<p><strong>ಗಂಗಾವತಿ: </strong>ಕೋವಿಡ್ ಆತಂಕದ ನಡುವೆಯೂ ತಾಲ್ಲೂಕಿನ ಚಿಕ್ಕರಾಂಪೂರ ಬಳಿ ಇರುವ ಐತಿಹಾಸಿಕ ಅಂಜನಾದ್ರಿಯ ಬೆಟ್ಟದ ಆಂಜನೇಯ ಸ್ವಾಮಿ ದೇಗುಲದ ಆದಾಯಕ್ಕೆ ಯಾವುದೇ ಧಕ್ಕೆಯಾಗಿಲ್ಲ.</p>.<p>ಗುರುವಾರ (ಸೆ.24) ದೇವಸ್ಥಾನದ ಆಡಳಿತ ಮಂಡಳಿಯು ತಹಶೀಲ್ದಾರ್ ಆರ್.ಕವಿತಾ ಅವರ ನೇತೃತ್ವದಲ್ಲಿ ಹುಂಡಿಯಲ್ಲಿ ಸಂಗ್ರಹವಾಗಿದ್ದ ಹಣ ಎಣಿಕೆ ಮಾಡಲಾಯಿತು. ಕೇವಲ ಒಂದು ತಿಂಗಳು 20 ದಿನಗಳ ಅವಧಿಯಲ್ಲಿ ಹುಂಡಿಯಲ್ಲಿ ₹10.23 ಲಕ್ಷ ಸಂಗ್ರಹವಾಗಿದೆ.</p>.<p>ಮಾರ್ಚ್ನಿಂದ ಅಗಸ್ಟ್ 4 ರವರೆಗೆ ಆರು ತಿಂಗಳುಗಳ ಕಾಲ ಕೊರೊನಾ ವೈರಸ್ ನಿಂದಾಗಿ ದೇವಸ್ಥಾನವನ್ನು ಜಿಲ್ಲಾಡಳಿತದ ಆದೇಶದ ಮೇರೆಗೆ ಬಂದ್ ಮಾಡಲಾಗಿತ್ತು. ಆದರೆ, ಸರ್ಕಾರದ ಸೂಚನೆ ಮೇರೆಗೆ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಅಗಸ್ಟ್ 5 ರಿಂದ ದೇವಸ್ಥಾನದಲ್ಲಿ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಯಿತು.</p>.<p>ಆರಂಭದಲ್ಲಿ ಕೋವಿಡ್ ಆತಂಕದ ಹಿನ್ನೆಲೆಯಲ್ಲಿ ಅಂಜನಾದ್ರಿಗೆ ಆಗಮಿಸುವ ಭಕ್ತರ ಸಂಖ್ಯೆ ಕಡಿಮೆ ಇತ್ತು. ಕ್ರಮೇಣ ಭಕ್ತರ ಸಂಖ್ಯೆಯಲ್ಲಿ ದುಪ್ಪಟ್ಟಾಗಿದ್ದು, ಪ್ರತಿ ಶನಿವಾರ ಆರು ಸಾವಿರಕ್ಕೂ ಹೆಚ್ಚು ಭಕ್ತರು ಅಂಜನಾದ್ರಿಗೆ ಆಗಮಿಸಿ ಹನುಮನ ದರ್ಶನ ಪಡೆಯುತ್ತಿದ್ದಾರೆ.</p>.<p>ಕಳೆದ ಶ್ರಾವಣ ಶನಿವಾರ 20 ಸಾವಿರಕ್ಕೂ ಅಧಿಕ ಭಕ್ತರು ಅಂಜನಾದ್ರಿಗೆ ಭೇಟಿ ನೀಡಿದ್ದರು. ಅಲ್ಲದೆ, ಬೇರೆ ರಾಜ್ಯಗಳ ಭಕ್ತರೂ ದೇವಸ್ಥಾನಕ್ಕೆ ಭೇಟಿ ಕೊಡುತ್ತಿದ್ದಾರೆ. ಇದರಿಂದ ದೇಗುಲಕ್ಕೆ ಆಗಮಿಸುವ ಭಕ್ತರ ಸಂಖ್ಯೆಯ ಜತೆಗೆ ಆದಾಯವೂ ಏರಿಕೆಯಾಗಿದೆ.</p>.<p>ಜನವರಿಯಲ್ಲಿ ಹುಂಡಿ ಹಣವನ್ನು ಎಣಿಕೆ ಮಾಡಿದಾಗ ₹10.53 ಲಕ್ಷ ಹಾಗೂ 16 ದೇಶದ ನಾಣ್ಯಗಳು ಸಿಕ್ಕಿದ್ದವು. ಫೆಬ್ರುವರಿಯಲ್ಲಿ ₹6.05 ಲಕ್ಷ ಮತ್ತು ಏಳು ದೇಶದ ಕರೆನ್ಸಿ ಸಂಗ್ರಹವಾಗಿತ್ತು. ಅದಾದ ಬಳಿಕ ಮಾರ್ಚ್ 23 ರವರೆಗೆ ಮಾತ್ರ ದೇಗುಲವನ್ನು ತೆರೆಯಲಾಗಿತ್ತು. ಈ ಅವಧಿಯಲ್ಲಿ ₹3.08 ಲಕ್ಷ ಹಣ ಹುಂಡಿಯಲ್ಲಿ ಸಂಗ್ರಹವಾಗಿತ್ತು. ನಂತರ ಕೋವಿಡ್ ಹಿನ್ನೆಲೆಯಲ್ಲಿ ಸುಮಾರು ನಾಲ್ಕು ತಿಂಗಳು ದೇಗುಲವನ್ನು ಬಂದ್ ಮಾಡಲಾಗಿತ್ತು.</p>.<p><strong>ಹುಂಡಿಯಲಿಲ್ಲ ವಿದೇಶಿ ಕರೆನ್ಸಿ:</strong> ಪ್ರತಿ ಸಲ ದೇಗುಲದ ಹುಂಡಿ ಹಣವನ್ನು ಎಣಿಕೆ ಮಾಡುವಾಗ ವಿದೇಶಿ ಕರೆನ್ಸಿಯ ನೋಟು, ನಾಣ್ಯಗಳು ಹೆಚ್ಚು ಸಿಗುತ್ತಿದ್ದವು. ಆದರೆ, ಈ ಬಾರಿ ಕೋವಿಡ್ ಹಿನ್ನೆಲೆಯಲ್ಲಿ ವಿದೇಶಿ ಭಕ್ತರ ದರ್ಶನಕ್ಕೆ ಅವಕಾಶ ಇಲ್ಲದೆ ಇರುವುದರಿಂದ ಹುಂಡಿಯಲ್ಲಿ ಯಾವುದೇ ವಿದೇಶಿ ಕರೆನ್ಸಿಗಳು ಸಂಗ್ರಹವಾಗಿಲ್ಲ.</p>.<p><strong>ಭಕ್ತರ ತಪಾಸಣೆ: </strong>ಅಂಜನಾದ್ರಿಯಲ್ಲಿ ತಾಲ್ಲೂಕು ಅಡಳಿತ ಸಾಕಷ್ಟು ಸುರಕ್ಷತಾ ಕ್ರಮಗಳನ್ನು ಕೈಗೊಂಡಿದ್ದು, ದೇಗುಲಕ್ಕೆ ಬರುವ ಭಕ್ತರ ಮೇಲೆ ನಿಗಾವಹಿಸಿದೆ.</p>.<p>ಪ್ರತಿಯೊಬ್ಬರಿಗೂ ಥರ್ಮಲ್ ಸ್ಕ್ರೀನಿಂಗ್ ಮಾಡಿ, ಅವರ ವಿಳಾಸವನ್ನು ದಾಖಲಿಸಿಕೊಳ್ಳಲಾಗುತ್ತಿದೆ. ಕಡ್ಡಾಯವಾಗಿ ಮಾಸ್ಕ್ ಧರಿಸಿ, ಅಂತರ ಕಾಯ್ದುಕೊಂಡು ಬೆಟ್ಟ ಹತ್ತುವಂತೆ ಸೂಚಿಸಲಾಗುತ್ತಿದೆ.</p>.<p>ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಭಕ್ತರಿಗೆ ಅಂಜನಾದ್ರಿಯ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಹುಂಡಿಯಲ್ಲಿ ಇಷ್ಟೊಂದು ಹಣ ಸಂಗ್ರಹವಾಗುತ್ದೆ ಎಂದು ಅಂದಾಜಿಸಿರಲಿಲ್ಲ.<br />ಮಂಜುನಾಥ ಹಿರೇಮಠ, ಕಂದಾಯ ನಿರೀಕ್ಷಕ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗಂಗಾವತಿ: </strong>ಕೋವಿಡ್ ಆತಂಕದ ನಡುವೆಯೂ ತಾಲ್ಲೂಕಿನ ಚಿಕ್ಕರಾಂಪೂರ ಬಳಿ ಇರುವ ಐತಿಹಾಸಿಕ ಅಂಜನಾದ್ರಿಯ ಬೆಟ್ಟದ ಆಂಜನೇಯ ಸ್ವಾಮಿ ದೇಗುಲದ ಆದಾಯಕ್ಕೆ ಯಾವುದೇ ಧಕ್ಕೆಯಾಗಿಲ್ಲ.</p>.<p>ಗುರುವಾರ (ಸೆ.24) ದೇವಸ್ಥಾನದ ಆಡಳಿತ ಮಂಡಳಿಯು ತಹಶೀಲ್ದಾರ್ ಆರ್.ಕವಿತಾ ಅವರ ನೇತೃತ್ವದಲ್ಲಿ ಹುಂಡಿಯಲ್ಲಿ ಸಂಗ್ರಹವಾಗಿದ್ದ ಹಣ ಎಣಿಕೆ ಮಾಡಲಾಯಿತು. ಕೇವಲ ಒಂದು ತಿಂಗಳು 20 ದಿನಗಳ ಅವಧಿಯಲ್ಲಿ ಹುಂಡಿಯಲ್ಲಿ ₹10.23 ಲಕ್ಷ ಸಂಗ್ರಹವಾಗಿದೆ.</p>.<p>ಮಾರ್ಚ್ನಿಂದ ಅಗಸ್ಟ್ 4 ರವರೆಗೆ ಆರು ತಿಂಗಳುಗಳ ಕಾಲ ಕೊರೊನಾ ವೈರಸ್ ನಿಂದಾಗಿ ದೇವಸ್ಥಾನವನ್ನು ಜಿಲ್ಲಾಡಳಿತದ ಆದೇಶದ ಮೇರೆಗೆ ಬಂದ್ ಮಾಡಲಾಗಿತ್ತು. ಆದರೆ, ಸರ್ಕಾರದ ಸೂಚನೆ ಮೇರೆಗೆ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಅಗಸ್ಟ್ 5 ರಿಂದ ದೇವಸ್ಥಾನದಲ್ಲಿ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಯಿತು.</p>.<p>ಆರಂಭದಲ್ಲಿ ಕೋವಿಡ್ ಆತಂಕದ ಹಿನ್ನೆಲೆಯಲ್ಲಿ ಅಂಜನಾದ್ರಿಗೆ ಆಗಮಿಸುವ ಭಕ್ತರ ಸಂಖ್ಯೆ ಕಡಿಮೆ ಇತ್ತು. ಕ್ರಮೇಣ ಭಕ್ತರ ಸಂಖ್ಯೆಯಲ್ಲಿ ದುಪ್ಪಟ್ಟಾಗಿದ್ದು, ಪ್ರತಿ ಶನಿವಾರ ಆರು ಸಾವಿರಕ್ಕೂ ಹೆಚ್ಚು ಭಕ್ತರು ಅಂಜನಾದ್ರಿಗೆ ಆಗಮಿಸಿ ಹನುಮನ ದರ್ಶನ ಪಡೆಯುತ್ತಿದ್ದಾರೆ.</p>.<p>ಕಳೆದ ಶ್ರಾವಣ ಶನಿವಾರ 20 ಸಾವಿರಕ್ಕೂ ಅಧಿಕ ಭಕ್ತರು ಅಂಜನಾದ್ರಿಗೆ ಭೇಟಿ ನೀಡಿದ್ದರು. ಅಲ್ಲದೆ, ಬೇರೆ ರಾಜ್ಯಗಳ ಭಕ್ತರೂ ದೇವಸ್ಥಾನಕ್ಕೆ ಭೇಟಿ ಕೊಡುತ್ತಿದ್ದಾರೆ. ಇದರಿಂದ ದೇಗುಲಕ್ಕೆ ಆಗಮಿಸುವ ಭಕ್ತರ ಸಂಖ್ಯೆಯ ಜತೆಗೆ ಆದಾಯವೂ ಏರಿಕೆಯಾಗಿದೆ.</p>.<p>ಜನವರಿಯಲ್ಲಿ ಹುಂಡಿ ಹಣವನ್ನು ಎಣಿಕೆ ಮಾಡಿದಾಗ ₹10.53 ಲಕ್ಷ ಹಾಗೂ 16 ದೇಶದ ನಾಣ್ಯಗಳು ಸಿಕ್ಕಿದ್ದವು. ಫೆಬ್ರುವರಿಯಲ್ಲಿ ₹6.05 ಲಕ್ಷ ಮತ್ತು ಏಳು ದೇಶದ ಕರೆನ್ಸಿ ಸಂಗ್ರಹವಾಗಿತ್ತು. ಅದಾದ ಬಳಿಕ ಮಾರ್ಚ್ 23 ರವರೆಗೆ ಮಾತ್ರ ದೇಗುಲವನ್ನು ತೆರೆಯಲಾಗಿತ್ತು. ಈ ಅವಧಿಯಲ್ಲಿ ₹3.08 ಲಕ್ಷ ಹಣ ಹುಂಡಿಯಲ್ಲಿ ಸಂಗ್ರಹವಾಗಿತ್ತು. ನಂತರ ಕೋವಿಡ್ ಹಿನ್ನೆಲೆಯಲ್ಲಿ ಸುಮಾರು ನಾಲ್ಕು ತಿಂಗಳು ದೇಗುಲವನ್ನು ಬಂದ್ ಮಾಡಲಾಗಿತ್ತು.</p>.<p><strong>ಹುಂಡಿಯಲಿಲ್ಲ ವಿದೇಶಿ ಕರೆನ್ಸಿ:</strong> ಪ್ರತಿ ಸಲ ದೇಗುಲದ ಹುಂಡಿ ಹಣವನ್ನು ಎಣಿಕೆ ಮಾಡುವಾಗ ವಿದೇಶಿ ಕರೆನ್ಸಿಯ ನೋಟು, ನಾಣ್ಯಗಳು ಹೆಚ್ಚು ಸಿಗುತ್ತಿದ್ದವು. ಆದರೆ, ಈ ಬಾರಿ ಕೋವಿಡ್ ಹಿನ್ನೆಲೆಯಲ್ಲಿ ವಿದೇಶಿ ಭಕ್ತರ ದರ್ಶನಕ್ಕೆ ಅವಕಾಶ ಇಲ್ಲದೆ ಇರುವುದರಿಂದ ಹುಂಡಿಯಲ್ಲಿ ಯಾವುದೇ ವಿದೇಶಿ ಕರೆನ್ಸಿಗಳು ಸಂಗ್ರಹವಾಗಿಲ್ಲ.</p>.<p><strong>ಭಕ್ತರ ತಪಾಸಣೆ: </strong>ಅಂಜನಾದ್ರಿಯಲ್ಲಿ ತಾಲ್ಲೂಕು ಅಡಳಿತ ಸಾಕಷ್ಟು ಸುರಕ್ಷತಾ ಕ್ರಮಗಳನ್ನು ಕೈಗೊಂಡಿದ್ದು, ದೇಗುಲಕ್ಕೆ ಬರುವ ಭಕ್ತರ ಮೇಲೆ ನಿಗಾವಹಿಸಿದೆ.</p>.<p>ಪ್ರತಿಯೊಬ್ಬರಿಗೂ ಥರ್ಮಲ್ ಸ್ಕ್ರೀನಿಂಗ್ ಮಾಡಿ, ಅವರ ವಿಳಾಸವನ್ನು ದಾಖಲಿಸಿಕೊಳ್ಳಲಾಗುತ್ತಿದೆ. ಕಡ್ಡಾಯವಾಗಿ ಮಾಸ್ಕ್ ಧರಿಸಿ, ಅಂತರ ಕಾಯ್ದುಕೊಂಡು ಬೆಟ್ಟ ಹತ್ತುವಂತೆ ಸೂಚಿಸಲಾಗುತ್ತಿದೆ.</p>.<p>ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಭಕ್ತರಿಗೆ ಅಂಜನಾದ್ರಿಯ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಹುಂಡಿಯಲ್ಲಿ ಇಷ್ಟೊಂದು ಹಣ ಸಂಗ್ರಹವಾಗುತ್ದೆ ಎಂದು ಅಂದಾಜಿಸಿರಲಿಲ್ಲ.<br />ಮಂಜುನಾಥ ಹಿರೇಮಠ, ಕಂದಾಯ ನಿರೀಕ್ಷಕ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>