ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕನಕಗಿರಿ | ಅಂಬೇಡ್ಕರ್ ಪುತ್ಥಳಿಗೆ ಅವಮಾನ: ಗಡಿಪಾರಿಗೆ ಆಗ್ರಹ

Published 8 ಜನವರಿ 2024, 13:33 IST
Last Updated 8 ಜನವರಿ 2024, 13:33 IST
ಅಕ್ಷರ ಗಾತ್ರ

ಕನಕಗಿರಿ: ಗಂಗಾವತಿಯ ತಾಲ್ಲೂಕು ಕೋರ್ಟ್ ಮುಂಭಾಗ ಹಾಗೂ ಪೊಲೀಸ್ ಠಾಣೆಯ ಪರಿಸರದಲ್ಲಿರುವ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಪುತ್ಥಳಿಗೆ ಅವಮಾನ ಮಾಡಲಾಗಿದ್ದು, ಕಿಡಿಗೇಡಿಗಳನ್ನು ಕೂಡಲೇ ಬಂಧಿಸಿ ಗಡಿಪಾರು ಮಾಡಬೇಕು ಎಂದು ಪ್ರಗತಿಪರ ಸಂಘಟನೆಗಳ ಒಕ್ಕೂಟದ ತಾಲ್ಲೂಕು ಅಧ್ಯಕ್ಷ ಪಾಮಣ್ಣ ಅರಳಿಗನೂರು ಆಗ್ರಹಿಸಿದ್ದಾರೆ.

ಪಟ್ಟಣದಲ್ಲಿ ಸೋಮವಾರ ಈ ಕುರಿತು ಸುದ್ದಿಗಾರರ ಜತೆ ಮಾತನಾಡಿದ ಅವರು, ಕೋಮು ಗಲಭೆ ಸೃಷ್ಟಿಸಲು ಕಿಡಿಗೇಡಿಗಳು ಹುನ್ನಾರ ರೂಪಿಸಿ ಇಂತಹ ಕೆಲಸ ಮಾಡಿದ್ದಾರೆ. ಪೊಲೀಸ್ ಇಲಾಖೆ ಕಿಡಿಗೇಡಿಗಳನ್ನು ಪತ್ತೆ ಹಚ್ಚಿ ಕಠಿಣ ಕ್ರಮ‌ ತೆಗೆದುಕೊಳ್ಳಬೇಕು. ಸಮಾಜದಲ್ಲಿ ಇಂತಹ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸರು ನಿಗಾ ವಹಿಸಬೇಕು. ರಾಷ್ಟ್ರೀಯ ನಾಯಕರ ಮೂರ್ತಿ ಹಾಗೂ ವೃತ್ತಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಬೇಕು ಎಂದು ಮನವಿ ಮಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT