ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಪ್ರಜಾಪ್ರಭುತ್ವದ ಅರಿವು ಅವಶ್ಯ’

Last Updated 15 ಡಿಸೆಂಬರ್ 2020, 7:57 IST
ಅಕ್ಷರ ಗಾತ್ರ

ಹನುಮಸಾಗರ: ‘ಚುನಾವಣೆಯಲ್ಲಿ ಮತದಾನದ ಹಕ್ಕಿನಿಂದ ಯಾರೂ ವಂಚಿತರಾಗಬಾರದು. ಜನಪ್ರತಿನಿಧಿಗಳ ಆಯ್ಕೆ ಪ್ರಕ್ರಿಯೆ ನೈತಿಕವಾಗಿರಬೇಕು ಎಂದು ಅರಿವು ಮೂಡಿಸಲು ಶಾಲಾ ಮತದಾರರ ಸಾಕ್ಷರತಾ ಕ್ಲಬ್‍ನಿಂದ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಅರಿವು ಮೂಡಿಸಲಾಗುತ್ತಿದೆ’ ಎಂದು ಮುಖ್ಯಶಿಕ್ಷಕ ಹುಸೇನಸಾಬ ಇಲಕಲ್ಲ ಹೇಳಿದರು.

ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜ್, ಪ್ರೌಢ ಶಾಲಾ ವಿಭಾಗದಲ್ಲಿ ವಿದ್ಯಾರ್ಥಿಗಳ ಮತದಾರರ ಸಾಕ್ಷರತಾ ಕ್ಲಬ್‍ನಿಂದ ನಡೆದ ಜಾಗೃತಿ ಜಾಥಾದಲ್ಲಿ ಅವರು
ಮಾತನಾಡಿದರು.

ವಿದ್ಯಾರ್ಥಿಗಳು 18 ವರ್ಷಕ್ಕೆ ಕಾಲಿಟ್ಟ ಬಳಿಕ ತಾವು ಮತದಾನ ಯಾಕೆ ಮಾಡಬೇಕು ಎಂಬ ಅರಿವು ಮೂಡಿಸುವುದು ಅವಶ್ಯವಾಗಿದೆ. ಮೊದಲ ಬಾರಿಗೆ ಮತದಾನ ಮಾಡುವ ಸಂಭ್ರಮವನ್ನು ಯುವಕರು ಅನುಭವಿಸಬೇಕು ಎಂದು ಅವರು ಹೇಳಿದರು.

ಶಾಲಾ ಮತದಾರರ ಸಾಕ್ಷರತಾ ಕ್ಲಬ್ ಸಂಚಾಲಕಿ ರೋಹಿಣಿ ಜ್ಯೋತಿ ಮಾತನಾಡಿ,‘ಪ್ರಜಾಪ್ರ
ಭುತ್ವ ವ್ಯವಸ್ಥೆಯಲ್ಲಿ ಮತದಾನದ ಮಹತ್ವ, ನೈತಿಕ ಮತದಾನದ ಬಗ್ಗೆ ಸಾರ್ವಜನಿಕರಿಗೆ ವಿದ್ಯಾರ್ಥಿಗಳ ಮೂಲಕ ತಿಳಿಸಲಾಗುತ್ತಿದೆ’ ಎಂದು ಹೇಳಿದರು.

ಶಿಕ್ಷಕರಾದ ರೋಹಿಣಿ ಜ್ಯೋತಿ, ಸುಮಂಗಲಾ ತರಿಕೇರಿ, ಗೀತಾ ದೇವಾಂಗಮಠ, ಗೀತಾ ಪಾಟೀಲ, ಶಾರದಾ ಗುಡಸಲಿ, ಉಮಾಕಾಂತ ರಜಪೂತ, ನಾರಾಯಣ ಹೂಲಗೇರಿ, ರಾಜಬಕ್ಷಾರ ಪೆಂಡಾರಿ ಹಾಗೂ ಬಸಮ್ಮ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT