ಗಂಗಾವತಿ (ಕೊಪ್ಪಳ ಜಿಲ್ಲೆ): ತಾಲ್ಲೂಕಿನ ಅಂಜನಾದ್ರಿ ಬೆಟ್ಟದಲ್ಲಿ ಭಾನುವಾರ (ಡಿ 24) ಹನುಮಮಾಲೆ ವಿಸರ್ಜನೆ ನಡೆಯಲಿದ್ದು, ಭಕ್ತರ ಸ್ವಾಗತಕ್ಕೆ ಜಿಲ್ಲಾಡಳಿತ ಸಿದ್ದತೆ ಮಾಡಿಕೊಂಡಿದೆ.
ಶನಿವಾರ ಸಂಜೆಯಿಂದಲೇ ಭಕ್ತರು ಪಾದಯಾತ್ರೆ ಮೂಲಕ ಅಂಜನಾದ್ರಿಯತ್ತ ಸಾಗಿ ಬಂದರು. ಹನುಮನ ಹೆಸರಿನಲ್ಲಿ ತಮ್ಮ ಶಕ್ತಿಯನುಸಾರ ಭಕ್ತರು 5, 11 ಹಾಗೂ 21 ದಿನಗಳ ಕಾಲ ವ್ರತದ ಸಂಕಲ್ಪ ಮಾಡಿ ತುಳಸಿ ಮಾಲೆ ಧರಿಸುತ್ತಾರೆ. ವ್ರತ ಪೂರ್ಣಗೊಳಿಸಿ ಅಂಜನಾದ್ರಿಯಲ್ಲಿ ಮಾಲೆ ವಿಸರ್ಜನೆ ಮಾಡುವ ಸಂಪ್ರದಾಯ ಹಲವು ವರ್ಷಗಳಿಂದ ನಡೆದುಕೊಂಡು ಬಂದಿದೆ.