<p><strong>ಅಳವಂಡಿ:</strong> ‘ಪಿಯು ವಿದ್ಯಾರ್ಥಿಗಳು ಪರೀಕ್ಷೆಯನ್ನು ಆತ್ಮವಿಶ್ವಾಸದಿಂದ ಎದುರಿಸಬೇಕು. ಪರೀಕ್ಷೆ ಸಂದರ್ಭದಲ್ಲಿ ದೈಹಿಕ, ಮಾನಸಿಕ ಆರೋಗ್ಯ ಬಹಳ ಮುಖ್ಯ. ಒತ್ತಡಕ್ಕೆ ಒಳಗಾಗದೇ ಧೈರ್ಯದಿಂದ ಪರೀಕ್ಷೆ ಎದುರಿಸಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಿ’ ಎಂದು ದಾವಣಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಗುರುರಾಜ ಹಂಚಿನಾಳ ಹೇಳಿದರು.</p>.<p>ಇಲ್ಲಿನ ಸಿದ್ದೇಶ್ವರ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಭಾನುವಾರ ದ್ವಿತೀಯ ಪಿಯು ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡಿದ್ದ ಪರೀಕ್ಷಾ ಪೂರ್ವ ಸಿದ್ಧತಾ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.</p>.<p>ಬಾಗಲಕೋಟೆ ಅಂಜುಮನ್ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಪೀರಸಾಹೇಬ್ ತಪ್ಪಡಿ ಮಾತನಾಡಿ, ‘ವಿದ್ಯಾರ್ಥಿಗಳು ಪ್ರಾಮಾಣಿಕತೆ ಹಾಗೂ ಕಠಿಣ ಪರಿಶ್ರಮದಿಂದ ವ್ಯಾಸಂಗ ಮಾಡಬೇಕು. ಶಿಕ್ಷಕರ ಮಾರ್ಗದರ್ಶನದಲ್ಲಿ ಮುಂದುವರಿದಿದ್ದೇ ಆದಲ್ಲಿ ಪರೀಕ್ಷೆಯನ್ನು ಸುಲಭವಾಗಿ ಎದುರಿಸಿ ಹೆಚ್ಚಿನ ಸಾಧನೆ ಮಾಡಲು ಸಾಧ್ಯ’ ಎಂದರು.</p>.<p>ಪಿಯು ವಿದ್ಯಾರ್ಥಿಗಳಿಗೆ ಶಿಕ್ಷಣ ಶಾಸ್ತ್ರ, ಸಮಾಜಶಾಸ್ತ್ರ ವಿಷಯದ ಕುರಿತು ಹಾಗೂ ಪರೀಕ್ಷಾ ಪೂರ್ವತಯಾರಿ ಕುರಿತು ಮಾಹಿತಿ ನೀಡಿದರು.</p>.<p>ಪ್ರಕಾಶಸ್ವಾಮಿ ಇನಾಮದಾರ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಪ್ರಾಚಾರ್ಯ ಡಿ.ಜಿ.ಲಕ್ಕನಗೌಡರ, ಉಪನ್ಯಾಸಕರಾದ ನವೀನ ಇನಾಮದಾರ, ಸಿದ್ದು ಅಂಗಡಿ, ಮಲ್ಲಪ್ಪ ಅಂಬಿಗೇರ, ದೇವಮ್ಮ ಕಲಾದಗಿ, ಗಣೇಶ ಕೋಗಳಿ, ಅಂಬರೀಶ್ ಬೋಚನಹಳ್ಳಿ, ನೀಲಪ್ಪ ಅಂಗಡಿ, ಚನ್ನಯ್ಯ ಹಿರೇಮಠ ಹಾಗೂ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಳವಂಡಿ:</strong> ‘ಪಿಯು ವಿದ್ಯಾರ್ಥಿಗಳು ಪರೀಕ್ಷೆಯನ್ನು ಆತ್ಮವಿಶ್ವಾಸದಿಂದ ಎದುರಿಸಬೇಕು. ಪರೀಕ್ಷೆ ಸಂದರ್ಭದಲ್ಲಿ ದೈಹಿಕ, ಮಾನಸಿಕ ಆರೋಗ್ಯ ಬಹಳ ಮುಖ್ಯ. ಒತ್ತಡಕ್ಕೆ ಒಳಗಾಗದೇ ಧೈರ್ಯದಿಂದ ಪರೀಕ್ಷೆ ಎದುರಿಸಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಿ’ ಎಂದು ದಾವಣಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಗುರುರಾಜ ಹಂಚಿನಾಳ ಹೇಳಿದರು.</p>.<p>ಇಲ್ಲಿನ ಸಿದ್ದೇಶ್ವರ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಭಾನುವಾರ ದ್ವಿತೀಯ ಪಿಯು ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡಿದ್ದ ಪರೀಕ್ಷಾ ಪೂರ್ವ ಸಿದ್ಧತಾ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.</p>.<p>ಬಾಗಲಕೋಟೆ ಅಂಜುಮನ್ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಪೀರಸಾಹೇಬ್ ತಪ್ಪಡಿ ಮಾತನಾಡಿ, ‘ವಿದ್ಯಾರ್ಥಿಗಳು ಪ್ರಾಮಾಣಿಕತೆ ಹಾಗೂ ಕಠಿಣ ಪರಿಶ್ರಮದಿಂದ ವ್ಯಾಸಂಗ ಮಾಡಬೇಕು. ಶಿಕ್ಷಕರ ಮಾರ್ಗದರ್ಶನದಲ್ಲಿ ಮುಂದುವರಿದಿದ್ದೇ ಆದಲ್ಲಿ ಪರೀಕ್ಷೆಯನ್ನು ಸುಲಭವಾಗಿ ಎದುರಿಸಿ ಹೆಚ್ಚಿನ ಸಾಧನೆ ಮಾಡಲು ಸಾಧ್ಯ’ ಎಂದರು.</p>.<p>ಪಿಯು ವಿದ್ಯಾರ್ಥಿಗಳಿಗೆ ಶಿಕ್ಷಣ ಶಾಸ್ತ್ರ, ಸಮಾಜಶಾಸ್ತ್ರ ವಿಷಯದ ಕುರಿತು ಹಾಗೂ ಪರೀಕ್ಷಾ ಪೂರ್ವತಯಾರಿ ಕುರಿತು ಮಾಹಿತಿ ನೀಡಿದರು.</p>.<p>ಪ್ರಕಾಶಸ್ವಾಮಿ ಇನಾಮದಾರ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಪ್ರಾಚಾರ್ಯ ಡಿ.ಜಿ.ಲಕ್ಕನಗೌಡರ, ಉಪನ್ಯಾಸಕರಾದ ನವೀನ ಇನಾಮದಾರ, ಸಿದ್ದು ಅಂಗಡಿ, ಮಲ್ಲಪ್ಪ ಅಂಬಿಗೇರ, ದೇವಮ್ಮ ಕಲಾದಗಿ, ಗಣೇಶ ಕೋಗಳಿ, ಅಂಬರೀಶ್ ಬೋಚನಹಳ್ಳಿ, ನೀಲಪ್ಪ ಅಂಗಡಿ, ಚನ್ನಯ್ಯ ಹಿರೇಮಠ ಹಾಗೂ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>