ತಿಮ್ಮಪ್ಪ ಸೆಲ್ಲರ್ ಅವರು ಖರೀದಿಸಿದ ಭೂಮಿ ಇದಾಗಿದ್ದು ಅವರ ಮಕ್ಕಳು, ಮೊಮ್ಮಕ್ಕಳು ಭೂ ಸಾಗುವಳಿ ಮಾಡಾತ್ತಾ ಬಂದಿದ್ದಾರೆ. ಔಡಲ, ತೊಗರಿ ಬೆಳೆಯನ್ನು ಬಿತ್ತನೆ ಮಾಡಿದ್ದು, ಕೈಗೆ ಬಂದ ತುತ್ತು ಬಾಯಿಗೆ ಬಾರದಂತೆ ಅಧಿಕಾರಿಗಳು ಮಾಡಿದ್ದಾರೆ.
ಕಳೆದ ಎರಡು ದಿನಗಳಿಂದಲೂ ಜೆಸಿಬಿ ಬಳಸಿ ಬೆಳೆಗಳನ್ನು ಕಿತ್ತು ಹಾಕಿದ್ದಾರೆ. ಹೊಲ ಅರಣ್ಯ ಇಲಾಖೆಗೆ ಸೇರಿದ್ದು ಇದರಲ್ಲಿ ನಿಮ್ಮದು ಏನು ಇಲ್ಲ ಎಂದು ಅಧಿಕಾರಿಗಳು ತಿಳಿಸುತ್ತಾರೆ.
ಹದಿನೈದು ದಿನ ಸಮಯ ಕೊಡಿ ಎಂದು ಪರಿ ಪರಿಯಾಗಿ ವಿನಂತಿಸಿದರೂ ಕೇಳದೆ ಬೆಳೆ ನಾಶ ಪಡಿಸಿದ್ದಾರೆ. ಜಿಲ್ಲಾಡಳಿತ ಈ ಬಗ್ಗೆ ಗಮನ ಹರಿಸಿ ಪರಿಹಾರ ನೀಡಬೇಕೆಂದು ಆಗ್ರಹಿಸಿದ್ದಾರೆ.
ವಲಯ ಅರಣ್ಯ ಅಧಿಕಾರಿ ಶಿವಕುಮಾರ ಮೇಟಿ ಮಾತನಾಡಿ ಸರ್ವೆ ನಂಬರ್-29ರ ಹತ್ತು ಎಕರೆ ಭೂಮಿ ಅರಣ್ಯ ಇಲಾಖೆಗೆ ಸಂಬಂಧಿಸಿದ್ದು ಪಹಣಿ ಸಹ ಅರಣ್ಯ ಇಲಾಖೆಯ ಹೆಸರಿನಲ್ಲಿದೆ. ಭೂಮಿ ಒತ್ತುವರಿ ಮಾಡಿಕೊಂಡು ಬಂದು ಬಿತ್ತನೆ ಮಾಡಲಾಗುತ್ತಿತ್ತು. ಈ ಬಗ್ಗೆ ಕಳೆದ ಮೂರು ವರ್ಷಗಳಿಂದಲೂ ಸೂಚನೆ ನೀಡಿದರೂ ಒತ್ತುವರಿದಾರರು ಕ್ಯಾರೆ ಎನ್ನುತ್ತಿರಲಿಲ್ಲ. ಹೀಗಾಗಿ ಭೂಮಿಯನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಪ್ರತಿಕ್ರಿಯೆ ನೀಡಿದರು.