ಇರಕಲ್ ಗಡ ಹೋಬಳಿ ವ್ಯಾಪ್ತಿಯಲ್ಲಿ 1602, ಗಂಗಾವತಿ ಮತ್ತು ವೆಂಕಟಗಿರಿ ವ್ಯಾಪ್ತಿಯಲ್ಲಿ 1172 ಅರ್ಜಿಗಳು ಸ್ವೀಕೃತವಾಗಿದ್ದು, ಇವುಗಳ ಇತ್ಯರ್ಥದ ಕುರಿತು ತಹಶೀಲ್ದಾರ್ ಜತೆ ಚರ್ಚಿಸಲಾಗುತ್ತದೆ. ಅರಣ್ಯ ಮತ್ತು ಕರಾಬ್ ಭೂಮಿಗಳ ಕುರಿತು ಸಂಪೂರ್ಣವಾದ ಮಾಹಿತಿ ದೊರೆತಿದೆ. ಕೆಲ ಅರಣ್ಯ ಅಧಿಕಾರಿಗಳಿಗೆ ಕೋವಿಡ್ ದೃಢಪಟ್ಟ ಕಾರಣ, ಸಭೆಗೆ ಹಾಜರಾಗಿರುವುದಿಲ್ಲ. ಆದ್ದರಿಂದ ಮತ್ತೊಮ್ಮೆ ಅಧಿಕಾರಿಗಳ ಸಭೆ ಕರೆದು, ಆಕ್ರಮದಿಂದ ಸಕ್ರಮಕ್ಕೆ ಬಂದ ಅರ್ಜಿಗಳನ್ನು ಪರಿಶೀಲಿಸಿ, ಸೂಕ್ತ ನಿರ್ಣಯ ಕೈಗೊಳ್ಳಲಾಗುತ್ತದೆ ಎಂದರು.