<p><strong>ಹನುಮಸಾಗರ</strong>: ‘ಚುನಾವಣೆಯಲ್ಲಿ ಮತದಾನದ ಹಕ್ಕಿನಿಂದ ಯಾರೂ ವಂಚಿತರಾಗಬಾರದು. ಜನಪ್ರತಿನಿಧಿಗಳ ಆಯ್ಕೆ ಪ್ರಕ್ರಿಯೆ ನೈತಿಕವಾಗಿರಬೇಕು ಎಂದು ಅರಿವು ಮೂಡಿಸಲು ಶಾಲಾ ಮತದಾರರ ಸಾಕ್ಷರತಾ ಕ್ಲಬ್ನಿಂದ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಅರಿವು ಮೂಡಿಸಲಾಗುತ್ತಿದೆ’ ಎಂದು ಮುಖ್ಯಶಿಕ್ಷಕ ಹುಸೇನಸಾಬ ಇಲಕಲ್ಲ ಹೇಳಿದರು.</p>.<p>ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜ್, ಪ್ರೌಢ ಶಾಲಾ ವಿಭಾಗದಲ್ಲಿ ವಿದ್ಯಾರ್ಥಿಗಳ ಮತದಾರರ ಸಾಕ್ಷರತಾ ಕ್ಲಬ್ನಿಂದ ನಡೆದ ಜಾಗೃತಿ ಜಾಥಾದಲ್ಲಿ ಅವರು<br />ಮಾತನಾಡಿದರು.</p>.<p>ವಿದ್ಯಾರ್ಥಿಗಳು 18 ವರ್ಷಕ್ಕೆ ಕಾಲಿಟ್ಟ ಬಳಿಕ ತಾವು ಮತದಾನ ಯಾಕೆ ಮಾಡಬೇಕು ಎಂಬ ಅರಿವು ಮೂಡಿಸುವುದು ಅವಶ್ಯವಾಗಿದೆ. ಮೊದಲ ಬಾರಿಗೆ ಮತದಾನ ಮಾಡುವ ಸಂಭ್ರಮವನ್ನು ಯುವಕರು ಅನುಭವಿಸಬೇಕು ಎಂದು ಅವರು ಹೇಳಿದರು.</p>.<p>ಶಾಲಾ ಮತದಾರರ ಸಾಕ್ಷರತಾ ಕ್ಲಬ್ ಸಂಚಾಲಕಿ ರೋಹಿಣಿ ಜ್ಯೋತಿ ಮಾತನಾಡಿ,‘ಪ್ರಜಾಪ್ರ<br />ಭುತ್ವ ವ್ಯವಸ್ಥೆಯಲ್ಲಿ ಮತದಾನದ ಮಹತ್ವ, ನೈತಿಕ ಮತದಾನದ ಬಗ್ಗೆ ಸಾರ್ವಜನಿಕರಿಗೆ ವಿದ್ಯಾರ್ಥಿಗಳ ಮೂಲಕ ತಿಳಿಸಲಾಗುತ್ತಿದೆ’ ಎಂದು ಹೇಳಿದರು.</p>.<p>ಶಿಕ್ಷಕರಾದ ರೋಹಿಣಿ ಜ್ಯೋತಿ, ಸುಮಂಗಲಾ ತರಿಕೇರಿ, ಗೀತಾ ದೇವಾಂಗಮಠ, ಗೀತಾ ಪಾಟೀಲ, ಶಾರದಾ ಗುಡಸಲಿ, ಉಮಾಕಾಂತ ರಜಪೂತ, ನಾರಾಯಣ ಹೂಲಗೇರಿ, ರಾಜಬಕ್ಷಾರ ಪೆಂಡಾರಿ ಹಾಗೂ ಬಸಮ್ಮ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹನುಮಸಾಗರ</strong>: ‘ಚುನಾವಣೆಯಲ್ಲಿ ಮತದಾನದ ಹಕ್ಕಿನಿಂದ ಯಾರೂ ವಂಚಿತರಾಗಬಾರದು. ಜನಪ್ರತಿನಿಧಿಗಳ ಆಯ್ಕೆ ಪ್ರಕ್ರಿಯೆ ನೈತಿಕವಾಗಿರಬೇಕು ಎಂದು ಅರಿವು ಮೂಡಿಸಲು ಶಾಲಾ ಮತದಾರರ ಸಾಕ್ಷರತಾ ಕ್ಲಬ್ನಿಂದ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಅರಿವು ಮೂಡಿಸಲಾಗುತ್ತಿದೆ’ ಎಂದು ಮುಖ್ಯಶಿಕ್ಷಕ ಹುಸೇನಸಾಬ ಇಲಕಲ್ಲ ಹೇಳಿದರು.</p>.<p>ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜ್, ಪ್ರೌಢ ಶಾಲಾ ವಿಭಾಗದಲ್ಲಿ ವಿದ್ಯಾರ್ಥಿಗಳ ಮತದಾರರ ಸಾಕ್ಷರತಾ ಕ್ಲಬ್ನಿಂದ ನಡೆದ ಜಾಗೃತಿ ಜಾಥಾದಲ್ಲಿ ಅವರು<br />ಮಾತನಾಡಿದರು.</p>.<p>ವಿದ್ಯಾರ್ಥಿಗಳು 18 ವರ್ಷಕ್ಕೆ ಕಾಲಿಟ್ಟ ಬಳಿಕ ತಾವು ಮತದಾನ ಯಾಕೆ ಮಾಡಬೇಕು ಎಂಬ ಅರಿವು ಮೂಡಿಸುವುದು ಅವಶ್ಯವಾಗಿದೆ. ಮೊದಲ ಬಾರಿಗೆ ಮತದಾನ ಮಾಡುವ ಸಂಭ್ರಮವನ್ನು ಯುವಕರು ಅನುಭವಿಸಬೇಕು ಎಂದು ಅವರು ಹೇಳಿದರು.</p>.<p>ಶಾಲಾ ಮತದಾರರ ಸಾಕ್ಷರತಾ ಕ್ಲಬ್ ಸಂಚಾಲಕಿ ರೋಹಿಣಿ ಜ್ಯೋತಿ ಮಾತನಾಡಿ,‘ಪ್ರಜಾಪ್ರ<br />ಭುತ್ವ ವ್ಯವಸ್ಥೆಯಲ್ಲಿ ಮತದಾನದ ಮಹತ್ವ, ನೈತಿಕ ಮತದಾನದ ಬಗ್ಗೆ ಸಾರ್ವಜನಿಕರಿಗೆ ವಿದ್ಯಾರ್ಥಿಗಳ ಮೂಲಕ ತಿಳಿಸಲಾಗುತ್ತಿದೆ’ ಎಂದು ಹೇಳಿದರು.</p>.<p>ಶಿಕ್ಷಕರಾದ ರೋಹಿಣಿ ಜ್ಯೋತಿ, ಸುಮಂಗಲಾ ತರಿಕೇರಿ, ಗೀತಾ ದೇವಾಂಗಮಠ, ಗೀತಾ ಪಾಟೀಲ, ಶಾರದಾ ಗುಡಸಲಿ, ಉಮಾಕಾಂತ ರಜಪೂತ, ನಾರಾಯಣ ಹೂಲಗೇರಿ, ರಾಜಬಕ್ಷಾರ ಪೆಂಡಾರಿ ಹಾಗೂ ಬಸಮ್ಮ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>