<p><strong>ಕಾರಟಗಿ:</strong> ಪುಸ್ತಕ ಓದುವ ಅಭ್ಯಾಸದಿಂದ ಜ್ಞಾನದ ಸಂಪಾದನೆ ಜತೆಗೆ ಬೌದ್ಧಿಕವಾಗಿ ಬೆಳವಣಿಗೆಯಾಗಲು ಸಾಧ್ಯ ಎಂದು ಸಹಾಯಕ ಪ್ರಾಧ್ಯಾಪಕಿ ಡಾ.ಮುಮ್ತಾಜ್ ಬೇಗಂ ಹೇಳಿದರು.</p>.<p>ಪಟ್ಟಣದ ಕಸ್ತೂರ ಬಾ ಮಹಿಳಾ ಪದವಿ ಮಹಾವಿದ್ಯಾಲಯದಲ್ಲಿ ಶುಕ್ರವಾರ ಕನ್ನಡ ಪುಸ್ತಕ ಪ್ರಾಧಿಕಾರ ಹಾಗೂ ಜಾಣ-ಜಾಣೆಯರ ಬಳಗದ ಸಹಯೋಗದಲ್ಲಿ<br />ಶುಕ್ರವಾರ ನಡೆದ ಪುಸ್ತಕ ಕರಡಚ್ಚು ತಿದ್ದುವಿಕೆ ಕಮ್ಮಟ ಮತ್ತು ಪ್ರಕಾಶಕರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಅವರು ವಿಶೇಷ ಉಪನ್ಯಾಸ ನೀಡಿದರು.</p>.<p>ವಿದ್ಯಾರ್ಥಿಗಳು ಬೇರೆ ಹವ್ಯಾಸದ ಬದಲು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು. ಪುಸ್ತಕಗಳು ಮನುಷ್ಯನ ವ್ಯಕ್ತಿತ್ವವನ್ನು ರೂಪಿಸುತ್ತವೆ ಎಂದರು.</p>.<p>ತಾಲ್ಲೂಕು ಪಂಚಾಯಿತಿ ಸದಸ್ಯ ಮಹ್ಮದ್ ರಫಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಇಂದಿನ ಆಧುನಿಕ ಯುಗದಲ್ಲಿ ಕನ್ನಡಪುಸ್ತಕಗಳ ಪ್ರಕಟಣೆಗೆ ಅನೇಕ ಸವಾಲುಗಳಿವೆ. ಅವನ್ನು ಮೆಟ್ಟಿ ನಿಲ್ಲುವ ಕೆಲಸವನ್ನು ಪ್ರಕಾಶಕರು ಮಾಡುತ್ತಿದ್ದಾರೆ ಎಂದು ಹೇಳಿದರು.</p>.<p>ಶಿಕ್ಷಕ ಬಸವರಾಜ, ಪ್ರಾಚಾರ್ಯ ಡಾ. ಬಸವರಾಜ ಬಳಿಗಾರ ಮಾತನಾಡಿದರು.ಉಪನ್ಯಾಸಕರಾದ ಮಹಾದೇವಿ, ಅನಸೂಯಾ, ಶಶಿಕಲಾ, ಜಾಣ-ಜಾಣೆಯರ ಬಳಗದ ಅಪರ್ಣಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರಟಗಿ:</strong> ಪುಸ್ತಕ ಓದುವ ಅಭ್ಯಾಸದಿಂದ ಜ್ಞಾನದ ಸಂಪಾದನೆ ಜತೆಗೆ ಬೌದ್ಧಿಕವಾಗಿ ಬೆಳವಣಿಗೆಯಾಗಲು ಸಾಧ್ಯ ಎಂದು ಸಹಾಯಕ ಪ್ರಾಧ್ಯಾಪಕಿ ಡಾ.ಮುಮ್ತಾಜ್ ಬೇಗಂ ಹೇಳಿದರು.</p>.<p>ಪಟ್ಟಣದ ಕಸ್ತೂರ ಬಾ ಮಹಿಳಾ ಪದವಿ ಮಹಾವಿದ್ಯಾಲಯದಲ್ಲಿ ಶುಕ್ರವಾರ ಕನ್ನಡ ಪುಸ್ತಕ ಪ್ರಾಧಿಕಾರ ಹಾಗೂ ಜಾಣ-ಜಾಣೆಯರ ಬಳಗದ ಸಹಯೋಗದಲ್ಲಿ<br />ಶುಕ್ರವಾರ ನಡೆದ ಪುಸ್ತಕ ಕರಡಚ್ಚು ತಿದ್ದುವಿಕೆ ಕಮ್ಮಟ ಮತ್ತು ಪ್ರಕಾಶಕರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಅವರು ವಿಶೇಷ ಉಪನ್ಯಾಸ ನೀಡಿದರು.</p>.<p>ವಿದ್ಯಾರ್ಥಿಗಳು ಬೇರೆ ಹವ್ಯಾಸದ ಬದಲು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು. ಪುಸ್ತಕಗಳು ಮನುಷ್ಯನ ವ್ಯಕ್ತಿತ್ವವನ್ನು ರೂಪಿಸುತ್ತವೆ ಎಂದರು.</p>.<p>ತಾಲ್ಲೂಕು ಪಂಚಾಯಿತಿ ಸದಸ್ಯ ಮಹ್ಮದ್ ರಫಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಇಂದಿನ ಆಧುನಿಕ ಯುಗದಲ್ಲಿ ಕನ್ನಡಪುಸ್ತಕಗಳ ಪ್ರಕಟಣೆಗೆ ಅನೇಕ ಸವಾಲುಗಳಿವೆ. ಅವನ್ನು ಮೆಟ್ಟಿ ನಿಲ್ಲುವ ಕೆಲಸವನ್ನು ಪ್ರಕಾಶಕರು ಮಾಡುತ್ತಿದ್ದಾರೆ ಎಂದು ಹೇಳಿದರು.</p>.<p>ಶಿಕ್ಷಕ ಬಸವರಾಜ, ಪ್ರಾಚಾರ್ಯ ಡಾ. ಬಸವರಾಜ ಬಳಿಗಾರ ಮಾತನಾಡಿದರು.ಉಪನ್ಯಾಸಕರಾದ ಮಹಾದೇವಿ, ಅನಸೂಯಾ, ಶಶಿಕಲಾ, ಜಾಣ-ಜಾಣೆಯರ ಬಳಗದ ಅಪರ್ಣಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>