ಕೊಪ್ಪಳ: ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಭಾರತ ತಂಡ ಆಸ್ಟ್ರೇಲಿಯಾ ಎದುರು ಸೋತರೂ ಇಲ್ಲಿನ ಕೆಲವರು ಭಾನುವಾರ ರಾತ್ರಿ ಪಟಾಕಿ ಹೊಡೆದು ಸಂಭ್ರಮಿಸಿದರು.
ನಗರದ ಕಿನ್ನಾಳ ರಸ್ತೆಯ ಭಾಗ್ಯನಗರ ಸರ್ಕಲ್ನಲ್ಲಿ ರಾತ್ರಿ ಈ ಘಟನೆ ನಡೆದಿದೆ. ಪಂದ್ಯ ಮುಗಿದು ಒಂದು ಗಂಟೆಯ ನಂತರ ಸರ್ಕಲ್ನಲ್ಲಿ ಜಮಾವಣೆ ಸೇರಿದ ಕೆಲವರು ದಿಢೀರ್ ಎಂದು ಪಟಾಕಿ ಸಿಡಿಸಿ ಸಂಭ್ರಮಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.