<p>ಯಲಬುರ್ಗಾ: ‘ಸಾವಿರಾರು ವರ್ಷ ಇತಿಹಾಸವುಳ್ಳ ಆಯುರ್ವೇದ ಚಿಕಿತ್ಸಾ ಪದ್ಧತಿಯು ಹೆಚ್ಚು ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಿದೆ. ಈ ಪದ್ಧತಿಯನ್ನು ಅಳವಡಿಸಿಕೊಳ್ಳುವ ಮೂಲಕ ಉತ್ತಮ ಆರೋಗ್ಯ ಕಾಪಾಡಿಕೊಂಡು ಧೀರ್ಘಕಾಲದವರೆಗೆ ನೆಮ್ಮದಿಯಿಂದ ಜೀವನ ನಡೆಸಲು ಸಾಧ್ಯವಿದೆ’ ಎಂದು ಪಾರಂಪಾರಿಕ ವೈದ್ಯ ಹನಮಂತ ಮಳಲಿ ಹೇಳಿದರು.</p>.<p>ಪಟ್ಟಣದ ಎಸ್.ಎ.ನಿಂಗೋಜಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ‘ನನ್ನ ಆರೋಗ್ಯ ನನ್ನ ಕೈಯಲ್ಲಿ’ ಆರೋಗ್ಯ ಅರಿವು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ಆರೋಗ್ಯ ಸುಧಾರಣೆಗೆ ವೈಯಕ್ತಿಕವಾಗಿ ವಿಶೇಷ ಗಮನ ಕೊಡುವುದು ಮುಖ್ಯವಾಗಿದೆ. ಯಾಂತ್ರಿಕ ಜೀವನಶೈಲಿ ಮನುಷ್ಯನ ಆರೋಗ್ಯಕ್ಕೆ ವ್ಯತಿರಿಕ್ತ ಪರಿಣಾಮ ಬೀರುತ್ತಿರುವುದರಿಂದ ಅನಾರೋಗ್ಯ ಸಮಾಜ ನಿರ್ಮಾಣಗೊಳ್ಳುತ್ತಿರುವುದು ಆತಂಕದ ಸಂಗತಿಯಾಗಿದೆ. ಇದರ ನಿಯಂತ್ರಣಕ್ಕೆ ತ್ವರಿತ ಕ್ರಮ ಕೈಗೊಳ್ಳಲು ಪ್ರತಿಯೊಬ್ಬರೂ ಮುಂದಾಗಬೇಕಾಗಿದೆ’ ಎಂದರು.</p>.<p>‘ಪೂರ್ವಜರು ನೈಸರ್ಗಿಕವಾಗಿ ದೊರೆಯುವ ಔಷಧ ಗುಣಗಳುಳ್ಳ ವನಸ್ಪತಿಗಳನ್ನು ಸರಿಯಾಗಿ ಬಳಸಿಕೊಳ್ಳುವ ಮೂಲಕ ನೂರಾರು ವರ್ಷಗಳ ಕಾಲ ಬದುಕಿ ಬಾಳುತ್ತಿದ್ದರು. ಈಗ ಮತ್ತೆ ಅದೇ ಪದ್ಧತಿಯು ಹೆಚ್ಚು ಜನಪ್ರಿಯವಾಗುತ್ತಿದೆ’ ಎಂದು ಅಭಿಪ್ರಾಯಪಟ್ಟರು.</p>.<p>ಸಂಸ್ಥೆಯ ಅಧ್ಯಕ್ಷ ಎಸ್.ಎ. ನಿಂಗೋಜಿ ಮಾತನಾಡಿ, ‘ನಿಸರ್ಗ ಚಿಕಿತ್ಸೆ ಎಂದೇ ಕರೆಯಲ್ಪಡುವ ಆಯುರ್ವೇದ ಪದ್ಧತಿಯು ದೇಶಿ ಸಂಸ್ಕೃತಿಯ ಒಂದು ಭಾಗವಾಗಿದೆ. ಹಿಂದಿನ ವೈಭವ ಮತ್ತೆ ಮರುಕಳಿಸುವತ್ತ ಆಯುರ್ವೇದಕ್ಕೆ ಮತ್ತೆ ಹೆಚ್ಚಿನ ಮಹತ್ವದ ದೊರೆಯುತ್ತಿದೆ’ ಎಂದರು.</p>.<p>ರತ್ನಮ್ಮ ನಿಂಗೋಜಿ ಅಧ್ಯಕ್ಷತೆ ವಹಿಸಿದ್ದರು. ವರ್ತಕ ಸಂಗಣ್ಣ ಟೆಂಗಿನಕಾಯಿ, ಸಂಸ್ಥೆಯ ನಿರ್ದೇಶಕ ವೀರಣ್ಣ ನಿಂಗೋಜಿ, ಸಾಹಿತಿ ಕೆ.ಬಿ.ಬ್ಯಾಳಿ, ಗೋಪಾಲ ಬಿನ್ನಾಳ, ವಿ.ವಿ ಪತ್ತಾರ, ಮಲ್ಲನಗೌಡ ಮಾಸಕಟ್ಟಿ, ರಾಘವೇಂದ್ರ ಬಿ, ಅಂದಪ್ಪ ಬಂಡಿಹಾಳ, ವಿರೇಶ ಕೊಣ್ಣೂರ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಯಲಬುರ್ಗಾ: ‘ಸಾವಿರಾರು ವರ್ಷ ಇತಿಹಾಸವುಳ್ಳ ಆಯುರ್ವೇದ ಚಿಕಿತ್ಸಾ ಪದ್ಧತಿಯು ಹೆಚ್ಚು ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಿದೆ. ಈ ಪದ್ಧತಿಯನ್ನು ಅಳವಡಿಸಿಕೊಳ್ಳುವ ಮೂಲಕ ಉತ್ತಮ ಆರೋಗ್ಯ ಕಾಪಾಡಿಕೊಂಡು ಧೀರ್ಘಕಾಲದವರೆಗೆ ನೆಮ್ಮದಿಯಿಂದ ಜೀವನ ನಡೆಸಲು ಸಾಧ್ಯವಿದೆ’ ಎಂದು ಪಾರಂಪಾರಿಕ ವೈದ್ಯ ಹನಮಂತ ಮಳಲಿ ಹೇಳಿದರು.</p>.<p>ಪಟ್ಟಣದ ಎಸ್.ಎ.ನಿಂಗೋಜಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ‘ನನ್ನ ಆರೋಗ್ಯ ನನ್ನ ಕೈಯಲ್ಲಿ’ ಆರೋಗ್ಯ ಅರಿವು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ಆರೋಗ್ಯ ಸುಧಾರಣೆಗೆ ವೈಯಕ್ತಿಕವಾಗಿ ವಿಶೇಷ ಗಮನ ಕೊಡುವುದು ಮುಖ್ಯವಾಗಿದೆ. ಯಾಂತ್ರಿಕ ಜೀವನಶೈಲಿ ಮನುಷ್ಯನ ಆರೋಗ್ಯಕ್ಕೆ ವ್ಯತಿರಿಕ್ತ ಪರಿಣಾಮ ಬೀರುತ್ತಿರುವುದರಿಂದ ಅನಾರೋಗ್ಯ ಸಮಾಜ ನಿರ್ಮಾಣಗೊಳ್ಳುತ್ತಿರುವುದು ಆತಂಕದ ಸಂಗತಿಯಾಗಿದೆ. ಇದರ ನಿಯಂತ್ರಣಕ್ಕೆ ತ್ವರಿತ ಕ್ರಮ ಕೈಗೊಳ್ಳಲು ಪ್ರತಿಯೊಬ್ಬರೂ ಮುಂದಾಗಬೇಕಾಗಿದೆ’ ಎಂದರು.</p>.<p>‘ಪೂರ್ವಜರು ನೈಸರ್ಗಿಕವಾಗಿ ದೊರೆಯುವ ಔಷಧ ಗುಣಗಳುಳ್ಳ ವನಸ್ಪತಿಗಳನ್ನು ಸರಿಯಾಗಿ ಬಳಸಿಕೊಳ್ಳುವ ಮೂಲಕ ನೂರಾರು ವರ್ಷಗಳ ಕಾಲ ಬದುಕಿ ಬಾಳುತ್ತಿದ್ದರು. ಈಗ ಮತ್ತೆ ಅದೇ ಪದ್ಧತಿಯು ಹೆಚ್ಚು ಜನಪ್ರಿಯವಾಗುತ್ತಿದೆ’ ಎಂದು ಅಭಿಪ್ರಾಯಪಟ್ಟರು.</p>.<p>ಸಂಸ್ಥೆಯ ಅಧ್ಯಕ್ಷ ಎಸ್.ಎ. ನಿಂಗೋಜಿ ಮಾತನಾಡಿ, ‘ನಿಸರ್ಗ ಚಿಕಿತ್ಸೆ ಎಂದೇ ಕರೆಯಲ್ಪಡುವ ಆಯುರ್ವೇದ ಪದ್ಧತಿಯು ದೇಶಿ ಸಂಸ್ಕೃತಿಯ ಒಂದು ಭಾಗವಾಗಿದೆ. ಹಿಂದಿನ ವೈಭವ ಮತ್ತೆ ಮರುಕಳಿಸುವತ್ತ ಆಯುರ್ವೇದಕ್ಕೆ ಮತ್ತೆ ಹೆಚ್ಚಿನ ಮಹತ್ವದ ದೊರೆಯುತ್ತಿದೆ’ ಎಂದರು.</p>.<p>ರತ್ನಮ್ಮ ನಿಂಗೋಜಿ ಅಧ್ಯಕ್ಷತೆ ವಹಿಸಿದ್ದರು. ವರ್ತಕ ಸಂಗಣ್ಣ ಟೆಂಗಿನಕಾಯಿ, ಸಂಸ್ಥೆಯ ನಿರ್ದೇಶಕ ವೀರಣ್ಣ ನಿಂಗೋಜಿ, ಸಾಹಿತಿ ಕೆ.ಬಿ.ಬ್ಯಾಳಿ, ಗೋಪಾಲ ಬಿನ್ನಾಳ, ವಿ.ವಿ ಪತ್ತಾರ, ಮಲ್ಲನಗೌಡ ಮಾಸಕಟ್ಟಿ, ರಾಘವೇಂದ್ರ ಬಿ, ಅಂದಪ್ಪ ಬಂಡಿಹಾಳ, ವಿರೇಶ ಕೊಣ್ಣೂರ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>