<p><strong>ಕುಷ್ಟಗಿ</strong>: ನಿವೃತ್ತಿಯಾಗಿರುವ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ತಮಗೆ ಸುಪ್ರೀಂಕೋರ್ಟ್ ಆದೇಶದ ಪ್ರಕಾರ ಗ್ರಾಚ್ಯುಟಿ ಮೊತ್ತವನ್ನು ಪಾವತಿಸುವಂತೆ ಒತ್ತಾಯಿಸಿದ್ದಾರೆ.</p><p>ಈ ವಿಷಯ ಕುರಿತು ಮುಖ್ಯಮಂತ್ರಿಗೆ ಬರೆದ ಮನವಿಯನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಯಲ್ಲಮ್ಮ ಹಂಡಿ ಅವರಿಗೆ ಸಲ್ಲಿಸಿದರು.ಮಾತನಾಡಿದ ಪ್ರಮುಖರು, ‘2011-2023ರ ಅವಧಿಯಲ್ಲಿ ನಿವೃತ್ತಿಯಾಗಿರುವ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ಗ್ರಾಚ್ಯುಟಿ ಪಾವತಿ ಕಾಯ್ದೆ 1972ರ ಅನ್ವಯ ಗ್ರಾಚ್ಯುಟಿ ಮೊತ್ತವನ್ನು ಪಾವತಿಸುವಂತೆ ಸುಪ್ರೀಂಕೋರ್ಟ್ ತೀರ್ಪು ನೀಡಿದೆ. ಹಾಗಾಗಿ ಅಂಗನವಾಡಿಯ ಎಲ್ಲ ನೌಕರರಿಗೂ ಈ ನಿಬಂಧನೆಗಳು ಅನ್ವಯಿಸುತ್ತವೆ. ನ್ಯಾಯಾಲಯದ ತೀರ್ಪನ್ನು ಒಪ್ಪಿ ಆದೇಶ ಜಾರಿ ಮಾಡುವಂತೆ ಒತ್ತಾಯಿಸಿ ಚಳವಳಿ ನಡೆಸಿದ ಪರಿಣಾಮ ರಾಜ್ಯ ಮಹಿಳಾ ಮತ್ತು ಮಕ್ಕಳ ಇಲಾಖೆ 2023ರ ಏಪ್ರಿಲ್ನಲ್ಲಿ ಗ್ರಾಚ್ಯುಟಿ ಪಾವತಿಸುವ ಕುರಿತು ಆದೇಶ ಹೊರಡಿಸಿತ್ತು. ನಂತರ ₹183 ಕೋಟಿ ಅನುದಾನ ಬಿಡುಗಡೆ ಮಾಡುವಂತೆ ಸಭೆಯ ನಿರ್ಣಯಗಳನ್ನು ಹಣಕಾಸು ಇಲಾಖೆಗೆ ಸಲ್ಲಿಸಲಾಗಿತ್ತು. ಆದರೆ ಈ ವಿಷಯದಲ್ಲಿ ಹಣಕಾಸು ಇಲಾಖೆ ಅನುದಾನ ಬಿಡುಗಡೆ ಮಾಡದೆ ನೌಕರರನ್ನು ಸತಾಯಿಸುತ್ತಾ ಬಂದಿದೆ ಎಂದು ದೂರಿದರು. ವಿಳಂಬ ಮಾಡದೆ ಗ್ರಾಚ್ಯುಟಿ ಪಾವತಿಗೆ ಸರ್ಕಾರ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.</p><p>ಕಲಾವತಿ ಮೆಣೆದಾಳ, ಶಿವಲಿಂಗಮ್ಮ ಹಿರೇಮಠ, ಪಕ್ಕಮ್ಮ, ಕಸ್ತೂರಿ, ಜಯಶ್ರೀ, ಶಕುಂತಲಾ, ನಿಂಗಮ್ಮ, ರುಕ್ಮಿಣಿ, ಮಹಾದೇವಮ್ಮ ಪುರದ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಷ್ಟಗಿ</strong>: ನಿವೃತ್ತಿಯಾಗಿರುವ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ತಮಗೆ ಸುಪ್ರೀಂಕೋರ್ಟ್ ಆದೇಶದ ಪ್ರಕಾರ ಗ್ರಾಚ್ಯುಟಿ ಮೊತ್ತವನ್ನು ಪಾವತಿಸುವಂತೆ ಒತ್ತಾಯಿಸಿದ್ದಾರೆ.</p><p>ಈ ವಿಷಯ ಕುರಿತು ಮುಖ್ಯಮಂತ್ರಿಗೆ ಬರೆದ ಮನವಿಯನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಯಲ್ಲಮ್ಮ ಹಂಡಿ ಅವರಿಗೆ ಸಲ್ಲಿಸಿದರು.ಮಾತನಾಡಿದ ಪ್ರಮುಖರು, ‘2011-2023ರ ಅವಧಿಯಲ್ಲಿ ನಿವೃತ್ತಿಯಾಗಿರುವ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ಗ್ರಾಚ್ಯುಟಿ ಪಾವತಿ ಕಾಯ್ದೆ 1972ರ ಅನ್ವಯ ಗ್ರಾಚ್ಯುಟಿ ಮೊತ್ತವನ್ನು ಪಾವತಿಸುವಂತೆ ಸುಪ್ರೀಂಕೋರ್ಟ್ ತೀರ್ಪು ನೀಡಿದೆ. ಹಾಗಾಗಿ ಅಂಗನವಾಡಿಯ ಎಲ್ಲ ನೌಕರರಿಗೂ ಈ ನಿಬಂಧನೆಗಳು ಅನ್ವಯಿಸುತ್ತವೆ. ನ್ಯಾಯಾಲಯದ ತೀರ್ಪನ್ನು ಒಪ್ಪಿ ಆದೇಶ ಜಾರಿ ಮಾಡುವಂತೆ ಒತ್ತಾಯಿಸಿ ಚಳವಳಿ ನಡೆಸಿದ ಪರಿಣಾಮ ರಾಜ್ಯ ಮಹಿಳಾ ಮತ್ತು ಮಕ್ಕಳ ಇಲಾಖೆ 2023ರ ಏಪ್ರಿಲ್ನಲ್ಲಿ ಗ್ರಾಚ್ಯುಟಿ ಪಾವತಿಸುವ ಕುರಿತು ಆದೇಶ ಹೊರಡಿಸಿತ್ತು. ನಂತರ ₹183 ಕೋಟಿ ಅನುದಾನ ಬಿಡುಗಡೆ ಮಾಡುವಂತೆ ಸಭೆಯ ನಿರ್ಣಯಗಳನ್ನು ಹಣಕಾಸು ಇಲಾಖೆಗೆ ಸಲ್ಲಿಸಲಾಗಿತ್ತು. ಆದರೆ ಈ ವಿಷಯದಲ್ಲಿ ಹಣಕಾಸು ಇಲಾಖೆ ಅನುದಾನ ಬಿಡುಗಡೆ ಮಾಡದೆ ನೌಕರರನ್ನು ಸತಾಯಿಸುತ್ತಾ ಬಂದಿದೆ ಎಂದು ದೂರಿದರು. ವಿಳಂಬ ಮಾಡದೆ ಗ್ರಾಚ್ಯುಟಿ ಪಾವತಿಗೆ ಸರ್ಕಾರ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.</p><p>ಕಲಾವತಿ ಮೆಣೆದಾಳ, ಶಿವಲಿಂಗಮ್ಮ ಹಿರೇಮಠ, ಪಕ್ಕಮ್ಮ, ಕಸ್ತೂರಿ, ಜಯಶ್ರೀ, ಶಕುಂತಲಾ, ನಿಂಗಮ್ಮ, ರುಕ್ಮಿಣಿ, ಮಹಾದೇವಮ್ಮ ಪುರದ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>