ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಧೈರ್ಯದಿಂದ ಪರೀಕ್ಷೆ ಎದುರಿಸಿ’

Last Updated 10 ಏಪ್ರಿಲ್ 2021, 12:10 IST
ಅಕ್ಷರ ಗಾತ್ರ

ಚಿಕ್ಕಮಾದಿನಾಳ (ಕನಕಗಿರಿ): ‘ವಿದ್ಯಾರ್ಥಿಗಳು ಪರೀಕ್ಷೆಗಳ ಕುರಿತು ಭಯಪಡಬಾರದು. ಧೈರ್ಯದಿಂದ ಎದುರಿಸಬೇಕು’ ಎಂದು ಸಂಪನ್ಮೂಲ ವ್ಯಕ್ತಿ ಚನ್ನಪ್ಪ ದಿಂಡೂರು ಸಲಹೆ ನೀಡಿದರು.

ಪಾರ್ವತಮ್ಮ ಬಿ. ಮಹಿಳಾ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆಯು ಸಮೀಪದ ಚಿಕ್ಕಮಾದಿನಾಳ ಸರ್ಕಾರಿ ಪ್ರೌಢಶಾಲೆಯಲ್ಲಿ ಶನಿವಾರ ಆಯೋಜಿಸಿದ್ದ ‘ಪರೀಕ್ಷೆ ಒಂದು ಹಬ್ಬ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಇಂಗ್ಲಿಷ್, ಗಣಿತ ಸೇರಿ ಯಾವ ವಿಷಯಗಳು ಕಬ್ಬಿಣದ ಕಡಲೆ ಅಲ್ಲ. ಸತತ ಅಧ್ಯಯನ ಹಾಗೂ ಶ್ರಮದಿಂದ ಕಠಿಣ ವಿಷಯಗಳನ್ನು ಕರಗತ ಮಾಡಿಕೊಂಡು ಪರೀಕ್ಷೆಯಲ್ಲಿ ಸುಲಭವಾಗಿ ಉತ್ತರಗಳನ್ನು ಬರೆಯಬಹುದು’ ಎಂದರು.

ಶಾಲೆಯ ಮುಖ್ಯಶಿಕ್ಷಕ ಶಂಕ್ರಪ್ಪ ನಾಯಕ್ ಹಾಗೂ ಸಂಸ್ಥೆಯ ಕಾರ್ಯದರ್ಶಿ ಮಲ್ಲಿಕಾರ್ಜುನ ಪಾಟೀಲ ಮಾತನಾಡಿದರು.

ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಹುಲಿಗೆಮ್ಮ ಸುಳೇಕಲ್ ಕಾರ್ಯಕ್ರಮ ಉದ್ಘಾಟಿಸಿದರು.

ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಯಂಕಪ್ಪ, ಪ್ರಮುಖರಾದ ಶಂಕರಗೌಡ ಪಾಟೀಲ, ಯಂಕಪ್ಪ, ಶಿಕ್ಷಕಿ ಸುಮತಿ ಹಾಗೂ ಶಿಕ್ಷಕಿ ರಾಘವೇಂದ್ರ ರಕ್ಕಸಗಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT