‘ಗಂಗಾವತಿ ತಾಲ್ಲೂಕು ವ್ಯಾಪ್ತಿಯ ಬೆಟ್ಟಗುಡ್ಡಗಳು ನೈಸರ್ಗಿಕ ಅರಣ್ಯ ಪ್ರದೇಶಗಳಾಗಿವೆ. ಆದ್ದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ತಾಲ್ಲೂಕಿನ ಸಣಾಪುರ ಕೆರೆ, ಪಂಪಾ ಸರೋವರ, ದುರ್ಗಾದೇವಿ ದೇವಸ್ಥಾನ, ತಿರುಮಲಾಪುರ, ಹನುಮನಹಳ್ಳಿ ಹಾಗೂ ಆನೆಗೊಂದಿ ಸುತ್ತಮುತ್ತಲಿನ ಪ್ರದೇಶಗಳಿಗೆ ಪ್ರವಾಸಿಗರ ಪ್ರವೇಶ ನಿಷೇಧಿಸಲಾಗಿದೆ.ಈ ಪ್ರದೇಶದಲ್ಲಿನಿಷೇಧಾಜ್ಞೆ ಜಾರಿಯಲ್ಲಿರಲಿದೆ’ ಎಂದು ಆದೇಶದಲ್ಲಿ ತಿಳಿಸಿದ್ಧಾರೆ.