ರಾಮಮಂದಿರ ಕುರಿತು ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಕುಮಾರಸ್ವಾಮಿ ಹೇಳಿಕೆಗೆಪ್ರತಿಕ್ರಿಯಿಸಿದ ಅವರು, 'ಯಾರಾದರೂ ಅವಿದ್ಯಾವಂತರು ಮಾತನಾಡಿದರೆ ಉತ್ತರ ಕೊಡಬಹುದಿತ್ತು.ವಿದ್ಯಾವಂತರಾಗಿ ಮಾತಾಡಿದ್ರೆ ಹೇಗೆ.ಸುಪ್ರೀಂ ಕೋರ್ಟ್ ತೀರ್ಪಿನ ನಂತರವೂ ಕೂಡಾ ಅದು ವಿವಾದಿತ ಅನ್ನೋದು ಆಶ್ಚರ್ಯ.ಇಂತಹ ವಿಷಯದಲ್ಲಿ ರಾಜಕೀಯ ಮಾಡಿ ಮತದಾರರನ್ನು ಅಡ್ಡದಾರಿಗೆ ತೆಗೆದುಕೊಂಡು ಹೋಗಿದ್ದಕ್ಕೆ ಕಾಂಗ್ರೆಸ್ಗೆ ಇಂತಹ ದುರ್ಗತಿ ಬಂದಿದೆ ಎಂದು ಟೀಕಿಸಿದರು.