<p><strong>ಕೊಪ್ಪಳ:</strong> ಹನುಮನ ಜನ್ಮಸ್ಥಳ ಎನ್ನುವ ಪ್ರತೀತಿ ಹೊಂದಿರುವ ಗಂಗಾವತಿ ತಾಲ್ಲೂಕಿನ ಅಂಜನಾದ್ರಿ ಬೆಟ್ಟದ ಅಭಿವೃದ್ಧಿ ಸಂಬಂಧ ಚರ್ಚಿಸಲು ಶುಕ್ರವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಜೊತೆ ನಿಗದಿಯಾಗಿದ್ದ ಸಭೆ ಮತ್ತೆ ಮುಂದೂಡಲಾಗಿದೆ.</p>.<p>ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಿಗದಿಯಾಗಿತ್ತು. ಈ ಮೊದಲು ಜೂ. 15ರಂದು ನಡೆಯಬೇಕಿದ್ದ ಸಭೆ 24ಕ್ಕೆ ಮುಂದೂಡಲಾಗಿತ್ತು. ಈಗ ಶನಿವಾರಕ್ಕೆ (ಜೂ. 25) ಮುಂದೂಡಲಾಗಿದೆ.</p>.<p>ಸಭೆ ಯಾಕೆ ಮುಂದೂಡಲಾಗಿದೆ ಎನ್ನುವುದು ಗೊತ್ತಿಲ್ಲ. ಶನಿವಾರ ಮಧ್ಯಾಹ್ನ 12ಕ್ಕೆ ಸಭೆ ನಡೆಯಲಿದೆ ಎಂದು ಕೊಪ್ಪಳ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಪ್ಪಳ:</strong> ಹನುಮನ ಜನ್ಮಸ್ಥಳ ಎನ್ನುವ ಪ್ರತೀತಿ ಹೊಂದಿರುವ ಗಂಗಾವತಿ ತಾಲ್ಲೂಕಿನ ಅಂಜನಾದ್ರಿ ಬೆಟ್ಟದ ಅಭಿವೃದ್ಧಿ ಸಂಬಂಧ ಚರ್ಚಿಸಲು ಶುಕ್ರವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಜೊತೆ ನಿಗದಿಯಾಗಿದ್ದ ಸಭೆ ಮತ್ತೆ ಮುಂದೂಡಲಾಗಿದೆ.</p>.<p>ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಿಗದಿಯಾಗಿತ್ತು. ಈ ಮೊದಲು ಜೂ. 15ರಂದು ನಡೆಯಬೇಕಿದ್ದ ಸಭೆ 24ಕ್ಕೆ ಮುಂದೂಡಲಾಗಿತ್ತು. ಈಗ ಶನಿವಾರಕ್ಕೆ (ಜೂ. 25) ಮುಂದೂಡಲಾಗಿದೆ.</p>.<p>ಸಭೆ ಯಾಕೆ ಮುಂದೂಡಲಾಗಿದೆ ಎನ್ನುವುದು ಗೊತ್ತಿಲ್ಲ. ಶನಿವಾರ ಮಧ್ಯಾಹ್ನ 12ಕ್ಕೆ ಸಭೆ ನಡೆಯಲಿದೆ ಎಂದು ಕೊಪ್ಪಳ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>