‘ಜಾಗತಿಕ ತಾಪಮಾನದಿಂದ ಜಲಮೂಲ ಬತ್ತಿ ಹೋಗುತ್ತಿದ್ದು, ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿಗಾಗಿ ಮತ್ತು ಕೃಷಿ ಚಟುವಟಿಕೆಗೆ ಅನುಕೂಲ ಕಲ್ಪಿಸಲು ರಾಜ್ಯ ಸರ್ಕಾರ ಈ ಸಲದ ಬಜೆಟ್ನಲ್ಲಿ ಜಿಲ್ಲೆಯ 93 ಕೆರೆಗಳ ಅಭಿವೃದ್ಧಿಗೆ ಸೂಚಿಸಿತ್ತು. ಅದರಂತೆ ಈಗ ಸರ್ವೆ ಕಾರ್ಯ ಮಾಡಲಾಗಿದೆ. ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಅಂಗವಾಗಿ ಆ. 15ರಂದು ಜಿಲ್ಲೆಯ ಪ್ರತಿ ತಾಲ್ಲೂಕಿನಲ್ಲಿ ಐದು ಕರೆಗಳಂತೆ 35 ಕೆರೆಗಳನ್ನು ಅಭಿವೃದ್ಧಿ ಪಡಿಸಲಾಗುತ್ತದೆ. ಅಮೃತ ಮಹೋತ್ಸವದ ಸವಿ ನೆನಪಿಗಾಗಿ ಈ ಕಾರ್ಯ ಮಾಡುತ್ತಿರುವ ಕಾರಣ ‘ಅಮೃತ ಸರೋವರ‘ ಎಂದು ಈ ಕೆರೆಗಳನ್ನು ಘೋಷಿಸಲಾಗುವುದು’ ಎಂದು ಜಿಲ್ಲಾ ಪಂಚಾಯ್ತಿ ಯೋಜನಾ ನಿರ್ದೇಶಕ ಟಿ. ಕೃಷ್ಣಮೂರ್ತಿ ತಿಳಿಸಿದ್ದಾರೆ.