<p><strong>ಗಂಗಾವತಿ</strong>: ತಾಲ್ಲೂಕಿನ ಪಂಪಾಸರೋವರದ ಜಯಲಕ್ಷ್ಮಿ ದೇವಸ್ಥಾನದಲ್ಲಿ ಎರಡು ತಿಂಗಳ ಹಿಂದೆ ಕಳ್ಳತನವಾದ ದೇವಿ ಬೆಳ್ಳಿ ಪ್ರಭಾವಳಿ, ಪಾದುಕೆಗಳನ್ನು ಪತ್ತೆಹಚ್ಚಿ ದೇವಸ್ಥಾನಕ್ಕೆ ಒಪ್ಪಿಸುವಂತೆ ಒತ್ತಾಯಿಸಿ ಗುರುವಾರ ಹಿಂದೂ ಜಾಗರಣ ವೇದಿಕೆ ಪದಾಧಿಕಾರಿಗಳು ಗ್ರೇಡ್-2 ತಹಶೀಲ್ದಾರ್ ಮಹಾಂತೇಶಗೌಡ, ಡಿವೈಎಸ್ಪಿ ಸಿದ್ದಲಿಂಗಪ್ಪಗೌಡ ಪಾಟೀಲ, ಗ್ರಾಮೀಣ ಠಾಣೆ ಪಿಐ ರಂಗಪ್ಪ ಅವರಿಗೆ ಮನವಿ ಸಲ್ಲಿಸಿದರು.</p>.<p>‘ರಾಮಾಯಣ ಕಾಲದ ಇತಿಹಾಸ ಹೊಂದಿದ ಪಂಪಾಸರೋವರದ ಜಯಲಕ್ಷ್ಮಿ ದೇವಸ್ಥಾನದಲ್ಲಿ ಮೆ.20ರಂದು ಕಳ್ಳತನವಾಗಿದ್ದು, ಈವರೆಗೆ ಕಳ್ಳರನ್ನು ಪತ್ತೆ ಹಚ್ಚುವ ಕೆಲಸವಾಗಿಲ್ಲ. ಹಾಗೇ ಪಂಪಾಸರೋವರ ಮುಖ್ಯರಸ್ತೆ ತಿರುವಿನ ಕಟ್ಟೆ ಮೇಲಿದ್ದ ಆಂಜನೇಯನ ಕಲ್ಲಿಗ ಮೂರ್ತಿ, ಮುಖ್ಯರಸ್ತೆಯಿಂದ ಪಂಪಾಸರೋವರವರೆಗೆ ಅಳವಡಿಸಿದ ಸೋಲಾರ್ ಕಂಬಗಳೂ ಸಹ ಕಣ್ಮರೆಯಾಗಿವೆ. ಈ ಭಾಗದಲ್ಲಿ ಪದೇ ಪದೇ ಕಳ್ಳತನ ಪ್ರಕರಣಗಳು ನಡೆಯುತ್ತಿದ್ದು, ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಕ್ರಮವನ್ನೇ ಕೈಗೊಳ್ಳುತ್ತಿಲ್ಲ’ ಎಂದು ಆರೋಪಿಸಿದರು.</p>.<p>‘ಕೂಡಲೇ ಪೊಲೀಸರು, ಸಂಬಂಧಪಟ್ಟ ಅಧಿಕಾರಿಗಳು ಕಳ್ಳರನ್ನು ಪತ್ತೆಹಚ್ಚಿ, ವಸ್ತುಗಳನ್ನು ಮೂಲ ಸ್ಥಳಕ್ಕೆ ಒಪ್ಪಿಸಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಲಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.</p>.<p>ಹಿಂದೂ ಜಾಗರಣ ವೇದಿಕೆ ಉತ್ತರ ಪ್ರಾಂತ ಸಹ ಸಂಚಾಲಕ ಶ್ರೀಕಾಂತ ಹೊಸಕೇರಿ, ಜಿಲ್ಲಾ ಸಂಚಾಲಕ ವೀರೇಶ, ಜಿಲ್ಲಾ ಸಂಪರ್ಕ ಪ್ರಮುಖ್ ಎನ್. ಪದ್ಮನಾಭರಾಜು, ಜಿಲ್ಲಾ ಸಹ ಸಂಚಾಲಕ ಮಂಜುನಾಥ ಸಂಗಾಪುರ, ರುದ್ರೇಶ, ಹೂಗಾರ ಕುಮಾರ, ರಮೇಶ, ವೀರೇಶ ಹನುಮನಹಳ್ಳಿ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗಂಗಾವತಿ</strong>: ತಾಲ್ಲೂಕಿನ ಪಂಪಾಸರೋವರದ ಜಯಲಕ್ಷ್ಮಿ ದೇವಸ್ಥಾನದಲ್ಲಿ ಎರಡು ತಿಂಗಳ ಹಿಂದೆ ಕಳ್ಳತನವಾದ ದೇವಿ ಬೆಳ್ಳಿ ಪ್ರಭಾವಳಿ, ಪಾದುಕೆಗಳನ್ನು ಪತ್ತೆಹಚ್ಚಿ ದೇವಸ್ಥಾನಕ್ಕೆ ಒಪ್ಪಿಸುವಂತೆ ಒತ್ತಾಯಿಸಿ ಗುರುವಾರ ಹಿಂದೂ ಜಾಗರಣ ವೇದಿಕೆ ಪದಾಧಿಕಾರಿಗಳು ಗ್ರೇಡ್-2 ತಹಶೀಲ್ದಾರ್ ಮಹಾಂತೇಶಗೌಡ, ಡಿವೈಎಸ್ಪಿ ಸಿದ್ದಲಿಂಗಪ್ಪಗೌಡ ಪಾಟೀಲ, ಗ್ರಾಮೀಣ ಠಾಣೆ ಪಿಐ ರಂಗಪ್ಪ ಅವರಿಗೆ ಮನವಿ ಸಲ್ಲಿಸಿದರು.</p>.<p>‘ರಾಮಾಯಣ ಕಾಲದ ಇತಿಹಾಸ ಹೊಂದಿದ ಪಂಪಾಸರೋವರದ ಜಯಲಕ್ಷ್ಮಿ ದೇವಸ್ಥಾನದಲ್ಲಿ ಮೆ.20ರಂದು ಕಳ್ಳತನವಾಗಿದ್ದು, ಈವರೆಗೆ ಕಳ್ಳರನ್ನು ಪತ್ತೆ ಹಚ್ಚುವ ಕೆಲಸವಾಗಿಲ್ಲ. ಹಾಗೇ ಪಂಪಾಸರೋವರ ಮುಖ್ಯರಸ್ತೆ ತಿರುವಿನ ಕಟ್ಟೆ ಮೇಲಿದ್ದ ಆಂಜನೇಯನ ಕಲ್ಲಿಗ ಮೂರ್ತಿ, ಮುಖ್ಯರಸ್ತೆಯಿಂದ ಪಂಪಾಸರೋವರವರೆಗೆ ಅಳವಡಿಸಿದ ಸೋಲಾರ್ ಕಂಬಗಳೂ ಸಹ ಕಣ್ಮರೆಯಾಗಿವೆ. ಈ ಭಾಗದಲ್ಲಿ ಪದೇ ಪದೇ ಕಳ್ಳತನ ಪ್ರಕರಣಗಳು ನಡೆಯುತ್ತಿದ್ದು, ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಕ್ರಮವನ್ನೇ ಕೈಗೊಳ್ಳುತ್ತಿಲ್ಲ’ ಎಂದು ಆರೋಪಿಸಿದರು.</p>.<p>‘ಕೂಡಲೇ ಪೊಲೀಸರು, ಸಂಬಂಧಪಟ್ಟ ಅಧಿಕಾರಿಗಳು ಕಳ್ಳರನ್ನು ಪತ್ತೆಹಚ್ಚಿ, ವಸ್ತುಗಳನ್ನು ಮೂಲ ಸ್ಥಳಕ್ಕೆ ಒಪ್ಪಿಸಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಲಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.</p>.<p>ಹಿಂದೂ ಜಾಗರಣ ವೇದಿಕೆ ಉತ್ತರ ಪ್ರಾಂತ ಸಹ ಸಂಚಾಲಕ ಶ್ರೀಕಾಂತ ಹೊಸಕೇರಿ, ಜಿಲ್ಲಾ ಸಂಚಾಲಕ ವೀರೇಶ, ಜಿಲ್ಲಾ ಸಂಪರ್ಕ ಪ್ರಮುಖ್ ಎನ್. ಪದ್ಮನಾಭರಾಜು, ಜಿಲ್ಲಾ ಸಹ ಸಂಚಾಲಕ ಮಂಜುನಾಥ ಸಂಗಾಪುರ, ರುದ್ರೇಶ, ಹೂಗಾರ ಕುಮಾರ, ರಮೇಶ, ವೀರೇಶ ಹನುಮನಹಳ್ಳಿ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>