<p><strong>ಕೊಪ್ಪಳ</strong>: ಐಪಿಎಸ್ ಅಧಿಕಾರಿ ಯಶೋಧಾ ವಂಟಗೋಡಿ ಶುಕ್ರವಾರ ನಿರ್ಗಮಿತ ಎಸ್.ಪಿ. ಅರುಣಾಂಗ್ಶು ಗಿರಿ ಅವರಿಂದ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದರು.</p>.<p>ಬಾಗಲಕೋಟೆ ಜಿಲ್ಲೆಯ ಯಶೋಧಾ ಈ ಹಿಂದೆ ದಕ್ಷಿಣ ಕನ್ನಡ ಹಾಗೂ ಕುಂದಾಪುರದಲ್ಲಿ ಡಿಎಸ್ಪಿಯಾಗಿ, ಹುಬ್ಬಳ್ಳಿಯಲ್ಲಿ ಎಸಿಪಿಯಾಗಿ, ದಾವಣಗೆರೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದರು. ಬೆಳಗಾವಿಯ ಕರ್ನಾಟಕ ಲೋಕಾಯುಕ್ತ ಎಸ್ಪಿಯಿಂದ ಇಲ್ಲಿಗೆ ವರ್ಗಾವಣೆಯಾಗಿದ್ದಾರೆ.</p>.<p>ಅಧಿಕಾರ ಸ್ವೀಕರಿಸಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿ ‘ಜಿಲ್ಲೆಯಲ್ಲಿ ಶಾಂತಿ ಹಾಗೂ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಎಲ್ಲರ ಸಹಕಾರದೊಂದಿಗೆ ಕೆಲಸ ಮಾಡಲಾಗುವುದು’ ಎಂದರು.</p>.<p>ಕೊಪ್ಪಳ ಮತ್ತು ಗಂಗಾವತಿ ಡಿಎಸ್ಪಿಗಳಾದ ಶರಣಬಸಪ್ಪ ಸುಭೇದಾರ, ಶೇಖರಪ್ಪ ನಿಂಗಪ್ಪ ಎನ್, ಪೊಲೀಸ್ ಇನ್ಸ್ಟೆಕ್ಟರ್ಗಳಾದ ಸಂತೋಷ ಹಳ್ಳೂರ, ಸುರೇಶ, ನಿಂಗಪ್ಪ , ಮಂಜುನಾಥ, ಅಡಿವೇಶ ಮತ್ತು ಮಹಾಂತೇಶ ಸಜ್ಜನ ಸೇರಿದಂತೆ ಅನೇಕರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಪ್ಪಳ</strong>: ಐಪಿಎಸ್ ಅಧಿಕಾರಿ ಯಶೋಧಾ ವಂಟಗೋಡಿ ಶುಕ್ರವಾರ ನಿರ್ಗಮಿತ ಎಸ್.ಪಿ. ಅರುಣಾಂಗ್ಶು ಗಿರಿ ಅವರಿಂದ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದರು.</p>.<p>ಬಾಗಲಕೋಟೆ ಜಿಲ್ಲೆಯ ಯಶೋಧಾ ಈ ಹಿಂದೆ ದಕ್ಷಿಣ ಕನ್ನಡ ಹಾಗೂ ಕುಂದಾಪುರದಲ್ಲಿ ಡಿಎಸ್ಪಿಯಾಗಿ, ಹುಬ್ಬಳ್ಳಿಯಲ್ಲಿ ಎಸಿಪಿಯಾಗಿ, ದಾವಣಗೆರೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದರು. ಬೆಳಗಾವಿಯ ಕರ್ನಾಟಕ ಲೋಕಾಯುಕ್ತ ಎಸ್ಪಿಯಿಂದ ಇಲ್ಲಿಗೆ ವರ್ಗಾವಣೆಯಾಗಿದ್ದಾರೆ.</p>.<p>ಅಧಿಕಾರ ಸ್ವೀಕರಿಸಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿ ‘ಜಿಲ್ಲೆಯಲ್ಲಿ ಶಾಂತಿ ಹಾಗೂ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಎಲ್ಲರ ಸಹಕಾರದೊಂದಿಗೆ ಕೆಲಸ ಮಾಡಲಾಗುವುದು’ ಎಂದರು.</p>.<p>ಕೊಪ್ಪಳ ಮತ್ತು ಗಂಗಾವತಿ ಡಿಎಸ್ಪಿಗಳಾದ ಶರಣಬಸಪ್ಪ ಸುಭೇದಾರ, ಶೇಖರಪ್ಪ ನಿಂಗಪ್ಪ ಎನ್, ಪೊಲೀಸ್ ಇನ್ಸ್ಟೆಕ್ಟರ್ಗಳಾದ ಸಂತೋಷ ಹಳ್ಳೂರ, ಸುರೇಶ, ನಿಂಗಪ್ಪ , ಮಂಜುನಾಥ, ಅಡಿವೇಶ ಮತ್ತು ಮಹಾಂತೇಶ ಸಜ್ಜನ ಸೇರಿದಂತೆ ಅನೇಕರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>