<p><strong>ಅಳವಂಡಿ:</strong> ‘ಕಟಾವಿಗೆ ಬಂದಿದ್ದ ಬಾಳೆ ಬೆಳೆಗೆ ಬೆಂಕಿ ಹತ್ತಿ ಪರಿಣಾಮ 2 ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಬಾಳೆ ಬೆಳೆವು ಸುಟ್ಟು ಭಸ್ಮವಾಗಿದೆ.</p>.<p>ಕೊಪ್ಪಳ ತಾಲ್ಲೂಕಿನ ಅಳವಂಡಿ ಹೋಬಳಿಯ ಬೇಳೂರು ಗ್ರಾಮದ ರೈತ ಪಕೀರಪ್ಪ ಸುಣಗಾರ ಅವರ ಎರಡು ಎಕರೆ ಜಮೀನಿನಲ್ಲಿ ಬೆಳೆದ ಬಾಳೆ ಸಂಪೂರ್ಣ ಭಸ್ಮವಾಗಿದೆ.</p>.<p>ಸುಮಾರು ₹ 5 ಲಕ್ಷ ಖರ್ಚು ಮಾಡಿ ಬೆಳೆದಿದ್ದ ಬಾಳೆ ಬೆಳೆ ಉತ್ತಮ ಫಸಲು ನೀಡುತ್ತದೆ ಎಂಬ ನಿರೀಕ್ಷೆಯಲ್ಲಿದ್ದ ರೈತನ ಪರಿಸ್ಥಿತಿ ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿದೆ.</p>.<p>ಬಾಳೆ ತೋಟ ಮಾತ್ರವಲ್ಲದೆ ಬಾಳೆ ತೋಟದಲ್ಲಿ ಅಳವಡಿಸಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಡ್ರಿಪ್ ಹಾಗೂ ಸ್ಪ್ರಿಂಕ್ಲರ್ಗಳು ಬೆಂಕಿಯಲ್ಲಿ ಕರಕಲಾಗಿವೆ. ಸ್ಥಳಕ್ಕೆ ಕೊಪ್ಪಳದ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ದೌಡಾಯಿಸಿ ಬೆಂಕಿ ನಂದಿಸಿದರು.</p>.<p>‘ಬಾಳೆ ಬೆಳೆಗೆ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಸುಮಾರು ಹದಿನೈದು ಲಕ್ಷ ರುಪಾಯಿ ಲಾಭದ ನೀರೀಕ್ಷೆಯಲ್ಲಿದ್ದೆ. ಆದರೆ ಬೆಳೆಗೆ ಯಾರೋ ಅಪರಿಚಿತರು ಬೆಂಕಿ ಹಚ್ಚಿದ ಪರಿಣಾಮ ಸಂಪೂರ್ಣ ಬೆಳೆ ಸುಟ್ಟು ಹೋಗಿದೆ. ಈ ಬಗ್ಗೆ ಸಂಬಂಧಪಟ್ಟ ತೋಟಗಾರಿಕೆ ಇಲಾಖೆ ಅಧಿಕಾರಿಗಳು ನಷ್ಟಕ್ಕೊಳಗಾದ ತೋಟವನ್ನು ಪರಿಶೀಲನೆ ನಡೆಸಿ ಸೂಕ್ತ ಪರಿಹಾರ ಒದಗಿಸಬೇಕು’ ಎಂದು ರೈತ ಪಕೀರಪ್ಪ ಸುಣಗಾರ ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಳವಂಡಿ:</strong> ‘ಕಟಾವಿಗೆ ಬಂದಿದ್ದ ಬಾಳೆ ಬೆಳೆಗೆ ಬೆಂಕಿ ಹತ್ತಿ ಪರಿಣಾಮ 2 ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಬಾಳೆ ಬೆಳೆವು ಸುಟ್ಟು ಭಸ್ಮವಾಗಿದೆ.</p>.<p>ಕೊಪ್ಪಳ ತಾಲ್ಲೂಕಿನ ಅಳವಂಡಿ ಹೋಬಳಿಯ ಬೇಳೂರು ಗ್ರಾಮದ ರೈತ ಪಕೀರಪ್ಪ ಸುಣಗಾರ ಅವರ ಎರಡು ಎಕರೆ ಜಮೀನಿನಲ್ಲಿ ಬೆಳೆದ ಬಾಳೆ ಸಂಪೂರ್ಣ ಭಸ್ಮವಾಗಿದೆ.</p>.<p>ಸುಮಾರು ₹ 5 ಲಕ್ಷ ಖರ್ಚು ಮಾಡಿ ಬೆಳೆದಿದ್ದ ಬಾಳೆ ಬೆಳೆ ಉತ್ತಮ ಫಸಲು ನೀಡುತ್ತದೆ ಎಂಬ ನಿರೀಕ್ಷೆಯಲ್ಲಿದ್ದ ರೈತನ ಪರಿಸ್ಥಿತಿ ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿದೆ.</p>.<p>ಬಾಳೆ ತೋಟ ಮಾತ್ರವಲ್ಲದೆ ಬಾಳೆ ತೋಟದಲ್ಲಿ ಅಳವಡಿಸಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಡ್ರಿಪ್ ಹಾಗೂ ಸ್ಪ್ರಿಂಕ್ಲರ್ಗಳು ಬೆಂಕಿಯಲ್ಲಿ ಕರಕಲಾಗಿವೆ. ಸ್ಥಳಕ್ಕೆ ಕೊಪ್ಪಳದ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ದೌಡಾಯಿಸಿ ಬೆಂಕಿ ನಂದಿಸಿದರು.</p>.<p>‘ಬಾಳೆ ಬೆಳೆಗೆ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಸುಮಾರು ಹದಿನೈದು ಲಕ್ಷ ರುಪಾಯಿ ಲಾಭದ ನೀರೀಕ್ಷೆಯಲ್ಲಿದ್ದೆ. ಆದರೆ ಬೆಳೆಗೆ ಯಾರೋ ಅಪರಿಚಿತರು ಬೆಂಕಿ ಹಚ್ಚಿದ ಪರಿಣಾಮ ಸಂಪೂರ್ಣ ಬೆಳೆ ಸುಟ್ಟು ಹೋಗಿದೆ. ಈ ಬಗ್ಗೆ ಸಂಬಂಧಪಟ್ಟ ತೋಟಗಾರಿಕೆ ಇಲಾಖೆ ಅಧಿಕಾರಿಗಳು ನಷ್ಟಕ್ಕೊಳಗಾದ ತೋಟವನ್ನು ಪರಿಶೀಲನೆ ನಡೆಸಿ ಸೂಕ್ತ ಪರಿಹಾರ ಒದಗಿಸಬೇಕು’ ಎಂದು ರೈತ ಪಕೀರಪ್ಪ ಸುಣಗಾರ ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>