಗಿ ಓದಿ ಸಾಧನೆ ಮಾಡಬೇಕು’ ಎಂದರು.

ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಮತ್ತು ಸಾಂಸ್ಕೃತಿಕ ಸಂಘದ ನಿರ್ದೇಶಕ ವಿ.ಎಂ.ಭೂಸನೂರಮಠ ಮಾತನಾಡಿ ಸ್ಮಾರ್ಟ್‌ಕ್ಲಾಸ್‌ನ ಅನುಕೂಲಗಳ ಕುರಿತು ವಿವರಿಸಿದರು.

ಗ್ರಾಮ ಪಂಚಾಯಿತಿ ಅಧ್ಯಕ್ಷ ಸಕ್ರಡ್ಡಿ ಹ್ಯಾಟಿ, ಜಿ.ಪಂ. ಮಾಜಿ ಅಧ್ಯಕ್ಷ ಎಚ್.ಎಲ್.ಹಿರೇಗೌಡ್ರ, ಎಸ್‌ಡಿಎಂಸಿ ಅಧ್ಯಕ್ಷ ಗವಿಸಿದ್ದಪ್ಪ ಪೂಜಾರ, ಸಂಯೋಜಕ ಶರಣಪ್ಪ ಶಿಂದೋಗಿ, ವಿನೂತನ ಶಿಕ್ಷಣ ಸೇವಾ ಸಂಸ್ಥೆ ಅಧ್ಯಕ್ಷ ಸಿದ್ದಲಿಂಗಯ್ಯ ಹಿರೇಮಠ, ರೋಟರಿ ಕ್ಲಬ್ ಅಧ್ಯಕ್ಷ ಅಮರೇಶ ಪಾಟೀಲ, ಯೋಜನಾ ನಿರ್ದೇಶಕಿ ಕವಿತಾ ಹಿರೇಮಠ, ಗ್ರಾ.ಪಂ ಸದಸ್ಯರಾದ ಮರಿಶಾಂತವೀರ ಚಕ್ಕಡಿ, ಈರಣ್ಣ ಮೂಲಿಮನಿ, ಸುಶಿಲಮ್ಮ ಕೊಪ್ಪಳ, ಹನುಮವ್ವ ಪೂಜಾರ, ಎಸ್‌ಡಿಎಂಸಿ ಸದಸ್ಯರಾದ ಮಹೇಂದ್ರಗೌಡ ಕುರುಡಗಿ, ನಾಗರೆಡ್ಡಿ ಡಂಬ್ರಳ್ಳಿ, ಉಮೇಶ್ ಗುಡದಣ್ಣವರ, ಈರಮ್ಮ ಕುಂಬಾರ, ರೇಣುಕಾ ಕತ್ತಿ, ಸಿದ್ದರೆಡ್ಡಿ ಡಂಬ್ರಳ್ಳಿ, ಪ್ರಭುಗೌಡ ಮೈನಹಳ್ಳಿ, ಶಾಲಾ ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT