ಅಂಜನಾದ್ರಿ: ಡಿ.10 ರವರೆಗೆ ದರ್ಶನ ನಿಷೇಧ

ಗಂಗಾವತಿ: ತಾಲ್ಲೂಕಿನ ಆನೆಗೊಂದಿ ವ್ಯಾಪ್ತಿಯಲ್ಲಿ ತಿಂಗಳಿನಿಂದ ಚಿರತೆ ಹಾಗೂ ಕರಡಿ ಹಾವಳಿ ಹೆಚ್ಚಿದ ಕಾರಣ ಅಂಜನಾದ್ರಿ ಬೆಟ್ಟಕ್ಕೆ ಡಿ.10 ರವರೆಗೆ ಪ್ರವಾಸಿಗರ ಪ್ರವೇಶ ನಿಷೇಧಿಸಿ ಉಪವಿಭಾಗಾಧಿಕಾರಿ ನಾರಾಯಣರೆಡ್ಡಿ ಕನಕರೆಡ್ಡಿ ಮಂಗಳವಾರ ಆದೇಶ ಹೊರಡಿಸಿದ್ದಾರೆ.
‘ಗಂಗಾವತಿ ತಾಲ್ಲೂಕು ವ್ಯಾಪ್ತಿಯ ಬೆಟ್ಟಗುಡ್ಡಗಳು ನೈಸರ್ಗಿಕ ಅರಣ್ಯ ಪ್ರದೇಶಗಳಾಗಿವೆ. ಆದ್ದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ತಾಲ್ಲೂಕಿನ ಸಣಾಪುರ ಕೆರೆ, ಪಂಪಾ ಸರೋವರ, ದುರ್ಗಾದೇವಿ ದೇವಸ್ಥಾನ, ತಿರುಮಲಾಪುರ, ಹನುಮನಹಳ್ಳಿ ಹಾಗೂ ಆನೆಗೊಂದಿ ಸುತ್ತಮುತ್ತಲಿನ ಪ್ರದೇಶಗಳಿಗೆ ಪ್ರವಾಸಿಗರ ಪ್ರವೇಶ ನಿಷೇಧಿಸಲಾಗಿದೆ. ಈ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರಲಿದೆ’ ಎಂದು ಆದೇಶದಲ್ಲಿ ತಿಳಿಸಿದ್ಧಾರೆ.
ಕೆಲ ದಿನಗಳ ಹಿಂದೆ ಆನೆಗೊಂದಿಯ ಆದಿಶಕ್ತಿ ದುರ್ಗಾದೇವಿ ದೇಗುಲದ ಅಡುಗೆ ಸಿಬ್ಬಂದಿಯೊಬ್ಬರನ್ನು ಚಿರತೆ ಕೊಂದು ಹಾಕಿತ್ತು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.