<p><strong>ಕಾರಟಗಿ</strong> (ಕೊಪ್ಪಳ ಜಿಲ್ಲೆ): ತಾಲ್ಲೂಕಿನ ಬುದಗುಂಪಾ ಗ್ರಾಮದ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನದ ಮೀಸಲಾತಿ ಪ್ರಶ್ನಿಸಿ ಹೈಕೋರ್ಟ್ನಿಂದ ತಡೆಯಾಜ್ಜೆ ತಂದ ವಿಚಾರಕ್ಕಾಗಿ ಗ್ರಾಮದಲ್ಲಿ ಶನಿವಾರ ತಡರಾತ್ರಿ ನಡೆದ ಗಲಾಟೆಯ ವೇಳೆ ಪೊಲೀಸ್ ಮೇಲೆ ಹಲ್ಲೆಯಾಗಿದೆ.</p><p>ಕಾರಟಗಿ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೆಬಲ್ ತಾರಾ ಸಿಂಗ್ ಮೇಲೆ ಹಲ್ಲೆಯಾಗಿದ್ದು, ಈ ಕುರಿತು ಪ್ರತ್ಯೇಕ ಎಫ್ಐಆರ್ ದಾಖಲಾಗಿದೆ. ಘಟನೆಗೆ ಸಂಬಂಧಿಸಿ ದಾಖಲಾದ ಎರಡನೇ ಎಫ್ಐಆರ್ ಇದು. ಪೊಲೀಸರೇ ಸ್ವಯಂಪ್ರೇರಿತರಾಗಿ ಮೊದಲು 30 ಜನರ ವಿರುದ್ಧ ಒಂದು ಎಫ್ಐಆರ್ ದಾಖಲಿಸಿಕೊಂಡಿದ್ದರು.</p><p>‘ಬುದಗುಂಪಾದ ಬಸವೇಶ್ವರ ಸರ್ಕಲ್ ಹತ್ತಿರ ಗಲಾಟೆ ನಡೆಯುತ್ತಿದ್ದಾಗ ಮಹಿಬೂಬ ಅಲಿಯಾಸ್ ಬೆಂಕಿ ಎಂಬಾತ ನನ್ನನ್ನು ಅಂಗಿಯ ಕಾಲರ್ ಹಿಡಿದು ತಳ್ಳಾಡಿ ಹಲ್ಲೆ ಮಾಡಿದ್ದಾನೆ. ಈ ಮೂಲಕ ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾನೆ. ಜೊತೆಗಿದ್ದ ಸಿಬ್ಬಂದಿ ಮತ್ತಷ್ಟು ಹಲ್ಲೆಯಿಂದ ಪಾರು ಮಾಡಿದರು‘ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರಟಗಿ</strong> (ಕೊಪ್ಪಳ ಜಿಲ್ಲೆ): ತಾಲ್ಲೂಕಿನ ಬುದಗುಂಪಾ ಗ್ರಾಮದ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನದ ಮೀಸಲಾತಿ ಪ್ರಶ್ನಿಸಿ ಹೈಕೋರ್ಟ್ನಿಂದ ತಡೆಯಾಜ್ಜೆ ತಂದ ವಿಚಾರಕ್ಕಾಗಿ ಗ್ರಾಮದಲ್ಲಿ ಶನಿವಾರ ತಡರಾತ್ರಿ ನಡೆದ ಗಲಾಟೆಯ ವೇಳೆ ಪೊಲೀಸ್ ಮೇಲೆ ಹಲ್ಲೆಯಾಗಿದೆ.</p><p>ಕಾರಟಗಿ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೆಬಲ್ ತಾರಾ ಸಿಂಗ್ ಮೇಲೆ ಹಲ್ಲೆಯಾಗಿದ್ದು, ಈ ಕುರಿತು ಪ್ರತ್ಯೇಕ ಎಫ್ಐಆರ್ ದಾಖಲಾಗಿದೆ. ಘಟನೆಗೆ ಸಂಬಂಧಿಸಿ ದಾಖಲಾದ ಎರಡನೇ ಎಫ್ಐಆರ್ ಇದು. ಪೊಲೀಸರೇ ಸ್ವಯಂಪ್ರೇರಿತರಾಗಿ ಮೊದಲು 30 ಜನರ ವಿರುದ್ಧ ಒಂದು ಎಫ್ಐಆರ್ ದಾಖಲಿಸಿಕೊಂಡಿದ್ದರು.</p><p>‘ಬುದಗುಂಪಾದ ಬಸವೇಶ್ವರ ಸರ್ಕಲ್ ಹತ್ತಿರ ಗಲಾಟೆ ನಡೆಯುತ್ತಿದ್ದಾಗ ಮಹಿಬೂಬ ಅಲಿಯಾಸ್ ಬೆಂಕಿ ಎಂಬಾತ ನನ್ನನ್ನು ಅಂಗಿಯ ಕಾಲರ್ ಹಿಡಿದು ತಳ್ಳಾಡಿ ಹಲ್ಲೆ ಮಾಡಿದ್ದಾನೆ. ಈ ಮೂಲಕ ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾನೆ. ಜೊತೆಗಿದ್ದ ಸಿಬ್ಬಂದಿ ಮತ್ತಷ್ಟು ಹಲ್ಲೆಯಿಂದ ಪಾರು ಮಾಡಿದರು‘ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>