‘ಗ್ಯಾರಂಟಿ ಯೋಜನೆಗಳನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ಲೋಕಸಭಾ ಚುನಾವಣೆಯಲ್ಲಿ ಪ್ರಚಾರ ಮಾಡುತ್ತಿದೆ. ಆದರೆ ಶಕ್ತಿ ಯೋಜನೆಯಲ್ಲಿ ಉಚಿತವಾಗಿ ಬಸ್ಗಳಲ್ಲಿ ಪ್ರಯಾಣಿಸುತ್ತಿರುವ ಪಡಿಪಾಟಲು ಹೇಳತೀರದಂತಾಗಿದೆ. ಸರಿಯಾಗಿ ಬಸ್ ಸೌಲಭ್ಯ ಕಲ್ಪಿಸಿ ಬಳಿಕ ಯೋಜನೆ ಜಾರಿಗೆ ತರಬೇಕಿತ್ತು. ಹುಬ್ಬಳ್ಳಿಯಲ್ಲಿ ಕಾಲೇಜು ವಿದ್ಯಾರ್ಥಿಯನ್ನು ಕ್ಯಾಂಪಸ್ನಲ್ಲಿಯೇ ಹತ್ಯೆ ಮಾಡಲಾಗಿದೆ. ಈ ಸರ್ಕಾರದಲ್ಲಿ ಮಹಿಳೆಯರಿಗೆ ರಕ್ಷಣೆಯೇ ಇಲ್ಲದಂತಾಗಿದೆ’ ಎಂದು ಶುಕ್ರವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ದೂರಿದರು.