<p><strong>ಗಂಗಾವತಿ (ಕೊಪ್ಪಳ ಜಿಲ್ಲೆ):</strong> ‘ಅಂಜನಾದ್ರಿ ಬೆಟ್ಟ ಪ್ರದೇಶದಲ್ಲಿ ಹಿಂದೂಗಳನ್ನು ಹೊರತುಪಡಿಸಿ ಅನ್ಯ ಧರ್ಮೀಯರಿಗೆ ವ್ಯಾಪಾರಕ್ಕೆ ಅವಕಾಶ ಮಾಡಿಕೊಡಬಾರದು’ ಎಂದು ಹಿಂದೂ ಜಾಗರಣ ವೇದಿಕೆ ಬೆಟ್ಟದ ಸಮೀಪ ಹಾಕಿದ್ದ ಫಲಕಗಳನ್ನು ಗಂಗಾವತಿ ತಾಲ್ಲೂಕು ಆಡಳಿತ ಮಂಗಳವಾರ ತೆರವುಗೊಳಿಸಿದೆ.</p>.<p>‘ಅಂಜನಾದ್ರಿ ಸುತ್ತಲೂ ವ್ಯಾಪಾರ ಮಾಡುವ ಜಾಗ ಖಾಸಗಿಯವರಿಗೆ ಸೇರಿದ್ದು ಅನುಮತಿ ನೀಡುವುದು, ಬಿಡುವುದು ಅಲ್ಲಿನ ಮಾಲೀಕರಿಗೆ ಬಿಟ್ಟ ವಿಚಾರ’ ಎಂದು ಗಂಗಾವತಿ ತಹಶೀಲ್ದಾರ್ ಯು. ನಾಗರಾಜ್ ತಿಳಿಸಿದರು.</p>.<p>ಜಾಗರಣಾ ವೇದಿಕೆ ನಡೆ ಖಂಡಿಸಿ ಮಂಗಳವಾರ ಸಿಪಿಐಎಂ ತಾಲ್ಲೂಕು ಸಮಿತಿ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿತು.</p>.<p>‘ಹಿಂದೂ ಜಾಗರಣ ವೇದಿಕೆ ಅಂಜನಾದ್ರಿ ಬೆಟ್ಟದಲ್ಲಿ ಬೇರೆ ಧರ್ಮದ ವ್ಯಾಪಾರಸ್ಥರಿಗೆ ಅವಕಾಶ ನೀಡಬಾರದು ಎಂದು ಆಗ್ರಹ ಮಾಡಿದ್ದು ಪ್ರಜಾಪ್ರಭುತ್ವ ನೀತಿಗೆ ವಿರೋಧವಾಗಿದೆ. ಇದು ಕೋಮುಗಲಭೆ ಸೃಷ್ಟಿಸುವ ತಂತ್ರ’ ಎಂದು ಸಿಪಿಐಎಂ ಜಿಲ್ಲಾ ಘಟಕದ ಅಧ್ಯಕ್ಷ ನಿರುಪಾದಿ ಬೆಣಕಲ್ ಆರೋಪಿಸಿದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗಂಗಾವತಿ (ಕೊಪ್ಪಳ ಜಿಲ್ಲೆ):</strong> ‘ಅಂಜನಾದ್ರಿ ಬೆಟ್ಟ ಪ್ರದೇಶದಲ್ಲಿ ಹಿಂದೂಗಳನ್ನು ಹೊರತುಪಡಿಸಿ ಅನ್ಯ ಧರ್ಮೀಯರಿಗೆ ವ್ಯಾಪಾರಕ್ಕೆ ಅವಕಾಶ ಮಾಡಿಕೊಡಬಾರದು’ ಎಂದು ಹಿಂದೂ ಜಾಗರಣ ವೇದಿಕೆ ಬೆಟ್ಟದ ಸಮೀಪ ಹಾಕಿದ್ದ ಫಲಕಗಳನ್ನು ಗಂಗಾವತಿ ತಾಲ್ಲೂಕು ಆಡಳಿತ ಮಂಗಳವಾರ ತೆರವುಗೊಳಿಸಿದೆ.</p>.<p>‘ಅಂಜನಾದ್ರಿ ಸುತ್ತಲೂ ವ್ಯಾಪಾರ ಮಾಡುವ ಜಾಗ ಖಾಸಗಿಯವರಿಗೆ ಸೇರಿದ್ದು ಅನುಮತಿ ನೀಡುವುದು, ಬಿಡುವುದು ಅಲ್ಲಿನ ಮಾಲೀಕರಿಗೆ ಬಿಟ್ಟ ವಿಚಾರ’ ಎಂದು ಗಂಗಾವತಿ ತಹಶೀಲ್ದಾರ್ ಯು. ನಾಗರಾಜ್ ತಿಳಿಸಿದರು.</p>.<p>ಜಾಗರಣಾ ವೇದಿಕೆ ನಡೆ ಖಂಡಿಸಿ ಮಂಗಳವಾರ ಸಿಪಿಐಎಂ ತಾಲ್ಲೂಕು ಸಮಿತಿ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿತು.</p>.<p>‘ಹಿಂದೂ ಜಾಗರಣ ವೇದಿಕೆ ಅಂಜನಾದ್ರಿ ಬೆಟ್ಟದಲ್ಲಿ ಬೇರೆ ಧರ್ಮದ ವ್ಯಾಪಾರಸ್ಥರಿಗೆ ಅವಕಾಶ ನೀಡಬಾರದು ಎಂದು ಆಗ್ರಹ ಮಾಡಿದ್ದು ಪ್ರಜಾಪ್ರಭುತ್ವ ನೀತಿಗೆ ವಿರೋಧವಾಗಿದೆ. ಇದು ಕೋಮುಗಲಭೆ ಸೃಷ್ಟಿಸುವ ತಂತ್ರ’ ಎಂದು ಸಿಪಿಐಎಂ ಜಿಲ್ಲಾ ಘಟಕದ ಅಧ್ಯಕ್ಷ ನಿರುಪಾದಿ ಬೆಣಕಲ್ ಆರೋಪಿಸಿದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>