<p><strong>ಗಂಗಾವತಿ (ಕೊಪ್ಪಳ ಜಿಲ್ಲೆ):</strong> ಅಯೋಧ್ಯೆಯಲ್ಲಿ ರಾಮನ ಪ್ರಾಣ ಪ್ರತಿಷ್ಠಾಪನೆ ಕಾರ್ಯ ನಿರ್ವಿಘ್ನವಾಗಿ ನಡೆಯಬೇಕು ಎಂದು ಪ್ರಾರ್ಥಿಸಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭಾನುವಾರ ತಾಲ್ಲೂಕಿನ ಅಂಜನಾದ್ರಿಯಲ್ಲಿ ಹೋಮ ನೆರವೇರಿಸಿದರು.</p>.<p>ಪ್ರಧಾನಿ ನರೇಂದ್ರ ಮೋದಿ ಹೆಸರಲ್ಲಿಯೂ ಪೂಜೆ ಸಲ್ಲಿಸಿದ ಅವರು ‘ದೇಶ ಕಟ್ಟುವ ಪ್ರಧಾನಿ ಕಾಯಕಕ್ಕೆ ನಾವೆಲ್ಲರೂ ಕೈ ಜೋಡಿಸುತ್ತಿದ್ದೇವೆ. ದೇಶದಲ್ಲಿ ಶಾಂತಿ ನೆಲೆಸುವಂತೆ ಪ್ರಾರ್ಥಿಸಿಕೊಂಡಿದ್ದೇನೆ’ ಎಂದರು.</p>.<p>ಈ ವೇಳೆ ಮಾಧ್ಯಮದವರ ಜೊತೆ ಮಾತನಾಡಿ, ‘ಚುನಾವಣೆಯಲ್ಲಿ ಅಲ್ಪಸಂಖ್ಯಾತರನ್ನು ಓಲೈಸಲು ಹಾಗೂ ಅವರನ್ನು ಮತಬ್ಯಾಂಕ್ ಆಗಿ ಬಳಸಿಕೊಳ್ಳಲು ಕಾಂಗ್ರೆಸ್ ಶ್ರೀರಾಮನನ್ನು ವಿರೋಧಿಸುತ್ತಿದೆ. ಬಯಲಲ್ಲಿದ್ದ ಶ್ರೀರಾಮ ಭವ್ಯ ಮಂದಿರಕ್ಕೆ ಬರಬೇಕು ಎನ್ನುವುದು ಪ್ರಧಾನಿ ಅವರ ಸಂಕಲ್ಪವಾಗಿತ್ತು. ಅಂದುಕೊಂಡಂತೆ ಈಗ ಎಲ್ಲವೂ ಆಗಿದೆ’ ಎಂದರು.</p>.<p><strong>ವಿಶೇಷ ಪೂಜೆ:</strong> ರಾಮಮಂದಿರ ಉದ್ಘಾಟನೆಯಾಗಲಿರುವ ಹಿನ್ನೆಲೆಯಲ್ಲಿ ಸೋಮವಾರ ಅಂಜನಾದ್ರಿಯಲ್ಲಿ ವಿವಿಧ ಸಂಘಟನೆಗಳು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿವೆ.</p>.<p>ತ್ರಿಕಾಲ ಪೂಜೆ, ರವಿಶಂಕರ ಗುರೂಜಿ ಅವರಿಂದ ರಾಮನ ಸ್ಮರಣೆ, ಅಯೋಧ್ಯೆಯಲ್ಲಿ ನಡೆಯುವ ಕಾರ್ಯಕ್ರಮಗಳನ್ನು ನೇರವಾಗಿ ತೋರಿಸಲು ಎಲ್ಇಡಿ ಪರದೆಯ ವ್ಯವಸ್ಥೆ, ಸಂಜೆ ದೀಪೋತ್ಸವ ಹಾಗೂ ರಾಮನಿಗೆ ಸಂಬಂಧಿಸಿದ ನೃತ್ಯಗಳ ಮೂಲಕ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ.</p>.<p><strong>ರಾಮನ ಮೂರ್ತಿ:</strong> ಬೆಂಗಳೂರಿನ ರಾಮಚಂದ್ರಪ್ಪ ಎಂಬ ಭಕ್ತರು ನೀಡಿದ ಒಂಬತ್ತು ಇಂಚು ಎತ್ತರದ ಪಂಚಲೋಹದ ರಾಮನ ಮೂರ್ತಿಯನ್ನು ಹೆಚ್ಚುವರಿ ಉಪವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ ಮಾಲಗಿತ್ತಿ ಜಿಲ್ಲಾಡಳಿತದ ಪರವಾಗಿ ಸ್ವೀಕರಿಸಿದರು. 400 ಕೆ.ಜಿ. ತೂಕ ಹೊಂದಿರುವ ಇದು ಅಂದಾಜು ₹ 20 ಲಕ್ಷ ಮೌಲ್ಯ ಹೊಂದಿದೆ.</p>.<p>‘ಜಿಲ್ಲಾಡಳಿತ ಜೊತೆ ಚರ್ಚಿಸಿ ರಾಮನ ಮೂರ್ತಿಯನ್ನು ಎಲ್ಲಿ ಪ್ರತಿಷ್ಠಾಪಿಸಬೇಕು ಎನ್ನುವುದನ್ನು ನಿರ್ಧರಿಸಲಾಗುವುದು’ ಎಂದು ಮಾಲಗಿತ್ತಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗಂಗಾವತಿ (ಕೊಪ್ಪಳ ಜಿಲ್ಲೆ):</strong> ಅಯೋಧ್ಯೆಯಲ್ಲಿ ರಾಮನ ಪ್ರಾಣ ಪ್ರತಿಷ್ಠಾಪನೆ ಕಾರ್ಯ ನಿರ್ವಿಘ್ನವಾಗಿ ನಡೆಯಬೇಕು ಎಂದು ಪ್ರಾರ್ಥಿಸಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭಾನುವಾರ ತಾಲ್ಲೂಕಿನ ಅಂಜನಾದ್ರಿಯಲ್ಲಿ ಹೋಮ ನೆರವೇರಿಸಿದರು.</p>.<p>ಪ್ರಧಾನಿ ನರೇಂದ್ರ ಮೋದಿ ಹೆಸರಲ್ಲಿಯೂ ಪೂಜೆ ಸಲ್ಲಿಸಿದ ಅವರು ‘ದೇಶ ಕಟ್ಟುವ ಪ್ರಧಾನಿ ಕಾಯಕಕ್ಕೆ ನಾವೆಲ್ಲರೂ ಕೈ ಜೋಡಿಸುತ್ತಿದ್ದೇವೆ. ದೇಶದಲ್ಲಿ ಶಾಂತಿ ನೆಲೆಸುವಂತೆ ಪ್ರಾರ್ಥಿಸಿಕೊಂಡಿದ್ದೇನೆ’ ಎಂದರು.</p>.<p>ಈ ವೇಳೆ ಮಾಧ್ಯಮದವರ ಜೊತೆ ಮಾತನಾಡಿ, ‘ಚುನಾವಣೆಯಲ್ಲಿ ಅಲ್ಪಸಂಖ್ಯಾತರನ್ನು ಓಲೈಸಲು ಹಾಗೂ ಅವರನ್ನು ಮತಬ್ಯಾಂಕ್ ಆಗಿ ಬಳಸಿಕೊಳ್ಳಲು ಕಾಂಗ್ರೆಸ್ ಶ್ರೀರಾಮನನ್ನು ವಿರೋಧಿಸುತ್ತಿದೆ. ಬಯಲಲ್ಲಿದ್ದ ಶ್ರೀರಾಮ ಭವ್ಯ ಮಂದಿರಕ್ಕೆ ಬರಬೇಕು ಎನ್ನುವುದು ಪ್ರಧಾನಿ ಅವರ ಸಂಕಲ್ಪವಾಗಿತ್ತು. ಅಂದುಕೊಂಡಂತೆ ಈಗ ಎಲ್ಲವೂ ಆಗಿದೆ’ ಎಂದರು.</p>.<p><strong>ವಿಶೇಷ ಪೂಜೆ:</strong> ರಾಮಮಂದಿರ ಉದ್ಘಾಟನೆಯಾಗಲಿರುವ ಹಿನ್ನೆಲೆಯಲ್ಲಿ ಸೋಮವಾರ ಅಂಜನಾದ್ರಿಯಲ್ಲಿ ವಿವಿಧ ಸಂಘಟನೆಗಳು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿವೆ.</p>.<p>ತ್ರಿಕಾಲ ಪೂಜೆ, ರವಿಶಂಕರ ಗುರೂಜಿ ಅವರಿಂದ ರಾಮನ ಸ್ಮರಣೆ, ಅಯೋಧ್ಯೆಯಲ್ಲಿ ನಡೆಯುವ ಕಾರ್ಯಕ್ರಮಗಳನ್ನು ನೇರವಾಗಿ ತೋರಿಸಲು ಎಲ್ಇಡಿ ಪರದೆಯ ವ್ಯವಸ್ಥೆ, ಸಂಜೆ ದೀಪೋತ್ಸವ ಹಾಗೂ ರಾಮನಿಗೆ ಸಂಬಂಧಿಸಿದ ನೃತ್ಯಗಳ ಮೂಲಕ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ.</p>.<p><strong>ರಾಮನ ಮೂರ್ತಿ:</strong> ಬೆಂಗಳೂರಿನ ರಾಮಚಂದ್ರಪ್ಪ ಎಂಬ ಭಕ್ತರು ನೀಡಿದ ಒಂಬತ್ತು ಇಂಚು ಎತ್ತರದ ಪಂಚಲೋಹದ ರಾಮನ ಮೂರ್ತಿಯನ್ನು ಹೆಚ್ಚುವರಿ ಉಪವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ ಮಾಲಗಿತ್ತಿ ಜಿಲ್ಲಾಡಳಿತದ ಪರವಾಗಿ ಸ್ವೀಕರಿಸಿದರು. 400 ಕೆ.ಜಿ. ತೂಕ ಹೊಂದಿರುವ ಇದು ಅಂದಾಜು ₹ 20 ಲಕ್ಷ ಮೌಲ್ಯ ಹೊಂದಿದೆ.</p>.<p>‘ಜಿಲ್ಲಾಡಳಿತ ಜೊತೆ ಚರ್ಚಿಸಿ ರಾಮನ ಮೂರ್ತಿಯನ್ನು ಎಲ್ಲಿ ಪ್ರತಿಷ್ಠಾಪಿಸಬೇಕು ಎನ್ನುವುದನ್ನು ನಿರ್ಧರಿಸಲಾಗುವುದು’ ಎಂದು ಮಾಲಗಿತ್ತಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>