<p><strong>ಗಂಗಾವತಿ</strong>: ತಾಲ್ಲೂಕಿನ ವೆಂಕಟಗಿರಿ ಗ್ರಾಮದ ಹೊರವಲಯದಲ್ಲಿ ವ್ಯಕ್ತಿಯೊಬ್ಬರನ್ನು ಕೊಡಲಿಯಿಂದ ಹೊಡೆದು ಕೊಲೆ ಮಾಡಿರುವ ಘಟನೆ ಶನಿವಾರ ನಡೆದಿದೆ.</p>.<p>ಕೊಲೆಯಾದ ವ್ಯಕ್ತಿಯನ್ನು ವಿಠಲಾಪೂರ ಗ್ರಾಮದ ನಾಗರಾಜ ಈರಪ್ಪ (32) ಎಂದು ಗುರುತಿಸಲಾಗಿದೆ. ಕೊಲೆ ಮಾಡಿದ ಆರೋಪಿಗಳನ್ನು ಅದೇ ಗ್ರಾಮದ ಹನುಮಂತ, ಸಿದ್ದರಾಮೇಶ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಕೊಲೆ ಮಾಡಿರುವ ಆರೋಪಿಗಳಲ್ಲಿ ಹನುಮೇಶ ಎನ್ನುವವನು ಕನಕಗಿರಿ ಪೊಲೀಸ್ ಠಾಣೆಗೆ ಭೇಟಿ ನೀಡಿ, ಕೊಲೆ ಮಾಡಿರುವುದಾಗಿ ಒಪ್ಪಿ ಶರಣಾಗಿದ್ದಾನೆ. ಮತ್ತೊಬ್ಬ ನಾಪತ್ತೆಯಾಗಿದ್ದಾನೆ ಎಂದು ತಿಳಿದು ಬಂದಿದೆ.</p>.<p>ಕೊಲೆಯಾದ ವ್ಯಕ್ತಿ ಹನುಮೇಶ ಆರೋಪಿ ಪತ್ನಿ ಜೊತೆಗೆ ಅನೈತಿಕ ಸಂಬಂಧ ಹೊಂದಿದ್ದು, ಈ ವಿಷಯ ತಿಳಿದ ಪತಿ ಪತ್ನಿಯನ್ನು ಕಳೆದ ಒಂದು ವರ್ಷದ ಹಿಂದೆ ತವರು ಮನೆಗೆ ಕಳುಹಿಸಿದ್ದ.</p>.<p>ಅನೈತಿಕ ಸಂಬಂಧದ ವಿಚಾರ ಪತಿಗೆ ತಿಳಿದ ಕಾರಣಕ್ಕೆ ಕೊಲೆಯಾದ ನಾಗರಾಜ 1 ವರ್ಷದಿಂದ ಗ್ರಾಮದಲ್ಲಿ ಕಾಣಿಸಿಕೊಂಡಿರಲಿಲ್ಲ. ಕೆಲ ದಿನಗಳಿಂದ ಹಿಂದೆಯಷ್ಟೆ ಊರಿಗೆ ಬಂದಿದ್ದ. </p>.<p>ಗ್ರಾಮಕ್ಕೆ ಬಂದಿರುವ ವಿಷಯ ತಿಳಿಸಿದ ಆರೋಪಿ ಹನುಮೇಶ, ಸಿದ್ದರಾಮೇಶ ದ್ವೇಷದಿಂದ ವೆಂಕಟಗಿರಿ ಹೊರವಲಯದಲ್ಲಿ ಕೊಡಲಿಯಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದಾನೆ. ಈ ಕುರಿತು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗಂಗಾವತಿ</strong>: ತಾಲ್ಲೂಕಿನ ವೆಂಕಟಗಿರಿ ಗ್ರಾಮದ ಹೊರವಲಯದಲ್ಲಿ ವ್ಯಕ್ತಿಯೊಬ್ಬರನ್ನು ಕೊಡಲಿಯಿಂದ ಹೊಡೆದು ಕೊಲೆ ಮಾಡಿರುವ ಘಟನೆ ಶನಿವಾರ ನಡೆದಿದೆ.</p>.<p>ಕೊಲೆಯಾದ ವ್ಯಕ್ತಿಯನ್ನು ವಿಠಲಾಪೂರ ಗ್ರಾಮದ ನಾಗರಾಜ ಈರಪ್ಪ (32) ಎಂದು ಗುರುತಿಸಲಾಗಿದೆ. ಕೊಲೆ ಮಾಡಿದ ಆರೋಪಿಗಳನ್ನು ಅದೇ ಗ್ರಾಮದ ಹನುಮಂತ, ಸಿದ್ದರಾಮೇಶ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಕೊಲೆ ಮಾಡಿರುವ ಆರೋಪಿಗಳಲ್ಲಿ ಹನುಮೇಶ ಎನ್ನುವವನು ಕನಕಗಿರಿ ಪೊಲೀಸ್ ಠಾಣೆಗೆ ಭೇಟಿ ನೀಡಿ, ಕೊಲೆ ಮಾಡಿರುವುದಾಗಿ ಒಪ್ಪಿ ಶರಣಾಗಿದ್ದಾನೆ. ಮತ್ತೊಬ್ಬ ನಾಪತ್ತೆಯಾಗಿದ್ದಾನೆ ಎಂದು ತಿಳಿದು ಬಂದಿದೆ.</p>.<p>ಕೊಲೆಯಾದ ವ್ಯಕ್ತಿ ಹನುಮೇಶ ಆರೋಪಿ ಪತ್ನಿ ಜೊತೆಗೆ ಅನೈತಿಕ ಸಂಬಂಧ ಹೊಂದಿದ್ದು, ಈ ವಿಷಯ ತಿಳಿದ ಪತಿ ಪತ್ನಿಯನ್ನು ಕಳೆದ ಒಂದು ವರ್ಷದ ಹಿಂದೆ ತವರು ಮನೆಗೆ ಕಳುಹಿಸಿದ್ದ.</p>.<p>ಅನೈತಿಕ ಸಂಬಂಧದ ವಿಚಾರ ಪತಿಗೆ ತಿಳಿದ ಕಾರಣಕ್ಕೆ ಕೊಲೆಯಾದ ನಾಗರಾಜ 1 ವರ್ಷದಿಂದ ಗ್ರಾಮದಲ್ಲಿ ಕಾಣಿಸಿಕೊಂಡಿರಲಿಲ್ಲ. ಕೆಲ ದಿನಗಳಿಂದ ಹಿಂದೆಯಷ್ಟೆ ಊರಿಗೆ ಬಂದಿದ್ದ. </p>.<p>ಗ್ರಾಮಕ್ಕೆ ಬಂದಿರುವ ವಿಷಯ ತಿಳಿಸಿದ ಆರೋಪಿ ಹನುಮೇಶ, ಸಿದ್ದರಾಮೇಶ ದ್ವೇಷದಿಂದ ವೆಂಕಟಗಿರಿ ಹೊರವಲಯದಲ್ಲಿ ಕೊಡಲಿಯಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದಾನೆ. ಈ ಕುರಿತು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>