ಪುರಸ್ಕಾರ ಸ್ವೀಕರಿಸಿ ಮಾತನಾಡಿದ ಅವರು, ‘ನಮ್ಮನ್ನು ಗುರುತಿಸಿ ಸನ್ಮಾನಿಸುತ್ತಿರುವುದು ಖುಷಿ ತಂದಿದೆ. ಇದು ನಮ್ಮ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸಿದೆ. ಕೊರೊನಾ ಆರಂಭದಲ್ಲಿ ಸೃಷ್ಟಿಸಿದ ಆತಂಕವನ್ನು ಇಂದಿಗೂ ಮರೆಯುವಂತಿಲ್ಲ. ದೇವರ ಕೃಪೆಯಿಂದ ಈಗ ಕೊರೊನಾ ಹತೋಟಿಗೆ ಬಂದಿದ್ದು, ಎಲ್ಲ ಸಂಕಷ್ಟಗಳು ಆದಷ್ಟು ಬೇಗ ನಿವಾರಣೆಯಾಗಲಿ ಮತ್ತೆ ಜನಜೀವನ ಮೊದಲಿನಂತಾಗಲಿ’ ಎಂದು ಆಶಿಸಿದರು.