<p><strong>ಯಲಬುರ್ಗಾ:</strong> ‘ವೈವಿಧ್ಯಮಯ ಕೃಷಿ ಪದ್ಧತಿಯಿಂದ ಉತ್ತಮ ಇಳುವರಿ ಪಡೆದು ಆರ್ಥಿಕವಾಗಿ ಸಬಲರಾಗಲು ಪ್ರಯತ್ನಿಸಬೇಕು’ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ರವಿತೇಜ ಅಬ್ಬಿಗೇರಿ ಹೇಳಿದರು.</p>.<p>ತಾಲ್ಲೂಕಿನ ದಮ್ಮೂರು ಗ್ರಾಮದ ಭೀಮಾಂಬಿಕಾದೇವಿ ಧರ್ಮರಮಠದಲ್ಲಿ ಜರುಗಿದ 372ನೇ ಶಿವಾನುಭವ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಪ್ರಸ್ತುತ ದೇಶದಲ್ಲಿ ಕೃಷಿ ಉತ್ಪನ್ನಗಳ ಕೊರತೆ ಎದ್ದು ಕಾಣುತ್ತಿದೆ. ಈ ಕೊರತೆ ನೀಗಿಸುವಲ್ಲಿ ರೈತರ ಪಾತ್ರ ದೊಡ್ಡದಿದೆ. ಸರ್ಕಾರ ಈ ನಿಟ್ಟಿನಲ್ಲಿ ರೈತರಿಗೆ ವಿವಿಧ ರೀತಿಯ ಪ್ರೋತ್ಸಾಹ ನೀಡುವ ಮೂಲಕ ಕೃಷಿ ಉತ್ಪನ್ನಗಳ ಹೆಚ್ಚಳಕ್ಕೆ ಗಮನ ಕೊಡಬೇಕಾಗಿದೆ ಎಂದರು.</p>.<p>ಪ್ರಗತಿಪರ ರೈತ ರಸೂಲಸಾಬ ಹಿರೇಮನಿ ಮಾತನಾಡಿ,‘ಕೃಷಿ ವಿಜ್ಞಾನಿಗಳು ರೈತರಿಗೆ ಸಲಹೆ ಸೂಚನೆಗಳನ್ನು ಕೊಡುತ್ತಿದ್ದಾರೆ. ಇದರ ಪ್ರಯೋಜನದಿಂದ ರೈತರು ಕೃಷಿ ಕ್ಷೇತ್ರದಲ್ಲಿಯೇ ಸಾಧನೆ ಮಾಡಲು ಸಾಕಷ್ಟು ಅವಕಾಶಗಳಿವೆ’ ಎಂದರು.</p>.<p>ವಿದ್ಯಾರ್ಥಿ ಬಸವಲಿಂಗಪ್ಪ ಮೆಣಸಿನಕಾಯಿ ಮಾತನಾಡಿದರು.</p>.<p>ಯುವ ರೈತರಾದ ದುರಗಪ್ಪ ಹರಿಜನ, ಪ್ರಕಾಶ ರ್ಯಾವಣಕಿ ಔಷಧಿ ಹಾಗೂ ಗೊಬ್ಬರದ ಕುರಿತು ಮಾಹಿತಿ ನೀಡಿದರು.</p>.<p>ದಮ್ಮೂರ ಭೀಮಾಂಬಿಕಾದೇವಿ ಶಿವಾನುಭವ ಸೇವಾ ಸಮಿತಿ ಅಧ್ಯಕ್ಷ ಶರಣಬಸಪ್ಪ ಕೆ ದಾನಕೈ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>ಮಠದ ಹನುಮಂತಪ್ಪಜ್ಜ ಧರ್ಮರ, ಶರಣಯ್ಯ ಹಿರೇಮಠ ಸಾನ್ನಿಧ್ಯ ವಹಿಸಿದ್ದರು. ಮುಖಂಡರಾದ ವೀರಭದ್ರಪ್ಪ ನಿಡಗುಂದಿ, ಸಂಗಯ್ಯ ಯಾವಗಲ್ಲಮಠ, ಗುರುಮೂರ್ತಿ ಬಡಿಗೇರ, ವೀರಪ್ಪ ರ್ಯಾವಣಕಿ, ಬಸವರಾಜ ಹಳ್ಳಿಕೇರಿ ಹಾಗೂ ಸಂಗೀತ ಬಳಗದ ಕಳಕಪ್ಪ ಹಡಪದ ಹಾಗೂ ಹನುಮೇಶ ಹಡಪದ ಅವರು<br />ಇದ್ದರು.</p>.<p>ಕಲಾವಿದರಾದ ಕಳಕಪ್ಪ ಹಡಪದ, ಹನುಮೇಶ ಇವರು ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಲಬುರ್ಗಾ:</strong> ‘ವೈವಿಧ್ಯಮಯ ಕೃಷಿ ಪದ್ಧತಿಯಿಂದ ಉತ್ತಮ ಇಳುವರಿ ಪಡೆದು ಆರ್ಥಿಕವಾಗಿ ಸಬಲರಾಗಲು ಪ್ರಯತ್ನಿಸಬೇಕು’ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ರವಿತೇಜ ಅಬ್ಬಿಗೇರಿ ಹೇಳಿದರು.</p>.<p>ತಾಲ್ಲೂಕಿನ ದಮ್ಮೂರು ಗ್ರಾಮದ ಭೀಮಾಂಬಿಕಾದೇವಿ ಧರ್ಮರಮಠದಲ್ಲಿ ಜರುಗಿದ 372ನೇ ಶಿವಾನುಭವ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಪ್ರಸ್ತುತ ದೇಶದಲ್ಲಿ ಕೃಷಿ ಉತ್ಪನ್ನಗಳ ಕೊರತೆ ಎದ್ದು ಕಾಣುತ್ತಿದೆ. ಈ ಕೊರತೆ ನೀಗಿಸುವಲ್ಲಿ ರೈತರ ಪಾತ್ರ ದೊಡ್ಡದಿದೆ. ಸರ್ಕಾರ ಈ ನಿಟ್ಟಿನಲ್ಲಿ ರೈತರಿಗೆ ವಿವಿಧ ರೀತಿಯ ಪ್ರೋತ್ಸಾಹ ನೀಡುವ ಮೂಲಕ ಕೃಷಿ ಉತ್ಪನ್ನಗಳ ಹೆಚ್ಚಳಕ್ಕೆ ಗಮನ ಕೊಡಬೇಕಾಗಿದೆ ಎಂದರು.</p>.<p>ಪ್ರಗತಿಪರ ರೈತ ರಸೂಲಸಾಬ ಹಿರೇಮನಿ ಮಾತನಾಡಿ,‘ಕೃಷಿ ವಿಜ್ಞಾನಿಗಳು ರೈತರಿಗೆ ಸಲಹೆ ಸೂಚನೆಗಳನ್ನು ಕೊಡುತ್ತಿದ್ದಾರೆ. ಇದರ ಪ್ರಯೋಜನದಿಂದ ರೈತರು ಕೃಷಿ ಕ್ಷೇತ್ರದಲ್ಲಿಯೇ ಸಾಧನೆ ಮಾಡಲು ಸಾಕಷ್ಟು ಅವಕಾಶಗಳಿವೆ’ ಎಂದರು.</p>.<p>ವಿದ್ಯಾರ್ಥಿ ಬಸವಲಿಂಗಪ್ಪ ಮೆಣಸಿನಕಾಯಿ ಮಾತನಾಡಿದರು.</p>.<p>ಯುವ ರೈತರಾದ ದುರಗಪ್ಪ ಹರಿಜನ, ಪ್ರಕಾಶ ರ್ಯಾವಣಕಿ ಔಷಧಿ ಹಾಗೂ ಗೊಬ್ಬರದ ಕುರಿತು ಮಾಹಿತಿ ನೀಡಿದರು.</p>.<p>ದಮ್ಮೂರ ಭೀಮಾಂಬಿಕಾದೇವಿ ಶಿವಾನುಭವ ಸೇವಾ ಸಮಿತಿ ಅಧ್ಯಕ್ಷ ಶರಣಬಸಪ್ಪ ಕೆ ದಾನಕೈ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>ಮಠದ ಹನುಮಂತಪ್ಪಜ್ಜ ಧರ್ಮರ, ಶರಣಯ್ಯ ಹಿರೇಮಠ ಸಾನ್ನಿಧ್ಯ ವಹಿಸಿದ್ದರು. ಮುಖಂಡರಾದ ವೀರಭದ್ರಪ್ಪ ನಿಡಗುಂದಿ, ಸಂಗಯ್ಯ ಯಾವಗಲ್ಲಮಠ, ಗುರುಮೂರ್ತಿ ಬಡಿಗೇರ, ವೀರಪ್ಪ ರ್ಯಾವಣಕಿ, ಬಸವರಾಜ ಹಳ್ಳಿಕೇರಿ ಹಾಗೂ ಸಂಗೀತ ಬಳಗದ ಕಳಕಪ್ಪ ಹಡಪದ ಹಾಗೂ ಹನುಮೇಶ ಹಡಪದ ಅವರು<br />ಇದ್ದರು.</p>.<p>ಕಲಾವಿದರಾದ ಕಳಕಪ್ಪ ಹಡಪದ, ಹನುಮೇಶ ಇವರು ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>