<p><strong>ಕೊಪ್ಪಳ</strong>: ಬಸ್ಸು, ರೈಲುಗಳಲ್ಲಿ ಓಡಾಡಿ ಖುಷಿಪಟ್ಟಿದ್ದ ಆ ಮಕ್ಕಳಿಗೆ ಜೀವನದಲ್ಲಿ ಮೊದಲ ಬಾರಿಗೆ ಲೋಹದ ಹಕ್ಕಿ ಸದ್ದು ಆಲಿಸುತ್ತ, ಅದರಲ್ಲಿಯೇ ಪ್ರಯಾಣಿಸುವ ಅವಕಾಶ ಒದಗಿಬಂದಿತ್ತು. ನಾವಂತೂ ವಿಮಾನದಲ್ಲಿ ಓಡಾಡಲು ಆಗಲಿಲ್ಲ; ಈಗ ನಮ್ಮ ಮಕ್ಕಳಿಗಾದರೂ ಈ ಭಾಗ್ಯ ಲಭಿಸಿತಲ್ಲ ಎನ್ನುವ ಖುಷಿ ಪೋಷಕರಲ್ಲಿ ಮನೆ ಮಾಡಿತ್ತು.</p><p>ವಿದ್ಯಾರ್ಥಿಗಳಿಗೆ ವಿಭಿನ್ನವಾಗಿ ಶಾಲಾ ಶೈಕ್ಷಣಿಕ ಪ್ರವಾಸ ಆಯೋಜಿಸಿದ ಖುಷಿ ಶಿಕ್ಷಕರು ಹಾಗೂ ಸಿಬ್ಬಂದಿಯಲ್ಲಿ ಕಂಡುಬಂದಿತು. ಈ ಎಲ್ಲ ಚಿತ್ರಣಗಳಿಗೆ ಶುಕ್ರವಾರ ಸಾಕ್ಷಿಯಾಗಿದ್ದು ಕೊಪ್ಪಳ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣ.</p><p>ಈ ಶಾಲೆಯ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಎಸ್ಡಿಎಂಸಿ ಸಿಬ್ಬಂದಿ ಶಾಲೆಯಿಂದ ತೋರಣಗಲ್ಗೆ ವಾಹನದಲ್ಲಿ ತೆರಳಿ ಅಲ್ಲಿಂದ ವಿಮಾನದಲ್ಲಿ ಹೈದರಾಬಾದ್ಗೆ ಪ್ರಯಾಣಿಸಿದರು. ವಿಮಾನ ನಿಲ್ದಾಣದಲ್ಲಿ ಎಲ್ಲರೂ ಒಟ್ಟಾಗಿ ಫೋಟೊ ತೆಗೆಯಿಸಿಕೊಂಡು ಖುಷಿಪಟ್ಟರು. ಈ ಶಾಲೆಯ 30 ಜನ ವಿದ್ಯಾರ್ಥಿಗಳು, ಆರು ಜನ ಎಸ್ಡಿಎಂಸಿ ಪದಾಧಿಕಾರಿಗಳು ಹಾಗೂ ಆರು ಜನ ಶಿಕ್ಷಕರು ಡಿ. 9ರ ತನಕ ಶೈಕ್ಷಣಿಕ ಪ್ರವಾಸ ಕೈಗೊಂಡಿದ್ದಾರೆ. ಇತ್ತೀಚೆಗೆ ಬೆಳಗಾವಿ ಜಿಲ್ಲೆಯಲ್ಲಿಯೂ ವಿದ್ಯಾರ್ಥಿಗಳನ್ನು ವಿಮಾನದಲ್ಲಿ ಪ್ರವಾಸಕ್ಕೆ ಕರೆದುಕೊಂಡು ಹೋಗಲಾಗಿತ್ತು.</p><p>ವಿಮಾನಯಾನದ ಖರ್ಚನ್ನು ಶಾಲೆಯ ಶಿಕ್ಷಕರು, ಗ್ರಾಮಸ್ಥರು ಹಾಗೂ ಖಾಸಗಿ ಕಂಪನಿಗಳಿಗೆ ಭರಿಸಲಾಗುತ್ತಿದೆ. </p><p>ಮಕ್ಕಳ ವಿಮಾನಯಾನದ ಪ್ರವಾಸಕ್ಕೆ ಶಾಲೆಯ ಆವರಣದಲ್ಲಿ ಶಾಸಕ ರಾಘವೇಂದ್ರ ಹಿಟ್ನಾಳ ಚಾಲನೆ ನೀಡಿ ‘ಕಲ್ಯಾಣ ಕರ್ನಾಟಕದಲ್ಲಿ ಮೊದಲ ಬಾರಿಗೆ ಲಿಂಗದಹಳ್ಳಿಯ ಸರ್ಕಾರಿ ಶಾಲೆಯ ಮಕ್ಕಳು ವಿಮಾನದಲ್ಲಿ ಪ್ರವಾಸ ಕೈಗೊಂಡಿದ್ದು ಖುಷಿ ನೀಡಿದೆ’ ಎಂದರು.</p><p>ಕಿರ್ಲೊಸ್ಕರ್ ಕಂಪನಿಯ ಪ್ರತಿನಿಧಿ ಡಿ.ನಾರಾಯಣ, ಕೊಪ್ಪಳ ಕ್ಷೇತ್ರ ಶಿಕ್ಷಣಾಧಿಕಾರಿ ಶಂಕರಯ್ಯ ಟಿ.ಎಸ್., ಗ್ರಾಮ ಪಂಚಾಯಿತಿ ಅಧ್ಯಕ್ಷೆ ತಿಪ್ಪವ್ವ ನಾಯಕ್, ಮುರಳಿ ಲಿಂಗದಹಳ್ಳಿ, ಪಿಡಿಒ ಗೀತಾ ಕುಮಾರಿ ಸೇರಿದಂತೆ ಅನೇಕರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಪ್ಪಳ</strong>: ಬಸ್ಸು, ರೈಲುಗಳಲ್ಲಿ ಓಡಾಡಿ ಖುಷಿಪಟ್ಟಿದ್ದ ಆ ಮಕ್ಕಳಿಗೆ ಜೀವನದಲ್ಲಿ ಮೊದಲ ಬಾರಿಗೆ ಲೋಹದ ಹಕ್ಕಿ ಸದ್ದು ಆಲಿಸುತ್ತ, ಅದರಲ್ಲಿಯೇ ಪ್ರಯಾಣಿಸುವ ಅವಕಾಶ ಒದಗಿಬಂದಿತ್ತು. ನಾವಂತೂ ವಿಮಾನದಲ್ಲಿ ಓಡಾಡಲು ಆಗಲಿಲ್ಲ; ಈಗ ನಮ್ಮ ಮಕ್ಕಳಿಗಾದರೂ ಈ ಭಾಗ್ಯ ಲಭಿಸಿತಲ್ಲ ಎನ್ನುವ ಖುಷಿ ಪೋಷಕರಲ್ಲಿ ಮನೆ ಮಾಡಿತ್ತು.</p><p>ವಿದ್ಯಾರ್ಥಿಗಳಿಗೆ ವಿಭಿನ್ನವಾಗಿ ಶಾಲಾ ಶೈಕ್ಷಣಿಕ ಪ್ರವಾಸ ಆಯೋಜಿಸಿದ ಖುಷಿ ಶಿಕ್ಷಕರು ಹಾಗೂ ಸಿಬ್ಬಂದಿಯಲ್ಲಿ ಕಂಡುಬಂದಿತು. ಈ ಎಲ್ಲ ಚಿತ್ರಣಗಳಿಗೆ ಶುಕ್ರವಾರ ಸಾಕ್ಷಿಯಾಗಿದ್ದು ಕೊಪ್ಪಳ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣ.</p><p>ಈ ಶಾಲೆಯ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಎಸ್ಡಿಎಂಸಿ ಸಿಬ್ಬಂದಿ ಶಾಲೆಯಿಂದ ತೋರಣಗಲ್ಗೆ ವಾಹನದಲ್ಲಿ ತೆರಳಿ ಅಲ್ಲಿಂದ ವಿಮಾನದಲ್ಲಿ ಹೈದರಾಬಾದ್ಗೆ ಪ್ರಯಾಣಿಸಿದರು. ವಿಮಾನ ನಿಲ್ದಾಣದಲ್ಲಿ ಎಲ್ಲರೂ ಒಟ್ಟಾಗಿ ಫೋಟೊ ತೆಗೆಯಿಸಿಕೊಂಡು ಖುಷಿಪಟ್ಟರು. ಈ ಶಾಲೆಯ 30 ಜನ ವಿದ್ಯಾರ್ಥಿಗಳು, ಆರು ಜನ ಎಸ್ಡಿಎಂಸಿ ಪದಾಧಿಕಾರಿಗಳು ಹಾಗೂ ಆರು ಜನ ಶಿಕ್ಷಕರು ಡಿ. 9ರ ತನಕ ಶೈಕ್ಷಣಿಕ ಪ್ರವಾಸ ಕೈಗೊಂಡಿದ್ದಾರೆ. ಇತ್ತೀಚೆಗೆ ಬೆಳಗಾವಿ ಜಿಲ್ಲೆಯಲ್ಲಿಯೂ ವಿದ್ಯಾರ್ಥಿಗಳನ್ನು ವಿಮಾನದಲ್ಲಿ ಪ್ರವಾಸಕ್ಕೆ ಕರೆದುಕೊಂಡು ಹೋಗಲಾಗಿತ್ತು.</p><p>ವಿಮಾನಯಾನದ ಖರ್ಚನ್ನು ಶಾಲೆಯ ಶಿಕ್ಷಕರು, ಗ್ರಾಮಸ್ಥರು ಹಾಗೂ ಖಾಸಗಿ ಕಂಪನಿಗಳಿಗೆ ಭರಿಸಲಾಗುತ್ತಿದೆ. </p><p>ಮಕ್ಕಳ ವಿಮಾನಯಾನದ ಪ್ರವಾಸಕ್ಕೆ ಶಾಲೆಯ ಆವರಣದಲ್ಲಿ ಶಾಸಕ ರಾಘವೇಂದ್ರ ಹಿಟ್ನಾಳ ಚಾಲನೆ ನೀಡಿ ‘ಕಲ್ಯಾಣ ಕರ್ನಾಟಕದಲ್ಲಿ ಮೊದಲ ಬಾರಿಗೆ ಲಿಂಗದಹಳ್ಳಿಯ ಸರ್ಕಾರಿ ಶಾಲೆಯ ಮಕ್ಕಳು ವಿಮಾನದಲ್ಲಿ ಪ್ರವಾಸ ಕೈಗೊಂಡಿದ್ದು ಖುಷಿ ನೀಡಿದೆ’ ಎಂದರು.</p><p>ಕಿರ್ಲೊಸ್ಕರ್ ಕಂಪನಿಯ ಪ್ರತಿನಿಧಿ ಡಿ.ನಾರಾಯಣ, ಕೊಪ್ಪಳ ಕ್ಷೇತ್ರ ಶಿಕ್ಷಣಾಧಿಕಾರಿ ಶಂಕರಯ್ಯ ಟಿ.ಎಸ್., ಗ್ರಾಮ ಪಂಚಾಯಿತಿ ಅಧ್ಯಕ್ಷೆ ತಿಪ್ಪವ್ವ ನಾಯಕ್, ಮುರಳಿ ಲಿಂಗದಹಳ್ಳಿ, ಪಿಡಿಒ ಗೀತಾ ಕುಮಾರಿ ಸೇರಿದಂತೆ ಅನೇಕರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>