ಕೊಪ್ಪಳ: ಹನುಮನ ಜನ್ಮಸ್ಥಳ ಎನ್ನುವ ಪ್ರತೀತಿ ಹೊಂದಿರುವ ಗಂಗಾವತಿ ತಾಲ್ಲೂಕಿನ ಅಂಜನಾದ್ರಿ ಬೆಟ್ಟದ ಅಭಿವೃದ್ಧಿ ಸಂಬಂಧ ಚರ್ಚಿಸಲು ಶುಕ್ರವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಜೊತೆ ನಿಗದಿಯಾಗಿದ್ದ ಸಭೆ ಮತ್ತೆ ಮುಂದೂಡಲಾಗಿದೆ.
ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಿಗದಿಯಾಗಿತ್ತು. ಈ ಮೊದಲು ಜೂ. 15ರಂದು ನಡೆಯಬೇಕಿದ್ದ ಸಭೆ 24ಕ್ಕೆ ಮುಂದೂಡಲಾಗಿತ್ತು. ಈಗ ಶನಿವಾರಕ್ಕೆ (ಜೂ. 25) ಮುಂದೂಡಲಾಗಿದೆ.
ಸಭೆ ಯಾಕೆ ಮುಂದೂಡಲಾಗಿದೆ ಎನ್ನುವುದು ಗೊತ್ತಿಲ್ಲ. ಶನಿವಾರ ಮಧ್ಯಾಹ್ನ 12ಕ್ಕೆ ಸಭೆ ನಡೆಯಲಿದೆ ಎಂದು ಕೊಪ್ಪಳ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ತಿಳಿಸಿದರು.