ಶನಿವಾರ ಇಲ್ಲಿ ಕೃಷಿ ಇಲಾಖೆ ವತಿಯಿಂದ ರಾಷ್ಟ್ರೀಯ ಆಹಾರ ಭದ್ರತಾ ಯೋಜನೆಯಲ್ಲಿನ ವಿವಿಧ ಬಿತ್ತನೆ ಬೀಜಗಳನ್ನು ಒಳಗೊಂಡ ಕಿರುಚೀಲಗಳನ್ನು ವಿತರಿಸಿ ಮಾತನಾಡಿದ ಅವರು,‘ಬಹುತೇಕ ರೈತರು ಪ್ರತಿವರ್ಷ ಮೆಕ್ಕೆಜೋಳ, ಸೂರ್ಯಕಾಂತಿ ಹೀಗೆ ಒಂದೇ ಬೆಳೆಯುತ್ತಿರುವುದು ಕಂಡುಬಂದಿದೆ. ಅಲ್ಲದೆ ಅವೈಜ್ಞಾನಿಕ ರೀತಿಯಲ್ಲಿ ರಾಸಾಯನಿಕ ಗೊಬ್ಬರ ಬಳಸುವುದೂ ಸರಿಯಲ್ಲ. ಹಿಂದೆ ನಮ್ಮ ರೈತರು ಅನುಸರಿಸುತ್ತಿದ್ದ ಸಾಂಪ್ರದಾಯಿಕ ಬೆಳೆ ಪದ್ಧತಿ ಭೂಮಿಯ ಆರೋಗ್ಯಕ್ಕೆ ಪೂರಕವಾಗುತ್ತಿತ್ತು’ ಎಂದರು.