<p><strong>ಗಂಗಾವತಿ:</strong> ನಗರದ ರೈಲು ನಿಲ್ದಾಣಕ್ಕೆ ಅಂಜನಾದ್ರಿ ರೈಲ್ವೆ ನಿಲ್ದಾಣ ಎಂದು ನಾಮಕರಣ ಮಾಡುವಂತೆ ಆಗ್ರಹಿಸಿ ಸರ್ವಾಂಗೀಣ ಅಭಿವೃದ್ಧಿ ಹೋರಾಟ ಸಮಿತಿ ಕಾರ್ಯಕರ್ತರು ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿ, ಮನವಿ ಸಲ್ಲಿಸಿದರು.</p>.<p>ಸಮಿತಿ ಜಿಲ್ಲಾಧ್ಯಕ್ಷ ಬಸವರಾಜ ಮ್ಯಾಗಳಮನಿ ಮಾತನಾಡಿ, ‘ರಾಮಾಯಣ ಕಾಲದ ಇತಿಹಾಸ ಹೊಂದಿರುವ ಗಂಗಾವತಿ ತಾಲ್ಲೂಕಿನಲ್ಲಿ ಸಾಕಷ್ಟು ಪ್ರವಾಸಿ ಸ್ಥಳಗಳನ್ನು ಕಾಣಬಹುದಾಗಿದೆ. ಅಂಜನಾದ್ರಿ ಬೆಟ್ಟ, ಶಬರಿಗುಹೆ, ಪಂಪಾಸರೋವರ ಸೇರಿದಂತೆ ಹಲವು ಪ್ರದೇಶಗಳಿವೆ. ಇಲ್ಲಿಗೆ ಸಾಕಷ್ಟು ಜನ ಭಕ್ತರು, ಪ್ರವಾಸಿಗರು ಭೇಟಿ ನೀಡುತ್ತಾರೆ’ ಎಂದರು.</p>.<p>‘ಗಂಗಾವತಿ ರೈಲು ನಿಲ್ದಾಣಕ್ಕೆ ಅಂಜನಾದ್ರಿ ರೈಲ್ವೆ ನಿಲ್ದಾಣ ಎಂದು ನಾಮಕರಣ ಮಾಡಬೇಕು. ಅಲ್ಲದೆ ಗಂಗಾವತಿ-ಬೆಂಗಳೂರಿಗೆ ಹೋಗುವ ರೈಲಿಗೆ ಅಂಜನಾದ್ರಿ ಎಕ್ಸಪ್ರೆಸ್ಸ್ ಎಂದು ನಾಮಕರಣ ಮಾಡಬೇಕು. ಈಚೆಗೆ ಉದ್ಯೋಗ ಖಾತರಿ ಯೋಜನೆ ತಿದ್ದುಪಡಿ ಮಾಡಿ, ಗಾಂಧೀಜಿ ಹೆಸರು ಕೈ ಬಿಟ್ಟಿರುವುದು ಸರಿಯಲ್ಲ. ಕೂಡಲೇ ನಿರ್ಧಾರ ಹಿಂಪಡೆಯಬೇಕು’ ಎಂದು ಆಗ್ರಹಿಸಿದರು.</p>.<p>ಗ್ರೇಡ್-2 ತಹಶೀಲ್ದಾರ್ ಮಹಾಂತಗೌಡ ಪಾಟೀಲ, ಸಮಿತಿ ಪದಾಧಿಕಾರಿ ರಾಘವೇಂದ್ರ ಕಡೆಬಾಗಿಲು, ದುರ್ಗೇಶ ಹೊಸಳ್ಳಿ, ಬಸವರಾಜ ನಾಯಕ, ಅರವಿಂದ ಯೋಗಿ, ಮೇಘರಾಜ, ರಾಮಣ್ಣ ರುದ್ರಾಕ್ಷಿ, ಬೋಗೇಶ ಆನೆಗುಂದಿ, ಗಣೇಶ, ಹನುಮೇಶ ಖಾಟಾಪುರ, ಮಂಜುನಾಥ ಹಿರೇಮಠ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗಂಗಾವತಿ:</strong> ನಗರದ ರೈಲು ನಿಲ್ದಾಣಕ್ಕೆ ಅಂಜನಾದ್ರಿ ರೈಲ್ವೆ ನಿಲ್ದಾಣ ಎಂದು ನಾಮಕರಣ ಮಾಡುವಂತೆ ಆಗ್ರಹಿಸಿ ಸರ್ವಾಂಗೀಣ ಅಭಿವೃದ್ಧಿ ಹೋರಾಟ ಸಮಿತಿ ಕಾರ್ಯಕರ್ತರು ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿ, ಮನವಿ ಸಲ್ಲಿಸಿದರು.</p>.<p>ಸಮಿತಿ ಜಿಲ್ಲಾಧ್ಯಕ್ಷ ಬಸವರಾಜ ಮ್ಯಾಗಳಮನಿ ಮಾತನಾಡಿ, ‘ರಾಮಾಯಣ ಕಾಲದ ಇತಿಹಾಸ ಹೊಂದಿರುವ ಗಂಗಾವತಿ ತಾಲ್ಲೂಕಿನಲ್ಲಿ ಸಾಕಷ್ಟು ಪ್ರವಾಸಿ ಸ್ಥಳಗಳನ್ನು ಕಾಣಬಹುದಾಗಿದೆ. ಅಂಜನಾದ್ರಿ ಬೆಟ್ಟ, ಶಬರಿಗುಹೆ, ಪಂಪಾಸರೋವರ ಸೇರಿದಂತೆ ಹಲವು ಪ್ರದೇಶಗಳಿವೆ. ಇಲ್ಲಿಗೆ ಸಾಕಷ್ಟು ಜನ ಭಕ್ತರು, ಪ್ರವಾಸಿಗರು ಭೇಟಿ ನೀಡುತ್ತಾರೆ’ ಎಂದರು.</p>.<p>‘ಗಂಗಾವತಿ ರೈಲು ನಿಲ್ದಾಣಕ್ಕೆ ಅಂಜನಾದ್ರಿ ರೈಲ್ವೆ ನಿಲ್ದಾಣ ಎಂದು ನಾಮಕರಣ ಮಾಡಬೇಕು. ಅಲ್ಲದೆ ಗಂಗಾವತಿ-ಬೆಂಗಳೂರಿಗೆ ಹೋಗುವ ರೈಲಿಗೆ ಅಂಜನಾದ್ರಿ ಎಕ್ಸಪ್ರೆಸ್ಸ್ ಎಂದು ನಾಮಕರಣ ಮಾಡಬೇಕು. ಈಚೆಗೆ ಉದ್ಯೋಗ ಖಾತರಿ ಯೋಜನೆ ತಿದ್ದುಪಡಿ ಮಾಡಿ, ಗಾಂಧೀಜಿ ಹೆಸರು ಕೈ ಬಿಟ್ಟಿರುವುದು ಸರಿಯಲ್ಲ. ಕೂಡಲೇ ನಿರ್ಧಾರ ಹಿಂಪಡೆಯಬೇಕು’ ಎಂದು ಆಗ್ರಹಿಸಿದರು.</p>.<p>ಗ್ರೇಡ್-2 ತಹಶೀಲ್ದಾರ್ ಮಹಾಂತಗೌಡ ಪಾಟೀಲ, ಸಮಿತಿ ಪದಾಧಿಕಾರಿ ರಾಘವೇಂದ್ರ ಕಡೆಬಾಗಿಲು, ದುರ್ಗೇಶ ಹೊಸಳ್ಳಿ, ಬಸವರಾಜ ನಾಯಕ, ಅರವಿಂದ ಯೋಗಿ, ಮೇಘರಾಜ, ರಾಮಣ್ಣ ರುದ್ರಾಕ್ಷಿ, ಬೋಗೇಶ ಆನೆಗುಂದಿ, ಗಣೇಶ, ಹನುಮೇಶ ಖಾಟಾಪುರ, ಮಂಜುನಾಥ ಹಿರೇಮಠ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>